<p><strong>ಚಿಕ್ಕಮಗಳೂರು:</strong> ಬಿ.ಎಸ್.ಆರ್. ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಶಾಸಕ ಶ್ರೀರಾಮುಲು ಇದೇ 29ರಿಂದ ಆಗಸ್ಟ್ 5ವರೆಗೆ ಕೈಗೊಂಡಿರುವ ಸ್ವಾಭಿಮಾನಿ ಸಂಕಲ್ಪಯಾತ್ರೆ ಜುಲೈ 31ರಂದು ಸಂಜೆ 5ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿದೆ ಎಂದು ಪಕ್ಷದ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ನಟಿ ರಕ್ಷಿತಾ ಪ್ರೇಮ್ ತಿಳಿಸಿದರು.<br /> <br /> ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಹಾಸನ ಮೂಲಕ ಜಿಲ್ಲೆ ಪ್ರವೇಶಿಸುವ ಯಾತ್ರೆಯು ಅಂದು ರಾತ್ರಿ ಶೃಂಗೇರಿಯಲ್ಲಿ ವಾಸ್ತವ್ಯ ಮಾಡಿ ಮರು ದಿನ ಉಡುಪಿ ಜಿಲ್ಲೆ ಪ್ರವೇಶಿಸಲಿದೆ. ನಂತರ ರಾಮನಗರದಲ್ಲಿ ಮುಕ್ತಾಯವಾಗಲಿದೆ ಎಂದು ಹೇಳಿದರು.<br /> <br /> ಪಕ್ಷ ಉದಯಕ್ಕೂ ಮೊದಲೇ ಜಿಲ್ಲೆಯಲ್ಲಿ ಶ್ರೀರಾಮುಲು ಅಭಿಮಾನಿಗಳ ಬಳಕ ಅಸ್ತಿತ್ವಕ್ಕೆ ಬಂದಿದೆ. ಸುಮಾರು 980 ಸದಸ್ಯರನ್ನು ಹೊಂದಿದ್ದು, ಈ ಸಮಾವೇಶಕ್ಕೆ ಬೆಂಬಲ ನೀಡುವವರು. ಪಕ್ಷ ಬಲಪಡಿಸಲು ಮತ್ತು ಜನರ ಸಮಸ್ಯೆ ಅರಿಯಲು ಈ ಯಾತ್ರೆ ಸಹಕಾರಿಯಾಗಲಿದೆ ಎಂದರು.<br /> <br /> ಮಲೆನಾಡು ಮತ್ತು ಬಯಲು ಪ್ರದೇಶಗಳನ್ನು ಒಳಗೊಂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಕಲ್ಪಯಾತ್ರೆ ಅಂಗವಾಗಿ ಬೈಕ್ ರ್ಯಾಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಮಳೆ ಆರಂಭವಾದರೆ ರ್ಯಾಲಿಗೆ ತೊಡಕಾಗುವ ಸಂಭವಿರುವುದರಿಂದ ರ್ಯಾಲಿ ಕೈಬಿಡಲು ನಿರ್ಧರಿಸಲಾಗಿದೆ. ನಗರ ಮತ್ತು ಪಟ್ಟಣ ಪ್ರವೇಶಿಸಿದಾಕ್ಷಣ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.<br /> <br /> ಸಮಾನತೆ, ಸಮಬಾಳು ಮತ್ತು ಸಮಗ್ರ ಕರ್ನಾಟಕ ನಿರ್ಮಾಣಕ್ಕೆ ಹಾಗೂ ಬರಪೀಡಿತ ಪ್ರದೇಶದ ಜನರ ಸಮಸ್ಯೆಯನ್ನು ಮುಂದಿಟ್ಟುಕೊಂಡು ಈಗಾಗಲೇ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿತ್ತು. ಈಗ ಆಯಾ ಜಿಲ್ಲೆಯ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ಬಗೆಹರಿಸಲು ಸರ್ಕಾರದ ಗಮನ ಸೆಳೆಯುವ ದೃಷ್ಟಿಯಿಂದ ಸಂಕಲ್ಪಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.<br /> <br /> ಮುಖಂಡ ಪ್ರವೀಣ್ಕುಮಾರ್ ಮಾತನಾಡಿ, ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳು ಸೇರಿದಂತೆ ರಾಜ್ಯದ 224 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಬಿ.ಎಸ್.ಆರ್. ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಶಾಸಕ ಶ್ರೀರಾಮುಲು ಇದೇ 29ರಿಂದ ಆಗಸ್ಟ್ 5ವರೆಗೆ ಕೈಗೊಂಡಿರುವ ಸ್ವಾಭಿಮಾನಿ ಸಂಕಲ್ಪಯಾತ್ರೆ ಜುಲೈ 31ರಂದು ಸಂಜೆ 5ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿದೆ ಎಂದು ಪಕ್ಷದ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ನಟಿ ರಕ್ಷಿತಾ ಪ್ರೇಮ್ ತಿಳಿಸಿದರು.<br /> <br /> ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಹಾಸನ ಮೂಲಕ ಜಿಲ್ಲೆ ಪ್ರವೇಶಿಸುವ ಯಾತ್ರೆಯು ಅಂದು ರಾತ್ರಿ ಶೃಂಗೇರಿಯಲ್ಲಿ ವಾಸ್ತವ್ಯ ಮಾಡಿ ಮರು ದಿನ ಉಡುಪಿ ಜಿಲ್ಲೆ ಪ್ರವೇಶಿಸಲಿದೆ. ನಂತರ ರಾಮನಗರದಲ್ಲಿ ಮುಕ್ತಾಯವಾಗಲಿದೆ ಎಂದು ಹೇಳಿದರು.<br /> <br /> ಪಕ್ಷ ಉದಯಕ್ಕೂ ಮೊದಲೇ ಜಿಲ್ಲೆಯಲ್ಲಿ ಶ್ರೀರಾಮುಲು ಅಭಿಮಾನಿಗಳ ಬಳಕ ಅಸ್ತಿತ್ವಕ್ಕೆ ಬಂದಿದೆ. ಸುಮಾರು 980 ಸದಸ್ಯರನ್ನು ಹೊಂದಿದ್ದು, ಈ ಸಮಾವೇಶಕ್ಕೆ ಬೆಂಬಲ ನೀಡುವವರು. ಪಕ್ಷ ಬಲಪಡಿಸಲು ಮತ್ತು ಜನರ ಸಮಸ್ಯೆ ಅರಿಯಲು ಈ ಯಾತ್ರೆ ಸಹಕಾರಿಯಾಗಲಿದೆ ಎಂದರು.<br /> <br /> ಮಲೆನಾಡು ಮತ್ತು ಬಯಲು ಪ್ರದೇಶಗಳನ್ನು ಒಳಗೊಂಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಕಲ್ಪಯಾತ್ರೆ ಅಂಗವಾಗಿ ಬೈಕ್ ರ್ಯಾಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಮಳೆ ಆರಂಭವಾದರೆ ರ್ಯಾಲಿಗೆ ತೊಡಕಾಗುವ ಸಂಭವಿರುವುದರಿಂದ ರ್ಯಾಲಿ ಕೈಬಿಡಲು ನಿರ್ಧರಿಸಲಾಗಿದೆ. ನಗರ ಮತ್ತು ಪಟ್ಟಣ ಪ್ರವೇಶಿಸಿದಾಕ್ಷಣ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.<br /> <br /> ಸಮಾನತೆ, ಸಮಬಾಳು ಮತ್ತು ಸಮಗ್ರ ಕರ್ನಾಟಕ ನಿರ್ಮಾಣಕ್ಕೆ ಹಾಗೂ ಬರಪೀಡಿತ ಪ್ರದೇಶದ ಜನರ ಸಮಸ್ಯೆಯನ್ನು ಮುಂದಿಟ್ಟುಕೊಂಡು ಈಗಾಗಲೇ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿತ್ತು. ಈಗ ಆಯಾ ಜಿಲ್ಲೆಯ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ಬಗೆಹರಿಸಲು ಸರ್ಕಾರದ ಗಮನ ಸೆಳೆಯುವ ದೃಷ್ಟಿಯಿಂದ ಸಂಕಲ್ಪಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.<br /> <br /> ಮುಖಂಡ ಪ್ರವೀಣ್ಕುಮಾರ್ ಮಾತನಾಡಿ, ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳು ಸೇರಿದಂತೆ ರಾಜ್ಯದ 224 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>