<p><strong>ಅಂಕೋಲಾ: </strong>ನಗರದ ಹೃದಯ ಭಾಗದಲ್ಲಿರುವ ಸ್ವಾತಂತ್ರ್ಯ ಸಂಗ್ರಾಮ ಭವನವನ್ನು ನವೀಕರಿಸುವ ಕುರಿತು ಶನಿವಾರ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯನವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಸರ್ಕಾರ 1 ಕೋಟಿ ರೂಪಾಯಿಗಳನ್ನು ಈ ಕಾರ್ಯಕ್ಕೆ ಬಿಡುಗಡೆಗೊಳಿಸಿದ್ದು, ನವೀಕರಣದ ವಿನ್ಯಾಸವನ್ನು ಹುಬ್ಬಳ್ಳಿಯ ಭೂಮರೆಡ್ಡಿ ಅಭಿಯಾಂತ್ರಿಕ ಕಾಲೇಜಿನ ವಾಸ್ತುಶಿಲ್ಪಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಅರವಿಂದ ಗಲಗಲಿ ರೂಪಿಸಿಕೊಡಲಿದ್ದಾರೆ. <br /> <br /> ಈ ಕುರಿತ ಮಾದರಿಗಳನ್ನು ಸಭೆಯಲ್ಲಿ ಅರವಿಂದ ಅವರು ಪ್ರದರ್ಶಿಸಿದರು. ಸ್ವಾತಂತ್ರ್ಯ ಭವನ ಸಮಿತಿ ಕಾರ್ಯದರ್ಶಿಗಳಾದ ತಹಸೀಲ್ದಾರ ಡಾ. ಉದಯಕುಮಾರ ಶೆಟ್ಟಿ ಜುಲೈ ತಿಂಗಳಿನಲ್ಲಿ ಜರುಗಿದ ಸಭೆಯ ನಡಾವಳಿಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. <br /> <br /> ಲೋಕೋಪಯೋಗಿ ಇಲಾಖೆಯವರು ಸಿವಿಲ್ ಕಾಮಗಾರಿಗಳನ್ನು ನಿರ್ವಹಿಸುವುದು, ಮಹಾತ್ಮಾ ಗಾಂಧೀಜಿಯವರ ಹಾಗೂ ಈ ಪ್ರದೇಶದ ಸ್ವಾತಂತ್ರ್ಯ ಯೋಧರ ದಾಪುಗಾಲಿನ ಕಂಚಿನ ಪ್ರತಿಮೆಗಳನ್ನು ನಿರ್ಮಿಸುವುದು, ವಸ್ತುಸಂಗ್ರಹಾಲಯ, ಗ್ರಂಥಾಲಯ, ಅತಿಥಿಗೃಹ ಮುಂತಾದವುಗಳ ನಿರ್ಮಾಣ ಕುರಿತು ವಿವರಿಸಿದರು.<br /> <br /> ಸ್ವಾತಂತ್ರ್ಯ ಭವನದ ಕಟ್ಟದಲ್ಲಿ ಕಳೆದ ಮೂರು ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಯ ನಿರ್ವಹಿಸುತ್ತಿದೆ. ಇದಕ್ಕೆ ಬಾಡಿಗೆ ನಿಗದಿಪಡಿಸಿ ಕಾಲೇಜು ಶಿಕ್ಷಣ ಇಲಾಖೆಗೆ ಪತ್ರ ಬರೆಯಲು ಜಿಲ್ಲಾಧಿಕಾರಿಗಳು ತಹಸೀಲ್ದಾರರಿಗೆ ಸೂಚಿಸಿದರು. <br /> <br /> ಸಭೆಯಲ್ಲಿ ಸತ್ಯಾಗ್ರಹ ಸ್ಮಾರಕ ಸಮಿತಿಯ ಹಿರಿಯರಾದ ವಿ.ಜೆ. ನಾಯಕ, ಲೋಕೋಪಯೋಗಿ ಇಂಜಿನಿಯರ್ ವಿ.ವಿ. ನವಲೆ, ನಿರ್ಮಿತಿ ಇಲಾಖೆಯ ಯೋಜನಾಧಿಕಾರಿ ಶಂಕರಲಿಂಗ ಗೋಗಿ. ಪಟ್ಟಣ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾರ್ವೇಕರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ: </strong>ನಗರದ ಹೃದಯ ಭಾಗದಲ್ಲಿರುವ ಸ್ವಾತಂತ್ರ್ಯ ಸಂಗ್ರಾಮ ಭವನವನ್ನು ನವೀಕರಿಸುವ ಕುರಿತು ಶನಿವಾರ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯನವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಸರ್ಕಾರ 1 ಕೋಟಿ ರೂಪಾಯಿಗಳನ್ನು ಈ ಕಾರ್ಯಕ್ಕೆ ಬಿಡುಗಡೆಗೊಳಿಸಿದ್ದು, ನವೀಕರಣದ ವಿನ್ಯಾಸವನ್ನು ಹುಬ್ಬಳ್ಳಿಯ ಭೂಮರೆಡ್ಡಿ ಅಭಿಯಾಂತ್ರಿಕ ಕಾಲೇಜಿನ ವಾಸ್ತುಶಿಲ್ಪಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಅರವಿಂದ ಗಲಗಲಿ ರೂಪಿಸಿಕೊಡಲಿದ್ದಾರೆ. <br /> <br /> ಈ ಕುರಿತ ಮಾದರಿಗಳನ್ನು ಸಭೆಯಲ್ಲಿ ಅರವಿಂದ ಅವರು ಪ್ರದರ್ಶಿಸಿದರು. ಸ್ವಾತಂತ್ರ್ಯ ಭವನ ಸಮಿತಿ ಕಾರ್ಯದರ್ಶಿಗಳಾದ ತಹಸೀಲ್ದಾರ ಡಾ. ಉದಯಕುಮಾರ ಶೆಟ್ಟಿ ಜುಲೈ ತಿಂಗಳಿನಲ್ಲಿ ಜರುಗಿದ ಸಭೆಯ ನಡಾವಳಿಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. <br /> <br /> ಲೋಕೋಪಯೋಗಿ ಇಲಾಖೆಯವರು ಸಿವಿಲ್ ಕಾಮಗಾರಿಗಳನ್ನು ನಿರ್ವಹಿಸುವುದು, ಮಹಾತ್ಮಾ ಗಾಂಧೀಜಿಯವರ ಹಾಗೂ ಈ ಪ್ರದೇಶದ ಸ್ವಾತಂತ್ರ್ಯ ಯೋಧರ ದಾಪುಗಾಲಿನ ಕಂಚಿನ ಪ್ರತಿಮೆಗಳನ್ನು ನಿರ್ಮಿಸುವುದು, ವಸ್ತುಸಂಗ್ರಹಾಲಯ, ಗ್ರಂಥಾಲಯ, ಅತಿಥಿಗೃಹ ಮುಂತಾದವುಗಳ ನಿರ್ಮಾಣ ಕುರಿತು ವಿವರಿಸಿದರು.<br /> <br /> ಸ್ವಾತಂತ್ರ್ಯ ಭವನದ ಕಟ್ಟದಲ್ಲಿ ಕಳೆದ ಮೂರು ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾರ್ಯ ನಿರ್ವಹಿಸುತ್ತಿದೆ. ಇದಕ್ಕೆ ಬಾಡಿಗೆ ನಿಗದಿಪಡಿಸಿ ಕಾಲೇಜು ಶಿಕ್ಷಣ ಇಲಾಖೆಗೆ ಪತ್ರ ಬರೆಯಲು ಜಿಲ್ಲಾಧಿಕಾರಿಗಳು ತಹಸೀಲ್ದಾರರಿಗೆ ಸೂಚಿಸಿದರು. <br /> <br /> ಸಭೆಯಲ್ಲಿ ಸತ್ಯಾಗ್ರಹ ಸ್ಮಾರಕ ಸಮಿತಿಯ ಹಿರಿಯರಾದ ವಿ.ಜೆ. ನಾಯಕ, ಲೋಕೋಪಯೋಗಿ ಇಂಜಿನಿಯರ್ ವಿ.ವಿ. ನವಲೆ, ನಿರ್ಮಿತಿ ಇಲಾಖೆಯ ಯೋಜನಾಧಿಕಾರಿ ಶಂಕರಲಿಂಗ ಗೋಗಿ. ಪಟ್ಟಣ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾರ್ವೇಕರ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>