<p>ಕೊಳ್ಳೇಗಾಲ: ಸ್ವಚ್ಛತೆ ಇಲ್ಲದೆ ಮಡುಗಟ್ಟಿ ನಿಂತಿರುವ ಚರಂಡಿ, ನೀರಿನ ಸಂಪರ್ಕ ಕಾಣದ ಸ್ಮಾರಕವಾಗಿ ನಿಂತ ನೀರಿನ ತೊಂಬೆ. ಇದು ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದ ದಲಿತರ ಬಡಾವಣೆ ಚಿತ್ರಣ.<br /> <br /> ಕೊಳ್ಳೇಗಾಲ ತಾಲ್ಲೂಕಿನಲ್ಲಿ ಹಿಂದೆಂದೂ ಕಂಡರಿಯದ ಅಂತರ್ಜಲ ಕುಸಿತದ ಪರಿಣಾಮ ಕೊಳವೆಬಾವಿಗಳು ಹಾಗೂ ಕಿರುನೀರು ಸರಬರಾಜು ತೊಂಬೆಗಳು ಸ್ಮಾರಕವಾಗಿ ನಿಂತಿವೆ.<br /> <br /> ಹನೂರಿಗೆ ಪೂರೈಸುವ ಕಾವೇರಿ ನೀರು ಕೊಳಾಯಿಯಿಂದ ಗ್ರಾಮಕ್ಕೆ ನೀರು ಪೂರೈಸ ಲಾಗುತ್ತಿದ್ದು ಜನರು ರಸ್ತೆ ಮಧ್ಯದಲ್ಲೇ ಗುಂಡಿಗಳನ್ನು ತೆಗೆದು ನೀರು ಹಿಡಿಯಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.<br /> <br /> ಈ ಮಧ್ಯೆ ವಿದ್ಯುತ್ ಪೂರೈಕೆಯಲ್ಲಿಯೂ ಭಾರಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಮಹಿಳೆಯರು ನೀರಿಗಾಗಿ ಅಕ್ಕಪಕ್ಕದ ಜಮೀನುಗಳಲ್ಲಿ ನೀರಿಗಾಗಿ ಅಲೆದಾಡುವಂತಾಗಿದೆ.<br /> <br /> ಗ್ರಾಮದ ಚರಂಡಿಯಲ್ಲಿ ಸಮರ್ಪಕ ಸ್ವಚ್ಛತೆ ಇಲ್ಲದೆ ಚರಂಡಿಗಳು ತ್ಯಾಜ್ಯಗಳಿಂದ ಮಡುಗಟ್ಟಿ ನಿಂತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಆಡಳಿತ ನಿರ್ಲಕ್ಷ್ಯ ವಹಿಸಿದೆ ಎಂಬುದು ಇಲ್ಲಿನ ನಿವಾಸಿಗಳ ದೂರು.<br /> <br /> ಗ್ರಾಮಕ್ಕೆ ಕುಡಿಯುವ ನೀರಿಗೆ ₨60ಲಕ್ಷ ಅಂದಾಜು ವೆಚ್ಚದಲ್ಲಿ ದೊಡ್ಡ ಹಾಗೂ ಮಿನಿ ಟ್ಯಾಂಕ್ ನಿರ್ಮಿಸಲಾಗುತ್ತಿದೆ. ಅಂತರ್ಜಲ ಕುಸಿತದಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದು ಜಿ.ಪಂ. ಉಪಾಧ್ಯಕ್ಷ ಡಿ. ದೇವರಾಜು ತಿಳಿಸಿದ್ದಾರೆ.<br /> <br /> ಗ್ರಾಮದ ಚರಂಡಿ ಸ್ವಚ್ಛತೆ ಹಾಗೂ ಇತರೆ ಮೂಲ ಸೌಲಭ್ಯಗಳ ಪೂರೈಕೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸು ವುದಾಗಿ ಹೇಳಿದ್ದಾರೆ.<br /> <br /> ಗ್ರಾಮದ ಬೀದಿಗಳ ಚರಂಡಿ ಹಾಗೂ ರಸ್ತೆಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ಪೂರೈಕೆಗೆ ಈಗಲಾದರೂ ಸಂಬಂಧಪಟ್ಟವರು ಗಮನಹರಿಸಿ ಕೆಲಸ ಮಾಡಲಿ ಎಂಬುದು ಇಲ್ಲಿನ ಮಹಿಳಾ ಸಂಘಗಳ ಸದಸ್ಯರ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಸ್ವಚ್ಛತೆ ಇಲ್ಲದೆ ಮಡುಗಟ್ಟಿ ನಿಂತಿರುವ ಚರಂಡಿ, ನೀರಿನ ಸಂಪರ್ಕ ಕಾಣದ ಸ್ಮಾರಕವಾಗಿ ನಿಂತ ನೀರಿನ ತೊಂಬೆ. ಇದು ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದ ದಲಿತರ ಬಡಾವಣೆ ಚಿತ್ರಣ.<br /> <br /> ಕೊಳ್ಳೇಗಾಲ ತಾಲ್ಲೂಕಿನಲ್ಲಿ ಹಿಂದೆಂದೂ ಕಂಡರಿಯದ ಅಂತರ್ಜಲ ಕುಸಿತದ ಪರಿಣಾಮ ಕೊಳವೆಬಾವಿಗಳು ಹಾಗೂ ಕಿರುನೀರು ಸರಬರಾಜು ತೊಂಬೆಗಳು ಸ್ಮಾರಕವಾಗಿ ನಿಂತಿವೆ.<br /> <br /> ಹನೂರಿಗೆ ಪೂರೈಸುವ ಕಾವೇರಿ ನೀರು ಕೊಳಾಯಿಯಿಂದ ಗ್ರಾಮಕ್ಕೆ ನೀರು ಪೂರೈಸ ಲಾಗುತ್ತಿದ್ದು ಜನರು ರಸ್ತೆ ಮಧ್ಯದಲ್ಲೇ ಗುಂಡಿಗಳನ್ನು ತೆಗೆದು ನೀರು ಹಿಡಿಯಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.<br /> <br /> ಈ ಮಧ್ಯೆ ವಿದ್ಯುತ್ ಪೂರೈಕೆಯಲ್ಲಿಯೂ ಭಾರಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಮಹಿಳೆಯರು ನೀರಿಗಾಗಿ ಅಕ್ಕಪಕ್ಕದ ಜಮೀನುಗಳಲ್ಲಿ ನೀರಿಗಾಗಿ ಅಲೆದಾಡುವಂತಾಗಿದೆ.<br /> <br /> ಗ್ರಾಮದ ಚರಂಡಿಯಲ್ಲಿ ಸಮರ್ಪಕ ಸ್ವಚ್ಛತೆ ಇಲ್ಲದೆ ಚರಂಡಿಗಳು ತ್ಯಾಜ್ಯಗಳಿಂದ ಮಡುಗಟ್ಟಿ ನಿಂತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಆಡಳಿತ ನಿರ್ಲಕ್ಷ್ಯ ವಹಿಸಿದೆ ಎಂಬುದು ಇಲ್ಲಿನ ನಿವಾಸಿಗಳ ದೂರು.<br /> <br /> ಗ್ರಾಮಕ್ಕೆ ಕುಡಿಯುವ ನೀರಿಗೆ ₨60ಲಕ್ಷ ಅಂದಾಜು ವೆಚ್ಚದಲ್ಲಿ ದೊಡ್ಡ ಹಾಗೂ ಮಿನಿ ಟ್ಯಾಂಕ್ ನಿರ್ಮಿಸಲಾಗುತ್ತಿದೆ. ಅಂತರ್ಜಲ ಕುಸಿತದಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದು ಜಿ.ಪಂ. ಉಪಾಧ್ಯಕ್ಷ ಡಿ. ದೇವರಾಜು ತಿಳಿಸಿದ್ದಾರೆ.<br /> <br /> ಗ್ರಾಮದ ಚರಂಡಿ ಸ್ವಚ್ಛತೆ ಹಾಗೂ ಇತರೆ ಮೂಲ ಸೌಲಭ್ಯಗಳ ಪೂರೈಕೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸು ವುದಾಗಿ ಹೇಳಿದ್ದಾರೆ.<br /> <br /> ಗ್ರಾಮದ ಬೀದಿಗಳ ಚರಂಡಿ ಹಾಗೂ ರಸ್ತೆಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ಪೂರೈಕೆಗೆ ಈಗಲಾದರೂ ಸಂಬಂಧಪಟ್ಟವರು ಗಮನಹರಿಸಿ ಕೆಲಸ ಮಾಡಲಿ ಎಂಬುದು ಇಲ್ಲಿನ ಮಹಿಳಾ ಸಂಘಗಳ ಸದಸ್ಯರ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>