<p>ಮರವಂತೆ (ಬೈಂದೂರು): ಸ್ವಾತಂತ್ರ್ಯ ಹೋರಾಟ ಕಾಲದ ತಲೆಮಾರು ಈಗ ವಿರಳವಾಗುತ್ತಿದ್ದು, ಎಳೆಯರಿಗೆ ಅದರ ಪರಿಚಯವಿಲ್ಲ. ಕನಿಷ್ಠ ಸ್ವಾತಂತ್ರ್ಯ ದಿನವಾದರೂ ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸಬೇಕು ಎಂದು ಮರವಂತೆಯ ಸೇವಾ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಜತೀಂದ್ರ ಮರವಂತೆ ಹೇಳಿದರು. <br /> <br /> ವೇದಿಕೆಯ ಆಶ್ರಯದಲ್ಲಿ ಬುಧವಾರ ನಡೆದ ಸ್ವಾತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ರೋಟರಿ ಓರ್ಚರ್ಡ್ಸ್ ಉಚಿತವಾಗಿ ನೀಡಿದ 40 ಆಂಗ್ಲ-ಕನ್ನಡ ಪದಕೋಶಗಳನ್ನು ಇಲ್ಲಿನ ಸರ್ಕಾರಿ ಪ್ರೌಢಶಾಲೆಯ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಿದರು. <br /> <br /> ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಣೆ, ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ನಡೆಸಿ, ವಿಜೇತರಿಗೆ ಬಹುಮಾನ ವಿತರಿಸ ಲಾಯಿತು. ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾನ್ವಿತರನ್ನು ಪುರಸ್ಕರಿಸಲಾಯಿತು. <br /> <br /> ಸಾಧನಾ ಸ್ಥಾಪಕಾಧ್ಯಕ್ಷ ಎಸ್. ಜನಾರ್ದನ ಸ್ವಾಗತಿಸಿದರು. ಸದಸ್ಯ ನಾಗೇಶ ಎಸ್. ರಾವ್ ವಂದಿಸಿದರು. ಕಾರ್ಯದರ್ಶಿ ರತ್ನಾಕರ ಬಿಲ್ಲವ, ಪ್ರೌಢಶಾಲಾ ಶಿಕ್ಷಕ ಎಚ್. ಸುಬ್ಬಣ್ಣ ಉಡುಪ ಇತರರು ಸಮಾರಂಭದಲ್ಲಿ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮರವಂತೆ (ಬೈಂದೂರು): ಸ್ವಾತಂತ್ರ್ಯ ಹೋರಾಟ ಕಾಲದ ತಲೆಮಾರು ಈಗ ವಿರಳವಾಗುತ್ತಿದ್ದು, ಎಳೆಯರಿಗೆ ಅದರ ಪರಿಚಯವಿಲ್ಲ. ಕನಿಷ್ಠ ಸ್ವಾತಂತ್ರ್ಯ ದಿನವಾದರೂ ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸಬೇಕು ಎಂದು ಮರವಂತೆಯ ಸೇವಾ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಜತೀಂದ್ರ ಮರವಂತೆ ಹೇಳಿದರು. <br /> <br /> ವೇದಿಕೆಯ ಆಶ್ರಯದಲ್ಲಿ ಬುಧವಾರ ನಡೆದ ಸ್ವಾತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ರೋಟರಿ ಓರ್ಚರ್ಡ್ಸ್ ಉಚಿತವಾಗಿ ನೀಡಿದ 40 ಆಂಗ್ಲ-ಕನ್ನಡ ಪದಕೋಶಗಳನ್ನು ಇಲ್ಲಿನ ಸರ್ಕಾರಿ ಪ್ರೌಢಶಾಲೆಯ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಿದರು. <br /> <br /> ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಣೆ, ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ನಡೆಸಿ, ವಿಜೇತರಿಗೆ ಬಹುಮಾನ ವಿತರಿಸ ಲಾಯಿತು. ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾನ್ವಿತರನ್ನು ಪುರಸ್ಕರಿಸಲಾಯಿತು. <br /> <br /> ಸಾಧನಾ ಸ್ಥಾಪಕಾಧ್ಯಕ್ಷ ಎಸ್. ಜನಾರ್ದನ ಸ್ವಾಗತಿಸಿದರು. ಸದಸ್ಯ ನಾಗೇಶ ಎಸ್. ರಾವ್ ವಂದಿಸಿದರು. ಕಾರ್ಯದರ್ಶಿ ರತ್ನಾಕರ ಬಿಲ್ಲವ, ಪ್ರೌಢಶಾಲಾ ಶಿಕ್ಷಕ ಎಚ್. ಸುಬ್ಬಣ್ಣ ಉಡುಪ ಇತರರು ಸಮಾರಂಭದಲ್ಲಿ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>