<p><strong>ಸಾಗರ: </strong>ಸ್ವಾಸ್ಥ್ಯ ಬೀಮಾ ಯೋಜನೆಯಡಿ ಫಲಾನುಭವಿಗಳ ಪಟ್ಟಿಯಲ್ಲಿ ಕೂಲಿಕಾರ್ಮಿಕರ ಹೆಸರನ್ನು ಕೈಬಿಟ್ಟಿದ್ದು ಹೊಸದಾಗಿ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಆವಿನಹಳ್ಳಿ ಹಾಗೂ ಮತ್ತಿಕೊಪ್ಪ ಗ್ರಾಮಸ್ಥರು ಸೋಮವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.<br /> <br /> ಈ ಹಿಂದೆ ಮಾಡಿರುವ ಸಮೀಕ್ಷೆಯಲ್ಲಿ ಆಗಿರುವ ಲೋಪ- ದೋಷಗಳಿಂದ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗುವಂತಾಗಿದೆ. ಇದೇ ಪಟ್ಟಿಯನ್ನು ಆಧರಿಸಿ ಯೋಜನೆಯ ಫಲಾನುಭವಿಗಳನ್ನು ಗುರುತಿಸಿದರೆ ಯೋಜನೆಯ ಉದ್ದೇಶವೇ ನಿರರ್ಥಕವಾದಂತೆ ಎಂದು ಗ್ರಾಮಸ್ಥರು ದೂರಿದರು.<br /> <br /> ಹೊಸದಾಗಿ ಸಮೀಕ್ಷೆ ನಡೆಸುವ ಮೂಲಕ ಅರ್ಹ ಫಲಾನುಭವಿಗಳ ಭಾವಚಿತ್ರ ತೆಗೆದು ಕಾರ್ಡ್ ವಿತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಮಂಜಪ್ಪ, ಕೃಷ್ಣಪ್ಪ, ಕಲಾವತಿ, ಫಕೀರಪ್ಪ, ಸವಿತಾ, ಬಂಗಾರಪ್ಪ, ಮಲ್ಲಮ್ಮ, ರಾಮಚಂದ್ರ, ಶಾರದಾ, ಗೀತಾ, ಚನ್ನಬಸಪ್ಪ ಹಾಜರಿದ್ದರು. <br /> <br /> <strong>ಸ್ಪಷ್ಟನೆ </strong><br /> ಇಲ್ಲಿನ ದಲಿತ ಮುಖಂಡ ಅರಮನೆಕೇರಿ ನಾರಾಯಣ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಸಂಬಂಧ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಯಾವುದೇ ಮುಖಂಡರ ಬಗ್ಗೆ ಆರೋಪ ಮಾಡಿಲ್ಲ ಎಂದು ಪುರಸಭೆ ಮಾಜಿ ಸದಸ್ಯೆ ಲಲಿತಮ್ಮ ಸ್ಪಷ್ಟೀಕರಣ ನೀಡಿದ್ದಾರೆ.<br /> <br /> ಕೆಲವು ದಲಿತ ಮುಖಂಡರಿಂದ ಮುಗ್ಧರ ಶೋಷಣೆಯಾಗುತ್ತಿದೆ ಎಂದು ಹೇಳಿದ್ದೇನೆಯೇ ಹೊರತು ಡಿಎಸ್ಎಸ್ ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಸ್ವಾಸ್ಥ್ಯ ಬೀಮಾ ಯೋಜನೆಯಡಿ ಫಲಾನುಭವಿಗಳ ಪಟ್ಟಿಯಲ್ಲಿ ಕೂಲಿಕಾರ್ಮಿಕರ ಹೆಸರನ್ನು ಕೈಬಿಟ್ಟಿದ್ದು ಹೊಸದಾಗಿ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಆವಿನಹಳ್ಳಿ ಹಾಗೂ ಮತ್ತಿಕೊಪ್ಪ ಗ್ರಾಮಸ್ಥರು ಸೋಮವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.<br /> <br /> ಈ ಹಿಂದೆ ಮಾಡಿರುವ ಸಮೀಕ್ಷೆಯಲ್ಲಿ ಆಗಿರುವ ಲೋಪ- ದೋಷಗಳಿಂದ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗುವಂತಾಗಿದೆ. ಇದೇ ಪಟ್ಟಿಯನ್ನು ಆಧರಿಸಿ ಯೋಜನೆಯ ಫಲಾನುಭವಿಗಳನ್ನು ಗುರುತಿಸಿದರೆ ಯೋಜನೆಯ ಉದ್ದೇಶವೇ ನಿರರ್ಥಕವಾದಂತೆ ಎಂದು ಗ್ರಾಮಸ್ಥರು ದೂರಿದರು.<br /> <br /> ಹೊಸದಾಗಿ ಸಮೀಕ್ಷೆ ನಡೆಸುವ ಮೂಲಕ ಅರ್ಹ ಫಲಾನುಭವಿಗಳ ಭಾವಚಿತ್ರ ತೆಗೆದು ಕಾರ್ಡ್ ವಿತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಮಂಜಪ್ಪ, ಕೃಷ್ಣಪ್ಪ, ಕಲಾವತಿ, ಫಕೀರಪ್ಪ, ಸವಿತಾ, ಬಂಗಾರಪ್ಪ, ಮಲ್ಲಮ್ಮ, ರಾಮಚಂದ್ರ, ಶಾರದಾ, ಗೀತಾ, ಚನ್ನಬಸಪ್ಪ ಹಾಜರಿದ್ದರು. <br /> <br /> <strong>ಸ್ಪಷ್ಟನೆ </strong><br /> ಇಲ್ಲಿನ ದಲಿತ ಮುಖಂಡ ಅರಮನೆಕೇರಿ ನಾರಾಯಣ ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿರುವ ಸಂಬಂಧ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಯಾವುದೇ ಮುಖಂಡರ ಬಗ್ಗೆ ಆರೋಪ ಮಾಡಿಲ್ಲ ಎಂದು ಪುರಸಭೆ ಮಾಜಿ ಸದಸ್ಯೆ ಲಲಿತಮ್ಮ ಸ್ಪಷ್ಟೀಕರಣ ನೀಡಿದ್ದಾರೆ.<br /> <br /> ಕೆಲವು ದಲಿತ ಮುಖಂಡರಿಂದ ಮುಗ್ಧರ ಶೋಷಣೆಯಾಗುತ್ತಿದೆ ಎಂದು ಹೇಳಿದ್ದೇನೆಯೇ ಹೊರತು ಡಿಎಸ್ಎಸ್ ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>