<p><strong>ದೇವನಹಳ್ಳಿ:</strong> ಸ್ವಯಂಕೃಷಿ ಸಂಸ್ಥೆಯ ಅಧ್ಯಕ್ಷ ಮುರಳಿ, ಉಪಾಧ್ಯಕ್ಷ ಮತ್ತು ಕಾರ್ಯ ನಿರ್ವಹಣಾಧಿಕಾರಿ ವೀರೇಂದ್ರಬಾಬು ಹಾಗೂ ನಿರ್ದೇಶಕರಾದ ವೆಂಕಟೇಶಬಾಬು, ಮಾರೇಗೌಡ ಮತ್ತು ಗೋವಿಂದರಾಜ್ ಅವರನ್ನು ಶುಕ್ರವಾರ ಸ್ಥಳೀಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. <br /> <br /> ವೀರೇಂದ್ರ ಬಾಬು ಹಾಗೂ ಮುರಳಿಯನ್ನು ಹೆಚ್ಚಿನ ತನಿಖೆಗಾಗಿ ಜುಲೈ 12ರವರೆಗೆ ಪೊಲೀಸರು ವಶಕ್ಕೆ ನೀಡಲಾಗಿದ್ದು ಇತರೆ ಮೂವರು ನಿರ್ದೇಶಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.<br /> <br /> ತಾಲ್ಲೂಕು ಸೇರಿದಂತೆ ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ಸ್ವಯಂಕೃಷಿ ಚಿಟ್ಫಂಡ್ಸ್ ಶಾಖೆಗಳ ಮೂಲಕ ಸಾರ್ವಜನಿಕರನ್ನು ವಂಚಿಸಿದ ಆರೋಪದ ಮೇಲೆ ಈ ಐವರ ವಿರುದ್ಧ 10ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿದ್ದವು. ತಲೆಮರೆಸಿಕೊಂಡು ಹೈದರಾಬಾದಿನಲ್ಲಿ ಇದ್ದ ಇವರನ್ನು ದೇವನಹಳ್ಳಿ ಪೊಲೀಸರು ಗುರುವಾರ ಬಂಧಿಸಿ ಇಲ್ಲಿಗೆ ಕರೆತಂದಿದ್ದರು.<br /> <br /> ಸ್ವಯಂಕೃಷಿ ಸಂಸ್ಥೆಗೆ ಏಜೆಂಟರಾಗಿದ್ದವರು ಹಾಗೂ ಗ್ರಾಹಕರು ಹೂಡಿಕೆ ಮಾಡಿದ್ದ ಹಣವನ್ನು ಹಿಂದಿರುಗಿಸುವಲ್ಲಿ ಸಂಸ್ಥೆಯು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಸಂಸ್ಥೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ನಿರ್ದೇಶಕರ ವಿರುದ್ಧ ಕಳೆದ ತಿಂಗಳಿನಿಂದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.<br /> <br /> <strong>ಪ್ರಕರಣ ದಾಖಲಾಗಿರುವ ಸ್ಥಳಗಳು: </strong>ದೇವನಹಳ್ಳಿ, ಮೈಸೂರು, ನಂಜನಗೂಡು, ಬೆಂಗಳೂರಿನ ಜಯನಗರ, ದೊಡ್ಡಬಳ್ಳಾಪುರ, ಚಿಂತಾಮಣಿ, ಕೋಲಾರಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಆದರೆ ವಂಚನೆ ಪ್ರಕರಣ ದಾಖಲಾಗಿರುವುದು ಚಿಟ್ಫಂಡ್ನಲ್ಲಿ ಎಂಬುದು ವಿಶೇಷ ಎಂದು ಪೊಲೀಸ್ ಮೂಲಗಳು ತಿಳಿಸಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಸ್ವಯಂಕೃಷಿ ಸಂಸ್ಥೆಯ ಅಧ್ಯಕ್ಷ ಮುರಳಿ, ಉಪಾಧ್ಯಕ್ಷ ಮತ್ತು ಕಾರ್ಯ ನಿರ್ವಹಣಾಧಿಕಾರಿ ವೀರೇಂದ್ರಬಾಬು ಹಾಗೂ ನಿರ್ದೇಶಕರಾದ ವೆಂಕಟೇಶಬಾಬು, ಮಾರೇಗೌಡ ಮತ್ತು ಗೋವಿಂದರಾಜ್ ಅವರನ್ನು ಶುಕ್ರವಾರ ಸ್ಥಳೀಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. <br /> <br /> ವೀರೇಂದ್ರ ಬಾಬು ಹಾಗೂ ಮುರಳಿಯನ್ನು ಹೆಚ್ಚಿನ ತನಿಖೆಗಾಗಿ ಜುಲೈ 12ರವರೆಗೆ ಪೊಲೀಸರು ವಶಕ್ಕೆ ನೀಡಲಾಗಿದ್ದು ಇತರೆ ಮೂವರು ನಿರ್ದೇಶಕರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.<br /> <br /> ತಾಲ್ಲೂಕು ಸೇರಿದಂತೆ ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ಸ್ವಯಂಕೃಷಿ ಚಿಟ್ಫಂಡ್ಸ್ ಶಾಖೆಗಳ ಮೂಲಕ ಸಾರ್ವಜನಿಕರನ್ನು ವಂಚಿಸಿದ ಆರೋಪದ ಮೇಲೆ ಈ ಐವರ ವಿರುದ್ಧ 10ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿದ್ದವು. ತಲೆಮರೆಸಿಕೊಂಡು ಹೈದರಾಬಾದಿನಲ್ಲಿ ಇದ್ದ ಇವರನ್ನು ದೇವನಹಳ್ಳಿ ಪೊಲೀಸರು ಗುರುವಾರ ಬಂಧಿಸಿ ಇಲ್ಲಿಗೆ ಕರೆತಂದಿದ್ದರು.<br /> <br /> ಸ್ವಯಂಕೃಷಿ ಸಂಸ್ಥೆಗೆ ಏಜೆಂಟರಾಗಿದ್ದವರು ಹಾಗೂ ಗ್ರಾಹಕರು ಹೂಡಿಕೆ ಮಾಡಿದ್ದ ಹಣವನ್ನು ಹಿಂದಿರುಗಿಸುವಲ್ಲಿ ಸಂಸ್ಥೆಯು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಸಂಸ್ಥೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ನಿರ್ದೇಶಕರ ವಿರುದ್ಧ ಕಳೆದ ತಿಂಗಳಿನಿಂದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.<br /> <br /> <strong>ಪ್ರಕರಣ ದಾಖಲಾಗಿರುವ ಸ್ಥಳಗಳು: </strong>ದೇವನಹಳ್ಳಿ, ಮೈಸೂರು, ನಂಜನಗೂಡು, ಬೆಂಗಳೂರಿನ ಜಯನಗರ, ದೊಡ್ಡಬಳ್ಳಾಪುರ, ಚಿಂತಾಮಣಿ, ಕೋಲಾರಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಆದರೆ ವಂಚನೆ ಪ್ರಕರಣ ದಾಖಲಾಗಿರುವುದು ಚಿಟ್ಫಂಡ್ನಲ್ಲಿ ಎಂಬುದು ವಿಶೇಷ ಎಂದು ಪೊಲೀಸ್ ಮೂಲಗಳು ತಿಳಿಸಿವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>