<p>ಬೆಂಗಳೂರು: ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಹೆಸರಘಟ್ಟ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಸಂಸ್ಥೆ (ಸಿಡಿಪಿಒ) ಆವರಣದಲ್ಲಿರುವ ಜ್ಯೋತಿ ವಿದ್ಯಾಲಯವನ್ನು ಇದೇ 15ರ ವರೆಗೆ ಮುಚ್ಚಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ಸೋಮವಾರ ಆದೇಶ ಹೊರಡಿಸಿದ್ದಾರೆ. <br /> <br /> ಇಲ್ಲಿನ ಹಕ್ಕಿಗಳು ಹಕ್ಕಿಜ್ವರದ ಕಾರಣದಿಂದ ಮೃತಪಟ್ಟಿರುವುದು ಖಚಿತಗೊಂಡಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಯ ಒಂದರಿಂದ ಎಸ್ಸೆಸ್ಸೆಲ್ಸಿವರೆಗಿನ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. <br /> <br /> <strong>ಹಕ್ಕಿ ಜ್ವರ ಅಲ್ಲ:</strong> `ಹೆಸರಘಟ್ಟದ ಸಮೀಪದ ವಿನಾಯಕನಗರದಲ್ಲಿ ಮಂಜಮ್ಮ ಎಂಬವರ 12 ಕೋಳಿಗಳು ಶನಿವಾರ ಹಾಗೂ ಭಾನುವಾರ ಮೃತಪಟ್ಟಿದ್ದವು. ಮಾದರಿಯನ್ನು ಭೋಪಾಲ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸೋಮವಾರ ವರದಿ ಬಂದಿದ್ದು, ಹಕ್ಕಿ ಜ್ವರ ಅಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ~ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಮಂಜಮ್ಮ ಅವರ ಮನೆಯಲ್ಲಿ ಸೋಮವಾರ ಮತ್ತೆ ಐದು ಕೋಳಿಗಳು ಮೃತಪಟ್ಟಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಹೆಸರಘಟ್ಟ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಸಂಸ್ಥೆ (ಸಿಡಿಪಿಒ) ಆವರಣದಲ್ಲಿರುವ ಜ್ಯೋತಿ ವಿದ್ಯಾಲಯವನ್ನು ಇದೇ 15ರ ವರೆಗೆ ಮುಚ್ಚಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ.ಕೆ.ಅಯ್ಯಪ್ಪ ಸೋಮವಾರ ಆದೇಶ ಹೊರಡಿಸಿದ್ದಾರೆ. <br /> <br /> ಇಲ್ಲಿನ ಹಕ್ಕಿಗಳು ಹಕ್ಕಿಜ್ವರದ ಕಾರಣದಿಂದ ಮೃತಪಟ್ಟಿರುವುದು ಖಚಿತಗೊಂಡಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಯ ಒಂದರಿಂದ ಎಸ್ಸೆಸ್ಸೆಲ್ಸಿವರೆಗಿನ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. <br /> <br /> <strong>ಹಕ್ಕಿ ಜ್ವರ ಅಲ್ಲ:</strong> `ಹೆಸರಘಟ್ಟದ ಸಮೀಪದ ವಿನಾಯಕನಗರದಲ್ಲಿ ಮಂಜಮ್ಮ ಎಂಬವರ 12 ಕೋಳಿಗಳು ಶನಿವಾರ ಹಾಗೂ ಭಾನುವಾರ ಮೃತಪಟ್ಟಿದ್ದವು. ಮಾದರಿಯನ್ನು ಭೋಪಾಲ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸೋಮವಾರ ವರದಿ ಬಂದಿದ್ದು, ಹಕ್ಕಿ ಜ್ವರ ಅಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ~ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಮಂಜಮ್ಮ ಅವರ ಮನೆಯಲ್ಲಿ ಸೋಮವಾರ ಮತ್ತೆ ಐದು ಕೋಳಿಗಳು ಮೃತಪಟ್ಟಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>