<p><strong>ಬಾಗೇಪಲ್ಲಿ: </strong>ತಾಲ್ಲೂಕಿನ ದೇವರಗುಡಿಪಲ್ಲಿ (ಗಡಿದಂ) ಗ್ರಾಮ ಪಂಚಾಯಿತಿ ಕಚೇರಿ ಹಿಂಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ ಎದುರಿನ ಚರಂಡಿಯಿಂದ ಶಾಲಾ ವಿದ್ಯಾರ್ಥಿಗಳು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಚರಂಡಿಯ ಅಸಹನೀಯ ದುರ್ನಾತ ಒಂದೆಡೆಯಾದರೆ, ಅದನ್ನು ದಾಟಲು ಹರಸಾಹಸ ಪಡಬೇಕಾಗಿರುವುದು ಇನ್ನೊಂದೆಡೆ ಕಂಡುಬರುತ್ತದೆ.<br /> <br /> ಆದರೆ ವಿದ್ಯಾರ್ಥಿಗಳು ಮಲೀನ ವಾತಾವರಣದಲ್ಲೆ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ಎಂಬ ಮಾತಿನಂತೆ ಮಕ್ಕಳನ್ನು ಆಹ್ವಾನಿಸುವ ಶಾಲೆಯ ಮುಂಭಾಗದಲ್ಲೇ ಚರಂಡಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಸೇರಿದಂತೆ ಪ್ರತಿಯೊಬ್ಬರು ‘ಸರ್ಕಸ್’ ಮಾಡಬೇಕಾದ ಅನಿವಾರ್ಯತೆ ಇಲ್ಲಿದೆ. <br /> <br /> ಶಾಲೆಯ ನಾಲ್ಕು ದಿಕ್ಕುಗಳಲ್ಲಿ ಚರಂಡಿ ನಿರ್ಮಿಸಲಾಗಿದ್ದು, ಸುತ್ತಮುತ್ತಲಿನ ವಾತಾವರಣವೂ ಸಹ ಮಲೀನಗೊಳ್ಳುತ್ತಿದೆ. ಬೇಕಾಬಿಟ್ಟಿ ಘನ ತ್ಯಾಜ್ಯವಸ್ತು ಎಸೆಯುತ್ತಿರುವುದರಿಂದ ಚರಂಡಿಯಲ್ಲಿ ಹೂಳು ತುಂಬಿಕೊಳ್ಳುತ್ತಿದೆ. ಇದರಿಂದ ಮಲೀನ ನೀರು ಸುಗಮವಾಗಿ ಹರಿಯಲು ಅವಕಾಶವೇ ಇಲ್ಲದಾಗಿದೆ.<br /> <br /> ಶಾಲೆ ಪಕ್ಕದಲ್ಲೇ ಬಿಸಿಯೂಟದ ಕೊಠಡಿ, ಮುಂದುವರಿಕೆ ಶಿಕ್ಷಣ ಕೇಂದ್ರ, ಅಂಗನವಾಡಿ ಕೇಂದ್ರ ಮತ್ತು ಸಾಕ್ಷರತಾ ಕೇಂದ್ರ ನಿರ್ಮಿಸಲಾಗಿದೆ. ಚಿಕ್ಕಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇದರಿಂದ ಅವರು ಅನಾರೋಗ್ಯಕ್ಕೀಡಾಗುವ ಸಾಧ್ಯತೆ ಹೆಚ್ಚಿರುತ್ತದೆ ಎನ್ನುವುದು ಗ್ರಾಮಸ್ಥರ ಆತಂಕ.<br /> <br /> ಗ್ರಾಮದಲ್ಲಿ ಸ್ವಚ್ಛ ಪರಿಸರ ಕಾಯ್ದಕೊಳ್ಳಲು ಮತ್ತು ಚರಂಡಿ ನೀರು ಸರಾಗವಾಗಿ ಹರಿಯಲು ಸಂಬಂಧಪಟ್ಟವರು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಬೃಹದಾಕಾರದ ಚಪ್ಪಡಿ ಕಲ್ಲುಗಳನ್ನು ಚರಂಡಿ ಮೇಲೆ ಹಾಕುವ ಮೂಲಕ ಶಾಲೆಯ ಸುತ್ತಮುತ್ತಲಿನ ವಾತಾವರಣ ಶುಚಿಯಾಗಿಡಲು ಗಮನಹರಿಸಬೇಕು ಎಂದು ಗ್ರಾಮಸ್ಥರ ಒತ್ತಾಯ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ: </strong>ತಾಲ್ಲೂಕಿನ ದೇವರಗುಡಿಪಲ್ಲಿ (ಗಡಿದಂ) ಗ್ರಾಮ ಪಂಚಾಯಿತಿ ಕಚೇರಿ ಹಿಂಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆ ಎದುರಿನ ಚರಂಡಿಯಿಂದ ಶಾಲಾ ವಿದ್ಯಾರ್ಥಿಗಳು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಚರಂಡಿಯ ಅಸಹನೀಯ ದುರ್ನಾತ ಒಂದೆಡೆಯಾದರೆ, ಅದನ್ನು ದಾಟಲು ಹರಸಾಹಸ ಪಡಬೇಕಾಗಿರುವುದು ಇನ್ನೊಂದೆಡೆ ಕಂಡುಬರುತ್ತದೆ.<br /> <br /> ಆದರೆ ವಿದ್ಯಾರ್ಥಿಗಳು ಮಲೀನ ವಾತಾವರಣದಲ್ಲೆ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ‘ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ’ ಎಂಬ ಮಾತಿನಂತೆ ಮಕ್ಕಳನ್ನು ಆಹ್ವಾನಿಸುವ ಶಾಲೆಯ ಮುಂಭಾಗದಲ್ಲೇ ಚರಂಡಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಸೇರಿದಂತೆ ಪ್ರತಿಯೊಬ್ಬರು ‘ಸರ್ಕಸ್’ ಮಾಡಬೇಕಾದ ಅನಿವಾರ್ಯತೆ ಇಲ್ಲಿದೆ. <br /> <br /> ಶಾಲೆಯ ನಾಲ್ಕು ದಿಕ್ಕುಗಳಲ್ಲಿ ಚರಂಡಿ ನಿರ್ಮಿಸಲಾಗಿದ್ದು, ಸುತ್ತಮುತ್ತಲಿನ ವಾತಾವರಣವೂ ಸಹ ಮಲೀನಗೊಳ್ಳುತ್ತಿದೆ. ಬೇಕಾಬಿಟ್ಟಿ ಘನ ತ್ಯಾಜ್ಯವಸ್ತು ಎಸೆಯುತ್ತಿರುವುದರಿಂದ ಚರಂಡಿಯಲ್ಲಿ ಹೂಳು ತುಂಬಿಕೊಳ್ಳುತ್ತಿದೆ. ಇದರಿಂದ ಮಲೀನ ನೀರು ಸುಗಮವಾಗಿ ಹರಿಯಲು ಅವಕಾಶವೇ ಇಲ್ಲದಾಗಿದೆ.<br /> <br /> ಶಾಲೆ ಪಕ್ಕದಲ್ಲೇ ಬಿಸಿಯೂಟದ ಕೊಠಡಿ, ಮುಂದುವರಿಕೆ ಶಿಕ್ಷಣ ಕೇಂದ್ರ, ಅಂಗನವಾಡಿ ಕೇಂದ್ರ ಮತ್ತು ಸಾಕ್ಷರತಾ ಕೇಂದ್ರ ನಿರ್ಮಿಸಲಾಗಿದೆ. ಚಿಕ್ಕಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇದರಿಂದ ಅವರು ಅನಾರೋಗ್ಯಕ್ಕೀಡಾಗುವ ಸಾಧ್ಯತೆ ಹೆಚ್ಚಿರುತ್ತದೆ ಎನ್ನುವುದು ಗ್ರಾಮಸ್ಥರ ಆತಂಕ.<br /> <br /> ಗ್ರಾಮದಲ್ಲಿ ಸ್ವಚ್ಛ ಪರಿಸರ ಕಾಯ್ದಕೊಳ್ಳಲು ಮತ್ತು ಚರಂಡಿ ನೀರು ಸರಾಗವಾಗಿ ಹರಿಯಲು ಸಂಬಂಧಪಟ್ಟವರು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಬೃಹದಾಕಾರದ ಚಪ್ಪಡಿ ಕಲ್ಲುಗಳನ್ನು ಚರಂಡಿ ಮೇಲೆ ಹಾಕುವ ಮೂಲಕ ಶಾಲೆಯ ಸುತ್ತಮುತ್ತಲಿನ ವಾತಾವರಣ ಶುಚಿಯಾಗಿಡಲು ಗಮನಹರಿಸಬೇಕು ಎಂದು ಗ್ರಾಮಸ್ಥರ ಒತ್ತಾಯ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>