<p><strong>ಬೆಂಗಳೂರು:</strong> `ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳ ರಕ್ಷಣೆಗೆ ಮುಂದಾಗಿರುವ ತಮಿಳುನಾಡು ಸರ್ಕಾರ ಹಾಗೂ ಕೆಲ ರಾಜಕೀಯ ಮುಖಂಡರ ಕ್ರಮ ಖಂಡನೀಯ~ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಅಧ್ಯಕ್ಷ ಎಸ್.ಎಸ್.ಪ್ರಕಾಶಂ ಇಲ್ಲಿ ತಿಳಿಸಿದರು.<br /> <br /> ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜೀವ್ಗಾಂಧಿ ಅವರ ಹತ್ಯೆಯಾದ 20 ವರ್ಷಗಳ ಬಳಿಕ ನ್ಯಾಯಾಲಯ ನೀಡಿರುವ ತೀರ್ಪು ಮಹತ್ವದಾಗಿದೆ. ಸುಪ್ರೀಂಕೋರ್ಟ್ನ ತೀರ್ಪಿಗೆ ವಿರುದ್ಧವಾಗಿ ಮರಣದಂಡನೆ ನೀಡದಂತೆ ಹೋರಾಡುತ್ತಿರುವ ತಮಿಳುನಾಡು ಸರ್ಕಾರದ ವರ್ತನೆ ಸಂವಿಧಾನ ವಿರೋಧಿಯಾಗಿದೆ. ಇದೆಲ್ಲಾ ಗಮನಿಸಿದರೆ ಉಗ್ರಗಾಮಿಗಳಿಗೆ ತಮಿಳುನಾಡು ಸರ್ಕಾರವೇ ಸಹಕಾರ ನೀಡುತ್ತಿರಬೇಕು~ ಎಂದು ಆರೋಪಿಸಿದರು.<br /> <br /> ರಾಷ್ಟ್ರಪತಿ ಅವರು ಸರ್ಕಾರದ ಯಾವುದೇ ಒತ್ತಡಕ್ಕೆ ಮಣಿಯಬಾರದು. ಕೂಡಲೇ ಹಂತಕರಿಗೆ ಗಲ್ಲುಶಿಕ್ಷೆಗೆ ಆದೇಶಿಸಬೇಕು ಎಂದು ಮನವಿ ಮಾಡಿದರು. ಈ ಸಂಬಂಧ ಕೆಪಿಸಿಸಿಯ ಕಾರ್ಮಿಕ ವಿಭಾಗ ಹಾಗೂ ರಾಜೀವ್ಗಾಂಧಿ ಜ್ಯೋತಿ ಸದ್ಬಾಭವನ ಸಮಿತಿಯ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೇರಳ ರಾಜ್ಯಗಳ ಸಾವಿರಾರು ಸದಸ್ಯರು ದೆಹಲಿಗೆ ತೆರಳಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಗುವುದು~ ಎಂದರು.<br /> <br /> ರಾಜೀವ್ಗಾಂಧಿ ಹತ್ಯೆಯ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಮರಣ ದಂಡನೆ ಹಿಂತೆಗೆದುಕೊಳ್ಳಲು ಮುಂದಾದರೆ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ಮಾಡಲು ಸಮಿತಿ ತೀರ್ಮಾನಿಸಿದೆ ಎಂದು ಅವರು ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಮೋಹನ್ ರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳ ರಕ್ಷಣೆಗೆ ಮುಂದಾಗಿರುವ ತಮಿಳುನಾಡು ಸರ್ಕಾರ ಹಾಗೂ ಕೆಲ ರಾಜಕೀಯ ಮುಖಂಡರ ಕ್ರಮ ಖಂಡನೀಯ~ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಅಧ್ಯಕ್ಷ ಎಸ್.ಎಸ್.ಪ್ರಕಾಶಂ ಇಲ್ಲಿ ತಿಳಿಸಿದರು.<br /> <br /> ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜೀವ್ಗಾಂಧಿ ಅವರ ಹತ್ಯೆಯಾದ 20 ವರ್ಷಗಳ ಬಳಿಕ ನ್ಯಾಯಾಲಯ ನೀಡಿರುವ ತೀರ್ಪು ಮಹತ್ವದಾಗಿದೆ. ಸುಪ್ರೀಂಕೋರ್ಟ್ನ ತೀರ್ಪಿಗೆ ವಿರುದ್ಧವಾಗಿ ಮರಣದಂಡನೆ ನೀಡದಂತೆ ಹೋರಾಡುತ್ತಿರುವ ತಮಿಳುನಾಡು ಸರ್ಕಾರದ ವರ್ತನೆ ಸಂವಿಧಾನ ವಿರೋಧಿಯಾಗಿದೆ. ಇದೆಲ್ಲಾ ಗಮನಿಸಿದರೆ ಉಗ್ರಗಾಮಿಗಳಿಗೆ ತಮಿಳುನಾಡು ಸರ್ಕಾರವೇ ಸಹಕಾರ ನೀಡುತ್ತಿರಬೇಕು~ ಎಂದು ಆರೋಪಿಸಿದರು.<br /> <br /> ರಾಷ್ಟ್ರಪತಿ ಅವರು ಸರ್ಕಾರದ ಯಾವುದೇ ಒತ್ತಡಕ್ಕೆ ಮಣಿಯಬಾರದು. ಕೂಡಲೇ ಹಂತಕರಿಗೆ ಗಲ್ಲುಶಿಕ್ಷೆಗೆ ಆದೇಶಿಸಬೇಕು ಎಂದು ಮನವಿ ಮಾಡಿದರು. ಈ ಸಂಬಂಧ ಕೆಪಿಸಿಸಿಯ ಕಾರ್ಮಿಕ ವಿಭಾಗ ಹಾಗೂ ರಾಜೀವ್ಗಾಂಧಿ ಜ್ಯೋತಿ ಸದ್ಬಾಭವನ ಸಮಿತಿಯ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೇರಳ ರಾಜ್ಯಗಳ ಸಾವಿರಾರು ಸದಸ್ಯರು ದೆಹಲಿಗೆ ತೆರಳಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಗುವುದು~ ಎಂದರು.<br /> <br /> ರಾಜೀವ್ಗಾಂಧಿ ಹತ್ಯೆಯ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಮರಣ ದಂಡನೆ ಹಿಂತೆಗೆದುಕೊಳ್ಳಲು ಮುಂದಾದರೆ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ಮಾಡಲು ಸಮಿತಿ ತೀರ್ಮಾನಿಸಿದೆ ಎಂದು ಅವರು ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಮೋಹನ್ ರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>