<p><strong>26/11ರ ನಿಯಂತ್ರಣ ಕೊಠಡಿಯಲ್ಲಿಐಎಸ್ಐ ಅಧಿಕಾರಿಗಳು ಭಾಗಿ<br /> ನವದೆಹಲಿ: 26</strong>/11ರಂದು ಮುಂಬೈ ಮೇಲೆ ಭಯೋತ್ಪಾದಕರ ದಾಳಿ ನಡೆದಾಗ ಕರಾಚಿಯ ನಿಯಂತ್ರಣಾ ಕೊಠಡಿಯಲ್ಲಿ ಉಪಸ್ಥಿತರಿದ್ದ 10 ಜನರಲ್ಲಿ ಹಾಗೂ ಇಬ್ಬರು ಐಎಸ್ಐ ಅಧಿಕಾರಿಗಳು ಹಾಗೂ ಲಷ್ಕರ್-ಏ-ತೊಯ್ಬಾ ನಾಯಕನೊಬ್ಬ ಇದ್ದ ಎಂಬ ಸತ್ಯ ಈಗ ಬಯಲಾಗಿದೆ.<br /> <br /> ಇತ್ತೀಚೆಗೆ ಬಂಧಿತನಾದ ಉಗ್ರ ಅಬು ಜುಂದಾಲ್ನಿಂದ ಈ ಮಾಹಿತಿ ಸಂಗ್ರಹಿಸಲಾಗಿದೆ. ಲಷ್ಕರ್ ಉಗ್ರನನ್ನು ಅಬು ಜುಂದಾಲ್ `ಮೇಜರ್ ಜನರಲ್ ಸಾಹೇಬ್~ ಎಂದು ಕರೆಯುತ್ತಿದ್ದಾನೆ. ಆದರೆ, ಈ ಲಷ್ಕರ್ ನಾಯಕ ಯಾರು ಎಂಬುದನ್ನು ತನಿಖಾ ಸಂಸ್ಥೆಗಳು ಪತ್ತೆಹಚ್ಚಬೇಕಿದೆ.<br /> ನಿಯಂತ್ರಣ ಕೊಠಡಿಯಲ್ಲಿ ಇಬ್ಬರು ಐಎಸ್ಐ ಅಧಿಕಾರಿಗಳು ಇದ್ದರು ಎಂಬುದು ಮಾತ್ರ ಖಾತ್ರಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <strong><br /> `ರಾ~ ಅಧಿಕಾರಿಗಳ ಭ್ರಷ್ಟಾಚಾರದ ವಿವರ ಕೇಳಿದ ಮಾಹಿತಿ ಆಯೋಗ<br /> ನವದೆಹಲಿ (ಪಿಟಿಐ): </strong>ದೇಶದ ಬಾಹ್ಯ ಬೇಹುಗಾರಿಕಾ ಸಂಸ್ಥೆಯಾದ `ರಾ~ (ರೀಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣಗಳು, ಮಾನವ ಹಕ್ಕು ಉಲ್ಲಂಘನೆ ಹಾಗೂ ಲೈಂಗಿಕ ಕಿರುಕುಳದ ಪ್ರಕರಣಗಳ ಕುರಿತು ವಿವರ ಒದಗಿಸುವಂತೆ ಕೇಂದ್ರ ಮಾಹಿತಿ ಆಯೋಗ `ರಾ~ಗೆ ಸೂಚನೆ ನೀಡಿದೆ.<br /> <br /> ಪಾರದರ್ಶಕ ಕಾಯ್ದೆ ಅಡಿ ತನಗೆ ವಿನಾಯತಿ ನೀಡಲಾಗಿದೆ ಎಂದು `ರಾ~ ಸಲ್ಲಿಸಿದ್ದ ಅರ್ಜಿಯನ್ನು ಮನ್ನಿಸದ ಮಾಹಿತಿ ಹಕ್ಕು ಆಯುಕ್ತರು ಹತ್ತು ದಿನಗಳ ಒಳಗೆ `ರಾ~ ಅಧಿಕಾರಿಗಳ ವಿರುದ್ಧ ದಾಖಲಾದ ಪ್ರಕರಣಗಳ ಪೂರ್ಣ ವಿವರ ಒದಗಿಸುವಂತೆ ನಿರ್ದೇಶನ ನೀಡಿದ್ದಾರೆ. 2010ರಲ್ಲೇ `ರಾ~ ಸಂಸ್ಥೆಗೆ ಈ ವಿವರ ಸಲ್ಲಿಸುವಂತೆ ಕೇಳಲಾಗಿತ್ತು.<br /> <br /> ಮಾಹಿತಿ ಹಕ್ಕು ಕಾಯ್ದೆಯ 24ನೇ ಕಲಂ ಅನ್ವಯ ಸಿಬಿಐ, `ರಾ~ ಇತ್ಯಾದಿ ಸಂಸ್ಥೆಗಳಿಗೆ ಮಾಹಿತಿ ಬಹಿರಂಗಪಡಿಸುವುದರಿಂದ ವಿನಾಯತಿ ನೀಡಲಾಗಿದೆ. ಆದರೆ, ಈ ಸಂಸ್ಥೆಯ ಸಿಬ್ಬಂದಿ ಲೈಂಗಿಕ ದೌರ್ಜನ್ಯ, <br /> ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಲ್ಲಿ ಅದರ ಕುರಿತು ಮಾಹಿತಿ ಬಹಿರಂಗಪಡಿಸಬಹುದಾಗಿದೆ.<br /> <br /> <strong>ಕೊಳವೆ ಬಾವಿ: ಸುರಕ್ಷತೆಗೆ ಕ್ರಮ<br /> <br /> ಹರಿಯಾಣ (ಪಿಟಿಐ): </strong>ಇತ್ತೀಚೆಗೆ ಗುಡಗಾಂವ್ ಸಮೀಪದ ಹಳ್ಳಿಯೊಂದರಲ್ಲಿ ತೆರೆದ ಕೊಳವೆಬಾವಿಗೆ ಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ ಇಲ್ಲಿನ ಸರ್ಕಾರ ಕೊಳವೆ ಬಾವಿ ಕೊರೆಯುವಾಗ ಸುರಕ್ಷತಾ ವಿಧಾನಗಳನ್ನು ಅನುಸರಿಸುವಂತೆ ಕಡ್ಡಾಯವಾಗಿ ನಿಯಮಗಳನ್ನು ರೂಪಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದೆ.<br /> <br /> ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ಕೆ.ಚೌಧರಿ ಅವರು, ಕೊಳವೆಬಾವಿ ಕೊರೆಯುವಾಗ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತ ನಿಯಮಗಳನ್ನು ರೂಪಿಸಲು ಎರಡು ಸಮಿತಿಗಳನ್ನು ರಚಿಸಿದ್ದಾರೆ. ಅವುಗಳಿಗೆ ತಾಂತ್ರಿಕತೆ ಮತ್ತು ಶಾಸನಬದ್ಧ ನಿಯಮಗಳನ್ನು ಒಳಗೊಂಡ ಕರಡನ್ನು ಶೀಘ್ರವೇ ತಯಾರಿಸುವಂತೆ ಸೂಚಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>26/11ರ ನಿಯಂತ್ರಣ ಕೊಠಡಿಯಲ್ಲಿಐಎಸ್ಐ ಅಧಿಕಾರಿಗಳು ಭಾಗಿ<br /> ನವದೆಹಲಿ: 26</strong>/11ರಂದು ಮುಂಬೈ ಮೇಲೆ ಭಯೋತ್ಪಾದಕರ ದಾಳಿ ನಡೆದಾಗ ಕರಾಚಿಯ ನಿಯಂತ್ರಣಾ ಕೊಠಡಿಯಲ್ಲಿ ಉಪಸ್ಥಿತರಿದ್ದ 10 ಜನರಲ್ಲಿ ಹಾಗೂ ಇಬ್ಬರು ಐಎಸ್ಐ ಅಧಿಕಾರಿಗಳು ಹಾಗೂ ಲಷ್ಕರ್-ಏ-ತೊಯ್ಬಾ ನಾಯಕನೊಬ್ಬ ಇದ್ದ ಎಂಬ ಸತ್ಯ ಈಗ ಬಯಲಾಗಿದೆ.<br /> <br /> ಇತ್ತೀಚೆಗೆ ಬಂಧಿತನಾದ ಉಗ್ರ ಅಬು ಜುಂದಾಲ್ನಿಂದ ಈ ಮಾಹಿತಿ ಸಂಗ್ರಹಿಸಲಾಗಿದೆ. ಲಷ್ಕರ್ ಉಗ್ರನನ್ನು ಅಬು ಜುಂದಾಲ್ `ಮೇಜರ್ ಜನರಲ್ ಸಾಹೇಬ್~ ಎಂದು ಕರೆಯುತ್ತಿದ್ದಾನೆ. ಆದರೆ, ಈ ಲಷ್ಕರ್ ನಾಯಕ ಯಾರು ಎಂಬುದನ್ನು ತನಿಖಾ ಸಂಸ್ಥೆಗಳು ಪತ್ತೆಹಚ್ಚಬೇಕಿದೆ.<br /> ನಿಯಂತ್ರಣ ಕೊಠಡಿಯಲ್ಲಿ ಇಬ್ಬರು ಐಎಸ್ಐ ಅಧಿಕಾರಿಗಳು ಇದ್ದರು ಎಂಬುದು ಮಾತ್ರ ಖಾತ್ರಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <strong><br /> `ರಾ~ ಅಧಿಕಾರಿಗಳ ಭ್ರಷ್ಟಾಚಾರದ ವಿವರ ಕೇಳಿದ ಮಾಹಿತಿ ಆಯೋಗ<br /> ನವದೆಹಲಿ (ಪಿಟಿಐ): </strong>ದೇಶದ ಬಾಹ್ಯ ಬೇಹುಗಾರಿಕಾ ಸಂಸ್ಥೆಯಾದ `ರಾ~ (ರೀಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣಗಳು, ಮಾನವ ಹಕ್ಕು ಉಲ್ಲಂಘನೆ ಹಾಗೂ ಲೈಂಗಿಕ ಕಿರುಕುಳದ ಪ್ರಕರಣಗಳ ಕುರಿತು ವಿವರ ಒದಗಿಸುವಂತೆ ಕೇಂದ್ರ ಮಾಹಿತಿ ಆಯೋಗ `ರಾ~ಗೆ ಸೂಚನೆ ನೀಡಿದೆ.<br /> <br /> ಪಾರದರ್ಶಕ ಕಾಯ್ದೆ ಅಡಿ ತನಗೆ ವಿನಾಯತಿ ನೀಡಲಾಗಿದೆ ಎಂದು `ರಾ~ ಸಲ್ಲಿಸಿದ್ದ ಅರ್ಜಿಯನ್ನು ಮನ್ನಿಸದ ಮಾಹಿತಿ ಹಕ್ಕು ಆಯುಕ್ತರು ಹತ್ತು ದಿನಗಳ ಒಳಗೆ `ರಾ~ ಅಧಿಕಾರಿಗಳ ವಿರುದ್ಧ ದಾಖಲಾದ ಪ್ರಕರಣಗಳ ಪೂರ್ಣ ವಿವರ ಒದಗಿಸುವಂತೆ ನಿರ್ದೇಶನ ನೀಡಿದ್ದಾರೆ. 2010ರಲ್ಲೇ `ರಾ~ ಸಂಸ್ಥೆಗೆ ಈ ವಿವರ ಸಲ್ಲಿಸುವಂತೆ ಕೇಳಲಾಗಿತ್ತು.<br /> <br /> ಮಾಹಿತಿ ಹಕ್ಕು ಕಾಯ್ದೆಯ 24ನೇ ಕಲಂ ಅನ್ವಯ ಸಿಬಿಐ, `ರಾ~ ಇತ್ಯಾದಿ ಸಂಸ್ಥೆಗಳಿಗೆ ಮಾಹಿತಿ ಬಹಿರಂಗಪಡಿಸುವುದರಿಂದ ವಿನಾಯತಿ ನೀಡಲಾಗಿದೆ. ಆದರೆ, ಈ ಸಂಸ್ಥೆಯ ಸಿಬ್ಬಂದಿ ಲೈಂಗಿಕ ದೌರ್ಜನ್ಯ, <br /> ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದಲ್ಲಿ ಅದರ ಕುರಿತು ಮಾಹಿತಿ ಬಹಿರಂಗಪಡಿಸಬಹುದಾಗಿದೆ.<br /> <br /> <strong>ಕೊಳವೆ ಬಾವಿ: ಸುರಕ್ಷತೆಗೆ ಕ್ರಮ<br /> <br /> ಹರಿಯಾಣ (ಪಿಟಿಐ): </strong>ಇತ್ತೀಚೆಗೆ ಗುಡಗಾಂವ್ ಸಮೀಪದ ಹಳ್ಳಿಯೊಂದರಲ್ಲಿ ತೆರೆದ ಕೊಳವೆಬಾವಿಗೆ ಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ ಇಲ್ಲಿನ ಸರ್ಕಾರ ಕೊಳವೆ ಬಾವಿ ಕೊರೆಯುವಾಗ ಸುರಕ್ಷತಾ ವಿಧಾನಗಳನ್ನು ಅನುಸರಿಸುವಂತೆ ಕಡ್ಡಾಯವಾಗಿ ನಿಯಮಗಳನ್ನು ರೂಪಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದೆ.<br /> <br /> ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ಕೆ.ಚೌಧರಿ ಅವರು, ಕೊಳವೆಬಾವಿ ಕೊರೆಯುವಾಗ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತ ನಿಯಮಗಳನ್ನು ರೂಪಿಸಲು ಎರಡು ಸಮಿತಿಗಳನ್ನು ರಚಿಸಿದ್ದಾರೆ. ಅವುಗಳಿಗೆ ತಾಂತ್ರಿಕತೆ ಮತ್ತು ಶಾಸನಬದ್ಧ ನಿಯಮಗಳನ್ನು ಒಳಗೊಂಡ ಕರಡನ್ನು ಶೀಘ್ರವೇ ತಯಾರಿಸುವಂತೆ ಸೂಚಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>