<p>ಪಿರಿಯಾಪಟ್ಟಣ: ಸಮಾಜದಲ್ಲಿ ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತೊಲಗಿಸಿ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಲು ಸಂಘಟನೆಗಳು ಮುಂದಾಗಬೇಕು ಎಂದು ಧರ್ಮಾಧ್ಯಕ್ಷ ರೆ.ಫಾ.ಡಾ.ಬಿಷಪ್ಜಾರ್ಜ್ ಞರಳ್ಕ್ಕಾಟ್ ತಿಳಿಸಿದರು.<br /> <br /> ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳವಾರ ಚೈತನ್ಯ ಚಾರಿಟಬಲ್ ಟ್ರಸ್ಟ್, ಹರ್ಡ್ಸ್ ಫೌಂಡೇಶನ್ ಮತ್ತು ರಾಜಾಪುರ ರಿಕ್ರಿಯೇಷನ ಕ್ಲಬ್ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಈಗಿನ ಜನರು ಹೆಣ್ಣು ಮಗು ಜನಿಸಿದಾಗ ನಿರ್ಲಕ್ಷ್ಯ ತೋರುತ್ತಾರೆ. ಆದರೆ ಗಂಡು ಮಗು ಹುಟ್ಟಿದರೆ ಸಂತೋಷಪಡುತ್ತಾರೆ. ಇದು ವಿಷಾದನೀಯ ಸಂಗತಿ ಎಂದರು. <br /> ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ವಕೀಲರು ಮತ್ತು ಮಹಿಳಾಪರ ಹೋರಾಟಗಾರ್ತಿ ಬಿ.ರಾಧ ಮಾತನಾಡಿ ಮಹಿಳೆಯರಿಗೆ ಸಂಘಟನೆ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಸ್ಥಾನಗಳನ್ನು ಪಡೆಯಲು ಅಂತರಾಷ್ಟ್ರೀಯ ಮಟ್ಟಗಳಲ್ಲಿ ಸಾಮಾಜಿಕವಾಗಿ ಹಾಗೂ ಸಂಘಟಿತವಾಗಿ ಹೋರಾಟ ನಡೆಸಿದ್ದಾರೆ. ಸ್ತ್ರೀಯರು ಸಾಮಾಜಿಕವಾಗಿ ಬದ್ಧತೆಯನ್ನು ರೂಪಿಸಿಕೊಂಡು ಆರ್ಥಿಕವಾಗಿ ಶಿಸ್ತು ಅಳವಡಿಸಿಕೊಂಡು ದೌರ್ಜನ್ಯದ ವಿರುದ್ಧ ಹೋರಾಟ ನಡೆಸಬೇಕು ಎಂದರು.<br /> <br /> ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್.ನಟರಾಜ್ ಮಾತನಾಡಿ ಸಮಾಜದಲ್ಲಿ ಗಂಡು, ಹೆಣ್ಣು ಎಂಬ ಭೇದಭಾವವನ್ನು ಬಿಡಬೇಕು. ಮಹಿಳೆಯರಿಗೆ ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಚೈತನ್ಯ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷೆ ಸಿಸ್ಟರ್ ಫಿಲೋಜಾನ್ ಮತ್ತು ಪುಷ್ಪ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಫಾ.ರೆ.ಜೋಸ್ ಮಾತನಾಡಿದರು. ಸಮಾರಂಭದಲ್ಲಿ ರಾಜಾಪುರ ರಿಕ್ರಿಯೇಷನ್ ಕ್ಲಬ್ ಕಾರ್ಯದರ್ಶಿ ಧನಪಾಲ್, ಖಜಾಂಚಿ ಸ್ವಾಮಿ, ಸಹಕಾರ್ಯದರ್ಶಿ ಧನಂಜಯ, ಹರ್ಡ್ಸ್ ಫೌಂಡೇಶನ್ ಸಂಸ್ಥೆಯ ಕಾರ್ಯದರ್ಶಿ ಡಿ.ಪರೀಕ್ಷಿತ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಿರಿಯಾಪಟ್ಟಣ: ಸಮಾಜದಲ್ಲಿ ಸ್ತ್ರೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತೊಲಗಿಸಿ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಲು ಸಂಘಟನೆಗಳು ಮುಂದಾಗಬೇಕು ಎಂದು ಧರ್ಮಾಧ್ಯಕ್ಷ ರೆ.ಫಾ.ಡಾ.ಬಿಷಪ್ಜಾರ್ಜ್ ಞರಳ್ಕ್ಕಾಟ್ ತಿಳಿಸಿದರು.<br /> <br /> ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳವಾರ ಚೈತನ್ಯ ಚಾರಿಟಬಲ್ ಟ್ರಸ್ಟ್, ಹರ್ಡ್ಸ್ ಫೌಂಡೇಶನ್ ಮತ್ತು ರಾಜಾಪುರ ರಿಕ್ರಿಯೇಷನ ಕ್ಲಬ್ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.<br /> <br /> ಈಗಿನ ಜನರು ಹೆಣ್ಣು ಮಗು ಜನಿಸಿದಾಗ ನಿರ್ಲಕ್ಷ್ಯ ತೋರುತ್ತಾರೆ. ಆದರೆ ಗಂಡು ಮಗು ಹುಟ್ಟಿದರೆ ಸಂತೋಷಪಡುತ್ತಾರೆ. ಇದು ವಿಷಾದನೀಯ ಸಂಗತಿ ಎಂದರು. <br /> ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ವಕೀಲರು ಮತ್ತು ಮಹಿಳಾಪರ ಹೋರಾಟಗಾರ್ತಿ ಬಿ.ರಾಧ ಮಾತನಾಡಿ ಮಹಿಳೆಯರಿಗೆ ಸಂಘಟನೆ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಸ್ಥಾನಗಳನ್ನು ಪಡೆಯಲು ಅಂತರಾಷ್ಟ್ರೀಯ ಮಟ್ಟಗಳಲ್ಲಿ ಸಾಮಾಜಿಕವಾಗಿ ಹಾಗೂ ಸಂಘಟಿತವಾಗಿ ಹೋರಾಟ ನಡೆಸಿದ್ದಾರೆ. ಸ್ತ್ರೀಯರು ಸಾಮಾಜಿಕವಾಗಿ ಬದ್ಧತೆಯನ್ನು ರೂಪಿಸಿಕೊಂಡು ಆರ್ಥಿಕವಾಗಿ ಶಿಸ್ತು ಅಳವಡಿಸಿಕೊಂಡು ದೌರ್ಜನ್ಯದ ವಿರುದ್ಧ ಹೋರಾಟ ನಡೆಸಬೇಕು ಎಂದರು.<br /> <br /> ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್.ನಟರಾಜ್ ಮಾತನಾಡಿ ಸಮಾಜದಲ್ಲಿ ಗಂಡು, ಹೆಣ್ಣು ಎಂಬ ಭೇದಭಾವವನ್ನು ಬಿಡಬೇಕು. ಮಹಿಳೆಯರಿಗೆ ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಚೈತನ್ಯ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷೆ ಸಿಸ್ಟರ್ ಫಿಲೋಜಾನ್ ಮತ್ತು ಪುಷ್ಪ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಫಾ.ರೆ.ಜೋಸ್ ಮಾತನಾಡಿದರು. ಸಮಾರಂಭದಲ್ಲಿ ರಾಜಾಪುರ ರಿಕ್ರಿಯೇಷನ್ ಕ್ಲಬ್ ಕಾರ್ಯದರ್ಶಿ ಧನಪಾಲ್, ಖಜಾಂಚಿ ಸ್ವಾಮಿ, ಸಹಕಾರ್ಯದರ್ಶಿ ಧನಂಜಯ, ಹರ್ಡ್ಸ್ ಫೌಂಡೇಶನ್ ಸಂಸ್ಥೆಯ ಕಾರ್ಯದರ್ಶಿ ಡಿ.ಪರೀಕ್ಷಿತ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>