<p><strong>ಬೆಂಗಳೂರು: </strong>ಹಂಪಿ ಪರಂಪರೆ ತಾಣದ ಒಳಭಾಗದಲ್ಲಿ ಕೆಲವರು ಒತ್ತುವರಿ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದ ಸ್ಥಳ ನಕ್ಷೆಯನ್ನು ಹಂಪಿ ವಿಶ್ವ ಪರಂಪರೆ ತಾಣ ನಿರ್ವಹಣಾ ಪ್ರಾಧಿಕಾರದ ಆಯುಕ್ತರು ಸೋಮವಾರ ಹೈಕೋ ರ್ಟ್ಗೆ ಸಲ್ಲಿಸಿದರು.<br /> <br /> ಒತ್ತುವರಿದಾರರಿಗೆ ಪುನರ್ವಸತಿ ಕಲ್ಪಿಸುವ ಪ್ರಾಧಿಕಾರದ ಪ್ರಸ್ತಾವವನ್ನು ಪ್ರಶ್ನಿಸಿ ಭುವನೇಶ್ವರಿ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ನಡೆಯಿತು. <br /> <br /> ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠಕ್ಕೆ ಸ್ಥಳ ನಕ್ಷೆ ಸಲ್ಲಿಸಿದ ಪ್ರಾಧಿಕಾರದ ಆಯುಕ್ತರು, ಅದಕ್ಕೆ ಸಂಬಂಧಿಸಿದ ವಿವರ ನೀಡಿದರು. ಬಳಿಕ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಲಾಯಿತು.<br /> <br /> ಫೆಬ್ರುವರಿ 24ರಂದು ಪ್ರಕರಣದ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಅರ್ಜಿದಾರರು ಒತ್ತುವರಿ ಮಾಡಿಕೊಂಡಿರುವ ಪ್ರದೇಶಕ್ಕೆ ಸಂಬಂಧಿಸಿದ ಸ್ಥಳ ನಕ್ಷೆಯನ್ನು ಐದು ದಿನಗಳೊಳಗೆ ಸಲ್ಲಿಸುವಂತೆ ಆಯುಕ್ತರಿಗೆ ಆದೇಶಿಸಿತ್ತು.<br /> <br /> ಪುನರ್ವಸತಿ ಸ್ಥಳದ ಬಗ್ಗೆಯೂ ಮಾಹಿತಿ ನೀಡುವಂತೆ ನ್ಯಾಯಪೀಠ ಸೂಚಿಸಿತ್ತು.<br /> <br /> ಪುರಾತನ ಸ್ಮಾರಕಗಳು ಮತ್ತು ಪ್ರಾಚ್ಯವಸ್ತು ಸಂರಕ್ಷಣಾ ಕಾಯ್ದೆ 1958ರ ಅಡಿಯಲ್ಲಿ ಕೇಂದ್ರ ಸರ್ಕಾರ 2003ರ ಸೆಪ್ಟೆಂಬರ್ 15ರಂದು ಅಧಿಸೂಚನೆ ಪ್ರಕಟಿಸಿದೆ. <br /> <br /> ಈ ಅಧಿಸೂಚನೆ ಪ್ರಕಾರ ಹಂಪಿ ಸ್ಮಾರಕವು ಸರ್ವೆ ನಂಬರ್ 109, 130, 135, 136, 149 ಮತ್ತು 153ರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಆಯುಕ್ತರು ವಿವರಿಸಿದರು.<br /> <br /> ತಮ್ಮನ್ನು ಕಾನೂನುಬಾಹಿರವಾಗಿ ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಅರ್ಜಿದಾರರ ವಾದದಲ್ಲಿ ಹುರುಳಿಲ್ಲ. ಅವರು ನಿಷೇಧಿತ ವಲಯದಲ್ಲಿ ಇದ್ದಾರೆ. ಒತ್ತುವರಿದಾರರಿಗೆ ಪುರ್ನವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹಂಪಿ ಪರಂಪರೆ ತಾಣದ ಒಳಭಾಗದಲ್ಲಿ ಕೆಲವರು ಒತ್ತುವರಿ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದ ಸ್ಥಳ ನಕ್ಷೆಯನ್ನು ಹಂಪಿ ವಿಶ್ವ ಪರಂಪರೆ ತಾಣ ನಿರ್ವಹಣಾ ಪ್ರಾಧಿಕಾರದ ಆಯುಕ್ತರು ಸೋಮವಾರ ಹೈಕೋ ರ್ಟ್ಗೆ ಸಲ್ಲಿಸಿದರು.<br /> <br /> ಒತ್ತುವರಿದಾರರಿಗೆ ಪುನರ್ವಸತಿ ಕಲ್ಪಿಸುವ ಪ್ರಾಧಿಕಾರದ ಪ್ರಸ್ತಾವವನ್ನು ಪ್ರಶ್ನಿಸಿ ಭುವನೇಶ್ವರಿ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ನಡೆಯಿತು. <br /> <br /> ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠಕ್ಕೆ ಸ್ಥಳ ನಕ್ಷೆ ಸಲ್ಲಿಸಿದ ಪ್ರಾಧಿಕಾರದ ಆಯುಕ್ತರು, ಅದಕ್ಕೆ ಸಂಬಂಧಿಸಿದ ವಿವರ ನೀಡಿದರು. ಬಳಿಕ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಲಾಯಿತು.<br /> <br /> ಫೆಬ್ರುವರಿ 24ರಂದು ಪ್ರಕರಣದ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಅರ್ಜಿದಾರರು ಒತ್ತುವರಿ ಮಾಡಿಕೊಂಡಿರುವ ಪ್ರದೇಶಕ್ಕೆ ಸಂಬಂಧಿಸಿದ ಸ್ಥಳ ನಕ್ಷೆಯನ್ನು ಐದು ದಿನಗಳೊಳಗೆ ಸಲ್ಲಿಸುವಂತೆ ಆಯುಕ್ತರಿಗೆ ಆದೇಶಿಸಿತ್ತು.<br /> <br /> ಪುನರ್ವಸತಿ ಸ್ಥಳದ ಬಗ್ಗೆಯೂ ಮಾಹಿತಿ ನೀಡುವಂತೆ ನ್ಯಾಯಪೀಠ ಸೂಚಿಸಿತ್ತು.<br /> <br /> ಪುರಾತನ ಸ್ಮಾರಕಗಳು ಮತ್ತು ಪ್ರಾಚ್ಯವಸ್ತು ಸಂರಕ್ಷಣಾ ಕಾಯ್ದೆ 1958ರ ಅಡಿಯಲ್ಲಿ ಕೇಂದ್ರ ಸರ್ಕಾರ 2003ರ ಸೆಪ್ಟೆಂಬರ್ 15ರಂದು ಅಧಿಸೂಚನೆ ಪ್ರಕಟಿಸಿದೆ. <br /> <br /> ಈ ಅಧಿಸೂಚನೆ ಪ್ರಕಾರ ಹಂಪಿ ಸ್ಮಾರಕವು ಸರ್ವೆ ನಂಬರ್ 109, 130, 135, 136, 149 ಮತ್ತು 153ರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಆಯುಕ್ತರು ವಿವರಿಸಿದರು.<br /> <br /> ತಮ್ಮನ್ನು ಕಾನೂನುಬಾಹಿರವಾಗಿ ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಅರ್ಜಿದಾರರ ವಾದದಲ್ಲಿ ಹುರುಳಿಲ್ಲ. ಅವರು ನಿಷೇಧಿತ ವಲಯದಲ್ಲಿ ಇದ್ದಾರೆ. ಒತ್ತುವರಿದಾರರಿಗೆ ಪುರ್ನವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>