<p><strong>ಮೈಸೂರು: </strong>ಅನ್ಯ ಜಾತಿ ಪುರುಷನೊಂದಿಗೆ ಮದುವೆಯಾದ ಸಹೋದರಿಯೊಂದಿಗೆ ಜಗಳ ತೆಗೆದು ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮಹದೇವನನ್ನು ಪೊಲೀಸರು ಬುಧವಾರ ಮಧ್ಯರಾತ್ರಿ ಬಂಧಿಸಿದ್ದಾರೆ.<br /> ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುವಾಗ ಮಹದೇವನನ್ನು ಪೊಲೀಸರು ಬಂಧಿಸಿ ನಂತರ ನಜರ್ಬಾದ್ ಪೊಲೀಸರ ವಶಕ್ಕೆ ನೀಡಿದರು. ಮಹದೇವನನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, ಐದು ದಿನಗಳವರೆಗೆ ಪೊಲೀಸ್ ವಶಕ್ಕೆ ಪಡೆಯಲಾಯಿತು.<br /> <br /> `ಕೊಲೆ ನಡೆದ ದಿನದಂದು ಹುಣಸೂರಿನ ಶಿವ ಎಂಬಾತ ತನ್ನ ಜೊತೆಗಿದ್ದ~ ಎಂದು ಮಹದೇವ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. `ಆದರೆ ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬುದರ ಬಗ್ಗೆ ಇನ್ನೂ ಸುಳಿವು ನೀಡಿಲ್ಲ, ವಿಚಾರಣೆ ಮುಂದುವರಿದಿದೆ~ ಎಂದು ಪೊಲೀಸರು ತಿಳಿಸಿದರು. <br /> <br /> ಚಾಮರಾಜನಗರ ತಾಲ್ಲೂಕಿನ ಕುದೇರು ಸರ್ಕಾರಿ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ಡಿ.ಕೆ.ಸ್ಮೃತಿ ವಾಸವಿದ್ದ ಆಲನಹಳ್ಳಿ ಬಡಾವಣೆಯ ಬಾಡಿಗೆ ಮನೆಗೆ ಕಳೆದ ಸೋಮವಾರ ಮಧ್ಯರಾತ್ರಿ ತೆರಳಿದ ಮಹದೇವ ಮದುವೆ ವಿಚಾರವಾಗಿ ಜಗಳ ತೆಗೆದು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ.<br /> ತುಮಕೂರು ವಿಶ್ವವಿದ್ಯಾನಿಲಯದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕರಾದ ಸುದೀಪ್ಕುಮಾರ್ ಮತ್ತು ಸ್ಮೃತಿ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಅನ್ಯ ಜಾತಿ ಪುರುಷನೊಂದಿಗೆ ಮದುವೆಯಾದ ಸಹೋದರಿಯೊಂದಿಗೆ ಜಗಳ ತೆಗೆದು ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮಹದೇವನನ್ನು ಪೊಲೀಸರು ಬುಧವಾರ ಮಧ್ಯರಾತ್ರಿ ಬಂಧಿಸಿದ್ದಾರೆ.<br /> ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುವಾಗ ಮಹದೇವನನ್ನು ಪೊಲೀಸರು ಬಂಧಿಸಿ ನಂತರ ನಜರ್ಬಾದ್ ಪೊಲೀಸರ ವಶಕ್ಕೆ ನೀಡಿದರು. ಮಹದೇವನನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, ಐದು ದಿನಗಳವರೆಗೆ ಪೊಲೀಸ್ ವಶಕ್ಕೆ ಪಡೆಯಲಾಯಿತು.<br /> <br /> `ಕೊಲೆ ನಡೆದ ದಿನದಂದು ಹುಣಸೂರಿನ ಶಿವ ಎಂಬಾತ ತನ್ನ ಜೊತೆಗಿದ್ದ~ ಎಂದು ಮಹದೇವ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. `ಆದರೆ ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾನೆ ಎಂಬುದರ ಬಗ್ಗೆ ಇನ್ನೂ ಸುಳಿವು ನೀಡಿಲ್ಲ, ವಿಚಾರಣೆ ಮುಂದುವರಿದಿದೆ~ ಎಂದು ಪೊಲೀಸರು ತಿಳಿಸಿದರು. <br /> <br /> ಚಾಮರಾಜನಗರ ತಾಲ್ಲೂಕಿನ ಕುದೇರು ಸರ್ಕಾರಿ ಪದವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ಡಿ.ಕೆ.ಸ್ಮೃತಿ ವಾಸವಿದ್ದ ಆಲನಹಳ್ಳಿ ಬಡಾವಣೆಯ ಬಾಡಿಗೆ ಮನೆಗೆ ಕಳೆದ ಸೋಮವಾರ ಮಧ್ಯರಾತ್ರಿ ತೆರಳಿದ ಮಹದೇವ ಮದುವೆ ವಿಚಾರವಾಗಿ ಜಗಳ ತೆಗೆದು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ.<br /> ತುಮಕೂರು ವಿಶ್ವವಿದ್ಯಾನಿಲಯದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕರಾದ ಸುದೀಪ್ಕುಮಾರ್ ಮತ್ತು ಸ್ಮೃತಿ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>