<p>ಪಿರಿಯಾಪಟ್ಟಣ: ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಯಂ ವೃತ್ತಿ ಕೈಗೊಂಡು ಆರ್ಥಿಕಾಭಿವೃದ್ಧಿಯಲ್ಲಿ ಕೈಜೋಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ.ಶಂಕರೇಗೌಡ ತಿಳಿಸಿದರು.<br /> <br /> ತಾಲ್ಲೂಕಿನ ರಾವಂದೂರು ಗ್ರಾಮ ಪಂಚಾಯಿತಿ ಲೋಕಶಿಕ್ಷಣ ಕೇಂದ್ರ ಮತ್ತು ಜೆಎಸ್ಎಸ್ ಜನಶಿಕ್ಷಣ ಸಂಸ್ಥೆ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಹೊಲಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಜಿಲ್ಲೆಯಲ್ಲಿ ಅನಕ್ಷರಸ್ಥರ ಸಂಖ್ಯೆಯಲ್ಲಿ ಹೆಚ್ಚು ಮಹಿಳೆಯರು ಇದ್ದು ಅವರನ್ನು ಅಕ್ಷರಸ್ಥರನ್ನಾಗಿ ಮಾಡುವ ಜವಾಬ್ದಾರಿ ಸಂಸ್ಥೆಯ ಮೇಲಿದೆ ಎಂದರು.<br /> <br /> ಜೆಎಸ್ಎಸ್ ಜನಶಿಕ್ಷಣ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ಎ.ಪಿ.ರಮೇಶ್ ಮಾತನಾಡಿ ಅನಕ್ಷರಸ್ಥತೆಯಿಂದ ಅಕ್ಷರತೆಯ ಕಡೆಗೆ ಸಾಗಿದ ಮಹಿಳೆಯರು ಸ್ವಾವಲಂಬನೆಯ ಹಾದಿ ಕಂಡುಕೊಳ್ಳಬೇಕು ಎಂದರು.<br /> <br /> ತರಬೇತಿ ಶಿಬಿರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಗಂಗಾಧರ್, ಶಿಕ್ಷಕಿ ಸೌಮ್ಯ , ಗ್ರಾಮ ಪಂಚಾಯಿತಿ ಸಂಯೋಜಕ ಮುಕುಂದ, ಪುಣ್ಯ ಸೇರಿದಂತೆ ಹಲವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಿರಿಯಾಪಟ್ಟಣ: ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಯಂ ವೃತ್ತಿ ಕೈಗೊಂಡು ಆರ್ಥಿಕಾಭಿವೃದ್ಧಿಯಲ್ಲಿ ಕೈಜೋಡಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ.ಶಂಕರೇಗೌಡ ತಿಳಿಸಿದರು.<br /> <br /> ತಾಲ್ಲೂಕಿನ ರಾವಂದೂರು ಗ್ರಾಮ ಪಂಚಾಯಿತಿ ಲೋಕಶಿಕ್ಷಣ ಕೇಂದ್ರ ಮತ್ತು ಜೆಎಸ್ಎಸ್ ಜನಶಿಕ್ಷಣ ಸಂಸ್ಥೆ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಹೊಲಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಜಿಲ್ಲೆಯಲ್ಲಿ ಅನಕ್ಷರಸ್ಥರ ಸಂಖ್ಯೆಯಲ್ಲಿ ಹೆಚ್ಚು ಮಹಿಳೆಯರು ಇದ್ದು ಅವರನ್ನು ಅಕ್ಷರಸ್ಥರನ್ನಾಗಿ ಮಾಡುವ ಜವಾಬ್ದಾರಿ ಸಂಸ್ಥೆಯ ಮೇಲಿದೆ ಎಂದರು.<br /> <br /> ಜೆಎಸ್ಎಸ್ ಜನಶಿಕ್ಷಣ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ಎ.ಪಿ.ರಮೇಶ್ ಮಾತನಾಡಿ ಅನಕ್ಷರಸ್ಥತೆಯಿಂದ ಅಕ್ಷರತೆಯ ಕಡೆಗೆ ಸಾಗಿದ ಮಹಿಳೆಯರು ಸ್ವಾವಲಂಬನೆಯ ಹಾದಿ ಕಂಡುಕೊಳ್ಳಬೇಕು ಎಂದರು.<br /> <br /> ತರಬೇತಿ ಶಿಬಿರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಗಂಗಾಧರ್, ಶಿಕ್ಷಕಿ ಸೌಮ್ಯ , ಗ್ರಾಮ ಪಂಚಾಯಿತಿ ಸಂಯೋಜಕ ಮುಕುಂದ, ಪುಣ್ಯ ಸೇರಿದಂತೆ ಹಲವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>