<p><strong>ಕೊಳ್ಳೇಗಾಲ</strong>: ತುಂಬಿ ತುಳುಕಿ ದುರ್ನಾತ ಬೀರುತ್ತಿರುವ ಕಸದ ತೊಟ್ಟಿ, ಹೂಳು ತುಂಬಿದ ಚರಂಡಿ.. ಮುರಿದು ಬೀಳುವ ಸ್ಥಿತಿಯಲ್ಲಿ ವಿದ್ಯುತ್ ಕಂಬ.. <br /> <br /> -ಇವು ತಾಲ್ಲೂಕಿನ ಹೊಂಡರಬಾಳು ಗ್ರಾಮದ ಸಮಸ್ಯೆಗಳು. ಹೊಂಡರಬಾಳು ಗ್ರಾಮವು ಸ್ವಚ್ಛಗ್ರಾಮಕ್ಕೆ ಆಯ್ಕೆಯಾಗಿದ್ದು, ಗ್ರಾಮದಲ್ಲಿ ಸಿಮೆಂಟ್ ಹಾಗೂ ಕಾಂಕ್ರೀಟ್ನಿಂದ ರಸ್ತೆ ನಿರ್ಮಾಣ ಮಾಡಲಾಗಿದೆ. <br /> <br /> ಸುವ್ಯವಸ್ಥಿತವಾಗಿ ಚರಂಡಿ ನಿರ್ಮಾಣ ಮಾಡಲಾಗಿದೆ. ಸ್ವಚ್ಛ ಗ್ರಾಮವಾದರೂ ರಸ್ತೆಯ ತುಂಬೆಲ್ಲಾ ಕಸ ರಾಚುತ್ತಿದೆ. <br /> <br /> ತೊಟ್ಟಿಗಳಲ್ಲಿ ಕಸ ತುಂಬಿ ತುಳುಕುತ್ತಿದ್ದರೂ ಇದನ್ನು ಬೇರೆಡೆಗೆ ಸಾಗಿಸಲು ಗ್ರಾಮ ಪಂಚಾಯಿತಿ ಗಮನ ಹರಿಸಿಲ್ಲ. ಇದರಿಂದ ಕಸ ರಸ್ತೆಯಲ್ಲೆಲ್ಲಾ ಹೊರಚೆಲ್ಲಿ ದುರ್ನಾತ ಬೀರುತ್ತಿದೆ. ಇದರಿಂದ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ. <br /> <br /> ಗ್ರಾಮದ ಇಂದಿರಾ ಕಾಲೋನಿಯ ಜೈಭೀಮ್ ಅಂಬೇಡ್ಕರ್ ಯುವಕ ಸಂಘದ ನಾಮಫಲಕದ ಬಳಿಯ ವಿದ್ಯುತ್ ಕಂಬದ ಬುಡ ಸಂಪೂರ್ಣವಾಗಿ ಹಾಳಾಗಿದ್ದು, ಮುರಿದು ಬೀಳುವ ಸ್ಥಿತಿ ತಲುಪಿದೆ. ಈ ವಿದ್ಯುತ್ ಕಂಬ ಬದಲಿಸುವ ಬಗ್ಗೆ ಈವರೆಗೂ ಸೆಸ್ಕ್ ಗಮನಹರಿಸಿಲ್ಲ. ಯಾವುದೇ ಸಮಯದಲ್ಲಾದರೂ ಮುರಿದು ಬೀಳುವ ಸ್ಥಿತಿಯಲ್ಲಿದೆ. ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಂಬ ಬದಲಿಸಬೇಕು ಎಂಬುದು ಮುಖಂಡ ಸಿದ್ದರಾಜು ಅವರ ಒತ್ತಾಯ.<br /> <br /> ಕೆಲವು ಚರಂಡಿಗಳಲ್ಲಿ ಕಸಕಡ್ಡಿಗಳಿಂದ ಹೂಳುತುಂಬಿ ದುರ್ನಾತ ಬೀರುತ್ತಿದೆ. ಇದರಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಜನರು ರೋಗರುಜಿನಗಳಿಗೆ ತುತ್ತಾಗುವ ಸ್ಥಿತಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ತುಂಬಿ ತುಳುಕಿ ದುರ್ನಾತ ಬೀರುತ್ತಿರುವ ಕಸದ ತೊಟ್ಟಿ, ಹೂಳು ತುಂಬಿದ ಚರಂಡಿ.. ಮುರಿದು ಬೀಳುವ ಸ್ಥಿತಿಯಲ್ಲಿ ವಿದ್ಯುತ್ ಕಂಬ.. <br /> <br /> -ಇವು ತಾಲ್ಲೂಕಿನ ಹೊಂಡರಬಾಳು ಗ್ರಾಮದ ಸಮಸ್ಯೆಗಳು. ಹೊಂಡರಬಾಳು ಗ್ರಾಮವು ಸ್ವಚ್ಛಗ್ರಾಮಕ್ಕೆ ಆಯ್ಕೆಯಾಗಿದ್ದು, ಗ್ರಾಮದಲ್ಲಿ ಸಿಮೆಂಟ್ ಹಾಗೂ ಕಾಂಕ್ರೀಟ್ನಿಂದ ರಸ್ತೆ ನಿರ್ಮಾಣ ಮಾಡಲಾಗಿದೆ. <br /> <br /> ಸುವ್ಯವಸ್ಥಿತವಾಗಿ ಚರಂಡಿ ನಿರ್ಮಾಣ ಮಾಡಲಾಗಿದೆ. ಸ್ವಚ್ಛ ಗ್ರಾಮವಾದರೂ ರಸ್ತೆಯ ತುಂಬೆಲ್ಲಾ ಕಸ ರಾಚುತ್ತಿದೆ. <br /> <br /> ತೊಟ್ಟಿಗಳಲ್ಲಿ ಕಸ ತುಂಬಿ ತುಳುಕುತ್ತಿದ್ದರೂ ಇದನ್ನು ಬೇರೆಡೆಗೆ ಸಾಗಿಸಲು ಗ್ರಾಮ ಪಂಚಾಯಿತಿ ಗಮನ ಹರಿಸಿಲ್ಲ. ಇದರಿಂದ ಕಸ ರಸ್ತೆಯಲ್ಲೆಲ್ಲಾ ಹೊರಚೆಲ್ಲಿ ದುರ್ನಾತ ಬೀರುತ್ತಿದೆ. ಇದರಿಂದ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ. <br /> <br /> ಗ್ರಾಮದ ಇಂದಿರಾ ಕಾಲೋನಿಯ ಜೈಭೀಮ್ ಅಂಬೇಡ್ಕರ್ ಯುವಕ ಸಂಘದ ನಾಮಫಲಕದ ಬಳಿಯ ವಿದ್ಯುತ್ ಕಂಬದ ಬುಡ ಸಂಪೂರ್ಣವಾಗಿ ಹಾಳಾಗಿದ್ದು, ಮುರಿದು ಬೀಳುವ ಸ್ಥಿತಿ ತಲುಪಿದೆ. ಈ ವಿದ್ಯುತ್ ಕಂಬ ಬದಲಿಸುವ ಬಗ್ಗೆ ಈವರೆಗೂ ಸೆಸ್ಕ್ ಗಮನಹರಿಸಿಲ್ಲ. ಯಾವುದೇ ಸಮಯದಲ್ಲಾದರೂ ಮುರಿದು ಬೀಳುವ ಸ್ಥಿತಿಯಲ್ಲಿದೆ. ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಂಬ ಬದಲಿಸಬೇಕು ಎಂಬುದು ಮುಖಂಡ ಸಿದ್ದರಾಜು ಅವರ ಒತ್ತಾಯ.<br /> <br /> ಕೆಲವು ಚರಂಡಿಗಳಲ್ಲಿ ಕಸಕಡ್ಡಿಗಳಿಂದ ಹೂಳುತುಂಬಿ ದುರ್ನಾತ ಬೀರುತ್ತಿದೆ. ಇದರಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಜನರು ರೋಗರುಜಿನಗಳಿಗೆ ತುತ್ತಾಗುವ ಸ್ಥಿತಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>