<p><strong>ಬೆಂಗಳೂರು: </strong>ಹೊಸಕೋಟೆ, ನೆಲಮಂಗಲ ಸೇರಿದಂತೆ ನಗರದ ಹೊರ ವಲಯದ ವಿವಿಧ ಕಡೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.<br /> <br /> <strong>ಹೊಸಕೋಟೆ ವರದಿ:</strong> ದೇಶವನ್ನು ಕಾಡುತ್ತಿರುವ ಭ್ರಷ್ಟಾಚಾರ ಹಾಗೂ ಜಾತೀಯತೆಯನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಹೋರಾಟ ನಡೆಸಬೇಕು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಬುಧವಾರ ಇಲ್ಲಿ ಕರೆ ನೀಡಿದರು. <br /> <br /> ತಾಲ್ಲೂಕು ಸ್ವಾತಂತ್ರ್ಯೋತ್ಸವ ಸಮಿತಿ ಆಶ್ರಯದಲ್ಲಿ ಇಲ್ಲಿನ ಚನ್ನಬೈರೇಗೌಡ ಕ್ರೆಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.<br /> `ಸ್ವಾತಂತ್ರ್ಯ ಪಡೆಯಲು ಹೋರಾಟ ಮಾಡಿದ ವ್ಯಕ್ತಿಗಳ ಹಿನ್ನೆಲೆಯನ್ನು ಮಕ್ಕಳಿಗೆ ತಿಳಿಸುವುದರ ಮೂಲಕ ಅವರಲ್ಲಿ ರಾಷ್ಟ್ರಪ್ರೇಮ ಬೆಳೆಸಬೇಕಾಗಿದೆ~ ಎಂದು ಅವರು ಹೇಳಿದರು.<br /> <br /> ತಹಶೀಲ್ದಾರ್ ಮಲ್ಲಿಕಾರ್ಜುನ, ಜಿ.ಪಂ. ಸದಸ್ಯ ತಿರುವರಂಗ ನಾರಾಯಣಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಎಚ್.ಆರ್.ಶಫೀವುಲ್ಲಾ, ಉಪ ನಿರ್ದೇಶಕ ವೆಂಕಟೇಶಪ್ಪ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜೇಗೌಡ ಸ್ವಾಗತಿಸಿದರು. ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದವರು ಹಾಗೂ ಹಿರಿಯ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.<br /> <br /> <strong>ನೆಲಮಂಗಲದಲ್ಲಿ ಸ್ವಾತಂತ್ರ್ಯೋತ್ಸವ<br /> ನೆಲಮಂಗಲ: </strong>ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ತಹಶೀಲ್ದಾರ್ ಆರ್.ಅನಿಲ್ಕುಮಾರ್ ಧ್ವಜಾರೋಹಣ ನೆರವೇರಿಸಿ ಪೊಲಿಸರು ಮತ್ತು ಎನ್ಸಿಸಿ ವಿದ್ಯಾರ್ಥಿಗಳಿಂದ ಧ್ವಜ ವಂದನೆ ಸ್ವೀಕರಿಸಿದರು.<br /> ಶಾಸಕ ಎಂ.ವಿ.ನಾಗರಾಜು ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಜನೆಯೊಂದಿಗೆ ದೇಶ ಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.<br /> <br /> ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಮಾತನಾಡಿ, `ಅಂದು ಹೊರಗಿನ ಶತ್ರುಗಳ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಗಳಿಸಿದರೆ, ಇಂದು ಒಳಗಿನ ಶತ್ರುಗಳ ವಿರುದ್ಧ ಹೋರಾಟ ಮಾಡಬೇಕಾದಂತಹ ಪರಿಸ್ಥಿತಿ ಬಂದೊದಗಿದೆ~ ಎಂದು ವಿಷಾದಿಸಿದರು.<br /> <br /> ಪುರಸಭೆ ಅಧ್ಯಕ್ಷ ಪಿಳ್ಳಪ್ಪ, ಉಪಾಧ್ಯಕ್ಷ ಹೇಮಂತಕುಮಾರ್, ತಾ.ಪಂ.ಅಧ್ಯಕ್ಷ ರಂಗಸ್ವಾಮಿ, ಉಪಾಧ್ಯಕ್ಷೆ ಅಶ್ವತ್ಥಮ್ಮ, ಜಿ.ಪಂ. ಸದಸ್ಯ ರಾಮು, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆನಂದ್, ಮುರಾರಯ್ಯ, ಪುರಸಭೆ ಮಾಜಿ ಅಧ್ಯಕ್ಷ ಆರ್.ಉಮಾಶಂಕರ್ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.<br /> <br /> <strong>`ಯುವ ಶಕ್ತಿ ಸಮರ್ಪಕ ಬಳಕೆ ದೊಡ್ಡ ಸವಾಲು~<br /> ಯಲಹಂಕ ವರದಿ: </strong>ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ತ್ಯಾಗ ಬಲಿದಾನದ ಮಹತ್ವವನ್ನು ಇಂದಿನ ಯುವಜನತೆಗೆ ತಿಳಿಸುವ ಮೂಲಕ ಅವರನ್ನು ಜವಾಬ್ದಾರಿ ನಾಯಕರನ್ನಾಗಿ ರೂಪಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ನಾರಾಯಣಗೌಡ ಹೇಳಿದರು.<br /> <br /> ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬುಧವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, `ಭಾರತದ ಒಟ್ಟು ಜನಸಂಖ್ಯೆಯ ಶೇಕಡ 40ರಷ್ಟು ಜನ ಯುವಕರೇ ಆಗಿರುವುದು ಈ ರಾಷ್ಟ್ರದ ಬಹುದೊಡ್ಡ ಶಕ್ತಿ. ಹೀಗಾಗಿ, ವಿಶ್ವವು ಭಾರತವನ್ನು ಒಂದು ಯುವರಾಷ್ಟ್ರ ಎಂದು ಪರಿಗಣಿಸಿದೆ. ಆದರೆ, ಯುವಶಕ್ತಿಯ ಸಮರ್ಪಕ ಬಳಕೆ ಬಹುದೊಡ್ಡ ಸವಾಲಾಗಿದೆ ಎಂದರು.<br /> <br /> ಕೃಷಿ ವಿವಿ ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಡಾ.ಕೆ.ಪಿ.ರಾಮಪ್ರಸನ್ನ, ದೈಹಿಕ ಶಿಕ್ಷಣ ವಿಭಾಗದ ಸಹ ಪ್ರಾಧ್ಯಾಪಕರಾದ ಅಜಿತ್ ಕುಮಾರ್, ರಾಜಶೇಖರಪ್ಪ ಮೊದಲಾದವರು ಉಪಸ್ಥಿತರಿದ್ದರು. ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಪ್ರಾದ್ಯಾಪಕರು ದೇಶಭಕ್ತಿಗೀತೆಗಳನ್ನು ಹಾಡಿದರು.<br /> <br /> <strong>`ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಕಟಿಬದ್ಧರಾಗಬೇಕು~<br /> ರಾಜರಾಜೇಶ್ವರಿನಗರ: </strong>ತ್ಯಾಗ, ಬಲಿದಾನದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ನಾಯಕರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಕಟಿಬದ್ಧರಾಗಬೇಕಾಗಿದೆ ಎಂದು ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಕರೆ ನೀಡಿದರು.<br /> <br /> ಉತ್ತರಹಳ್ಳಿ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆದ ಸ್ವಾತಂತ್ರ್ಯೋತ್ಸ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.<br /> <br /> ಪಾಲಿಕೆ ಸದಸ್ಯ ಕೆ.ರಮೇಶ್ರಾಜು, ಬಿಎಂಟಿಸಿ ನಿರ್ದೇಶಕ ವಿಜಯಕುಮಾರ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹನುಮಂತು, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಶಿವಲಿಂಗೇಗೌಡ ಹಾಜರಿದ್ದರು.<br /> <br /> <strong>ಹುತಾತ್ಮರ ಸ್ಮರಣೆ ಅಗತ್ಯ<br /> ಕೃಷ್ಣರಾಜಪುರ: </strong>ತ್ಯಾಗ- ಬಲಿದಾನಗಳ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಹುತಾತ್ಮರನ್ನು ಸ್ಮರಿಸುವ ಮೂಲಕ ಯುವ ಪೀಳಿಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಪಾಲಿಕೆ ಸದಸ್ಯೆ ಆರ್.ಮಂಜುಳಾದೇವಿ ನುಡಿದರು.<br /> <br /> ಸಿಂಗಯ್ಯನಪಾಳ್ಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಲ ನಟ ಪ್ರಶಸ್ತಿ ಪುರಸ್ಕೃತ ವಿ.ಅನಿಲ್ಕುಮಾರ್ನನ್ನು ಸನ್ಮಾನಿಸಿ ಅವರು ಮಾತನಾಡಿದರು.<br /> <br /> ಶಾಲಾ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ವಿ.ರಾಜು, ಸದಸ್ಯ ರವಿ, ಕುಮಾರ್, ಕೆಂಪಣ್ಣ, ಸಾಮಾಜಿಕ ಕಾರ್ಯಕರ್ತ ಪುಟ್ಟರಾಜು, ಪ್ರಕಾಶ್ರೆಡ್ಡಿ, ಟಿ.ಕೆ. ತಾಯಪ್ಪ, ದಾನಿ ಶ್ರೀನಿವಾಸರೆಡ್ಡಿ, ರೋಟರಿ ಸಂಸ್ಥೆಯ ಸುರೇಶ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.<br /> <strong><br /> ಮಕ್ಕಳಿಂದ ಆಕರ್ಷಕ ಯೋಗ ಪ್ರದರ್ಶನ <br /> ಪೀಣ್ಯ ದಾಸರಹಳ್ಳಿ:</strong> ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಎಂ.ಇ.ಐ. ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಹಾಗೂ ಪಾಲಿಕೆ ದಾಸರಹಳ್ಳಿ ವಲಯದ ವತಿಯಿಂದ ಅದ್ದೂರಿಯಾಗಿ ಸ್ವಾತಂತ್ರೋತ್ಸವ ಆಚರಿಸಲಾಯಿತು.<br /> ಯೋಗ ವಿಜ್ಞಾನ ಆರೋಗ್ಯ ಕೇಂದ್ರದ ಮಕ್ಕಳು ಪ್ರದರ್ಶಿಸಿದ ಯೋಗ ಪ್ರದರ್ಶನ ನೆರೆದಿದ್ದವರ ಮನಸೆಳೆಯಿತು. ಕ್ಷೇತ್ರದ ನಲವತ್ತಕ್ಕೂ ಹೆಚ್ಚು ಸರ್ಕಾರಿ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.<br /> <br /> ಶಾಸಕ ಎಸ್.ಮುನಿರಾಜು, ಮಾಜಿ ಮೇಯರ್ ಶಾರದಮ್ಮ, ಪಾಲಿಕೆ ಸದಸ್ಯರಾದ ಪುಟ್ಟಮ್ಮ ತಮ್ಮಣ್ಣ, ಚಂದ್ರಶೇಖರ್, ಆರ್.ಪಿ. ಶಶಿ ಶಿವಕುಮಾರ್, ಪಾಲಿಕೆ ಜಂಟಿ ಆಯುಕ್ತ ಎಲ್.ರಾಧಾಕೃಷ್ಣ, ಜಯರಂಗ, ಎಂ.ಗೋಪಾಲಕೃಷ್ಣ, ಪೊಲೀಸ್ ಅಧಿಕಾರಿಗಳಾದ ಹನುಮಂತಪ್ಪ, ರಂಗಸ್ವಾಮಿ, ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹೊಸಕೋಟೆ, ನೆಲಮಂಗಲ ಸೇರಿದಂತೆ ನಗರದ ಹೊರ ವಲಯದ ವಿವಿಧ ಕಡೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.<br /> <br /> <strong>ಹೊಸಕೋಟೆ ವರದಿ:</strong> ದೇಶವನ್ನು ಕಾಡುತ್ತಿರುವ ಭ್ರಷ್ಟಾಚಾರ ಹಾಗೂ ಜಾತೀಯತೆಯನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಹೋರಾಟ ನಡೆಸಬೇಕು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಬುಧವಾರ ಇಲ್ಲಿ ಕರೆ ನೀಡಿದರು. <br /> <br /> ತಾಲ್ಲೂಕು ಸ್ವಾತಂತ್ರ್ಯೋತ್ಸವ ಸಮಿತಿ ಆಶ್ರಯದಲ್ಲಿ ಇಲ್ಲಿನ ಚನ್ನಬೈರೇಗೌಡ ಕ್ರೆಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.<br /> `ಸ್ವಾತಂತ್ರ್ಯ ಪಡೆಯಲು ಹೋರಾಟ ಮಾಡಿದ ವ್ಯಕ್ತಿಗಳ ಹಿನ್ನೆಲೆಯನ್ನು ಮಕ್ಕಳಿಗೆ ತಿಳಿಸುವುದರ ಮೂಲಕ ಅವರಲ್ಲಿ ರಾಷ್ಟ್ರಪ್ರೇಮ ಬೆಳೆಸಬೇಕಾಗಿದೆ~ ಎಂದು ಅವರು ಹೇಳಿದರು.<br /> <br /> ತಹಶೀಲ್ದಾರ್ ಮಲ್ಲಿಕಾರ್ಜುನ, ಜಿ.ಪಂ. ಸದಸ್ಯ ತಿರುವರಂಗ ನಾರಾಯಣಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಎಚ್.ಆರ್.ಶಫೀವುಲ್ಲಾ, ಉಪ ನಿರ್ದೇಶಕ ವೆಂಕಟೇಶಪ್ಪ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜೇಗೌಡ ಸ್ವಾಗತಿಸಿದರು. ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದವರು ಹಾಗೂ ಹಿರಿಯ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.<br /> <br /> <strong>ನೆಲಮಂಗಲದಲ್ಲಿ ಸ್ವಾತಂತ್ರ್ಯೋತ್ಸವ<br /> ನೆಲಮಂಗಲ: </strong>ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ತಹಶೀಲ್ದಾರ್ ಆರ್.ಅನಿಲ್ಕುಮಾರ್ ಧ್ವಜಾರೋಹಣ ನೆರವೇರಿಸಿ ಪೊಲಿಸರು ಮತ್ತು ಎನ್ಸಿಸಿ ವಿದ್ಯಾರ್ಥಿಗಳಿಂದ ಧ್ವಜ ವಂದನೆ ಸ್ವೀಕರಿಸಿದರು.<br /> ಶಾಸಕ ಎಂ.ವಿ.ನಾಗರಾಜು ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಜನೆಯೊಂದಿಗೆ ದೇಶ ಪ್ರೇಮವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.<br /> <br /> ವಿಧಾನ ಪರಿಷತ್ ಸದಸ್ಯ ಇ.ಕೃಷ್ಣಪ್ಪ ಮಾತನಾಡಿ, `ಅಂದು ಹೊರಗಿನ ಶತ್ರುಗಳ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಗಳಿಸಿದರೆ, ಇಂದು ಒಳಗಿನ ಶತ್ರುಗಳ ವಿರುದ್ಧ ಹೋರಾಟ ಮಾಡಬೇಕಾದಂತಹ ಪರಿಸ್ಥಿತಿ ಬಂದೊದಗಿದೆ~ ಎಂದು ವಿಷಾದಿಸಿದರು.<br /> <br /> ಪುರಸಭೆ ಅಧ್ಯಕ್ಷ ಪಿಳ್ಳಪ್ಪ, ಉಪಾಧ್ಯಕ್ಷ ಹೇಮಂತಕುಮಾರ್, ತಾ.ಪಂ.ಅಧ್ಯಕ್ಷ ರಂಗಸ್ವಾಮಿ, ಉಪಾಧ್ಯಕ್ಷೆ ಅಶ್ವತ್ಥಮ್ಮ, ಜಿ.ಪಂ. ಸದಸ್ಯ ರಾಮು, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆನಂದ್, ಮುರಾರಯ್ಯ, ಪುರಸಭೆ ಮಾಜಿ ಅಧ್ಯಕ್ಷ ಆರ್.ಉಮಾಶಂಕರ್ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.<br /> <br /> <strong>`ಯುವ ಶಕ್ತಿ ಸಮರ್ಪಕ ಬಳಕೆ ದೊಡ್ಡ ಸವಾಲು~<br /> ಯಲಹಂಕ ವರದಿ: </strong>ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ತ್ಯಾಗ ಬಲಿದಾನದ ಮಹತ್ವವನ್ನು ಇಂದಿನ ಯುವಜನತೆಗೆ ತಿಳಿಸುವ ಮೂಲಕ ಅವರನ್ನು ಜವಾಬ್ದಾರಿ ನಾಯಕರನ್ನಾಗಿ ರೂಪಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ನಾರಾಯಣಗೌಡ ಹೇಳಿದರು.<br /> <br /> ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬುಧವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, `ಭಾರತದ ಒಟ್ಟು ಜನಸಂಖ್ಯೆಯ ಶೇಕಡ 40ರಷ್ಟು ಜನ ಯುವಕರೇ ಆಗಿರುವುದು ಈ ರಾಷ್ಟ್ರದ ಬಹುದೊಡ್ಡ ಶಕ್ತಿ. ಹೀಗಾಗಿ, ವಿಶ್ವವು ಭಾರತವನ್ನು ಒಂದು ಯುವರಾಷ್ಟ್ರ ಎಂದು ಪರಿಗಣಿಸಿದೆ. ಆದರೆ, ಯುವಶಕ್ತಿಯ ಸಮರ್ಪಕ ಬಳಕೆ ಬಹುದೊಡ್ಡ ಸವಾಲಾಗಿದೆ ಎಂದರು.<br /> <br /> ಕೃಷಿ ವಿವಿ ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಡಾ.ಕೆ.ಪಿ.ರಾಮಪ್ರಸನ್ನ, ದೈಹಿಕ ಶಿಕ್ಷಣ ವಿಭಾಗದ ಸಹ ಪ್ರಾಧ್ಯಾಪಕರಾದ ಅಜಿತ್ ಕುಮಾರ್, ರಾಜಶೇಖರಪ್ಪ ಮೊದಲಾದವರು ಉಪಸ್ಥಿತರಿದ್ದರು. ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಪ್ರಾದ್ಯಾಪಕರು ದೇಶಭಕ್ತಿಗೀತೆಗಳನ್ನು ಹಾಡಿದರು.<br /> <br /> <strong>`ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಕಟಿಬದ್ಧರಾಗಬೇಕು~<br /> ರಾಜರಾಜೇಶ್ವರಿನಗರ: </strong>ತ್ಯಾಗ, ಬಲಿದಾನದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ನಾಯಕರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಕಟಿಬದ್ಧರಾಗಬೇಕಾಗಿದೆ ಎಂದು ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಕರೆ ನೀಡಿದರು.<br /> <br /> ಉತ್ತರಹಳ್ಳಿ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆದ ಸ್ವಾತಂತ್ರ್ಯೋತ್ಸ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.<br /> <br /> ಪಾಲಿಕೆ ಸದಸ್ಯ ಕೆ.ರಮೇಶ್ರಾಜು, ಬಿಎಂಟಿಸಿ ನಿರ್ದೇಶಕ ವಿಜಯಕುಮಾರ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಹನುಮಂತು, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಶಿವಲಿಂಗೇಗೌಡ ಹಾಜರಿದ್ದರು.<br /> <br /> <strong>ಹುತಾತ್ಮರ ಸ್ಮರಣೆ ಅಗತ್ಯ<br /> ಕೃಷ್ಣರಾಜಪುರ: </strong>ತ್ಯಾಗ- ಬಲಿದಾನಗಳ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಹುತಾತ್ಮರನ್ನು ಸ್ಮರಿಸುವ ಮೂಲಕ ಯುವ ಪೀಳಿಗೆ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಪಾಲಿಕೆ ಸದಸ್ಯೆ ಆರ್.ಮಂಜುಳಾದೇವಿ ನುಡಿದರು.<br /> <br /> ಸಿಂಗಯ್ಯನಪಾಳ್ಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಲ ನಟ ಪ್ರಶಸ್ತಿ ಪುರಸ್ಕೃತ ವಿ.ಅನಿಲ್ಕುಮಾರ್ನನ್ನು ಸನ್ಮಾನಿಸಿ ಅವರು ಮಾತನಾಡಿದರು.<br /> <br /> ಶಾಲಾ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ವಿ.ರಾಜು, ಸದಸ್ಯ ರವಿ, ಕುಮಾರ್, ಕೆಂಪಣ್ಣ, ಸಾಮಾಜಿಕ ಕಾರ್ಯಕರ್ತ ಪುಟ್ಟರಾಜು, ಪ್ರಕಾಶ್ರೆಡ್ಡಿ, ಟಿ.ಕೆ. ತಾಯಪ್ಪ, ದಾನಿ ಶ್ರೀನಿವಾಸರೆಡ್ಡಿ, ರೋಟರಿ ಸಂಸ್ಥೆಯ ಸುರೇಶ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.<br /> <strong><br /> ಮಕ್ಕಳಿಂದ ಆಕರ್ಷಕ ಯೋಗ ಪ್ರದರ್ಶನ <br /> ಪೀಣ್ಯ ದಾಸರಹಳ್ಳಿ:</strong> ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಎಂ.ಇ.ಐ. ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಹಾಗೂ ಪಾಲಿಕೆ ದಾಸರಹಳ್ಳಿ ವಲಯದ ವತಿಯಿಂದ ಅದ್ದೂರಿಯಾಗಿ ಸ್ವಾತಂತ್ರೋತ್ಸವ ಆಚರಿಸಲಾಯಿತು.<br /> ಯೋಗ ವಿಜ್ಞಾನ ಆರೋಗ್ಯ ಕೇಂದ್ರದ ಮಕ್ಕಳು ಪ್ರದರ್ಶಿಸಿದ ಯೋಗ ಪ್ರದರ್ಶನ ನೆರೆದಿದ್ದವರ ಮನಸೆಳೆಯಿತು. ಕ್ಷೇತ್ರದ ನಲವತ್ತಕ್ಕೂ ಹೆಚ್ಚು ಸರ್ಕಾರಿ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.<br /> <br /> ಶಾಸಕ ಎಸ್.ಮುನಿರಾಜು, ಮಾಜಿ ಮೇಯರ್ ಶಾರದಮ್ಮ, ಪಾಲಿಕೆ ಸದಸ್ಯರಾದ ಪುಟ್ಟಮ್ಮ ತಮ್ಮಣ್ಣ, ಚಂದ್ರಶೇಖರ್, ಆರ್.ಪಿ. ಶಶಿ ಶಿವಕುಮಾರ್, ಪಾಲಿಕೆ ಜಂಟಿ ಆಯುಕ್ತ ಎಲ್.ರಾಧಾಕೃಷ್ಣ, ಜಯರಂಗ, ಎಂ.ಗೋಪಾಲಕೃಷ್ಣ, ಪೊಲೀಸ್ ಅಧಿಕಾರಿಗಳಾದ ಹನುಮಂತಪ್ಪ, ರಂಗಸ್ವಾಮಿ, ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>