<p>ಕುಶಾಲನಗರ: `ಸರ್ಕಾರ ಆದಿವಾಸಿಗಳು, ದೀನ ದಲಿತರು, ಮೀನುಗಾರಂತಹ ಜನ ಸಮುದಾಯದ ಮೂಲಭೂತ ಹಕ್ಕು ಕಸಿದುಕೊಳ್ಳದಂತೆ ಎಚ್ಚರ ವಹಿಸಬೇಕು ಎಂದು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಹೋರಾಟಗಾರ ಶ್ರೀಧರ್ ಸೋಮವಾರ ತಿಳಿಸಿದರು.<br /> <br /> ರಾಷ್ಟ್ರೀಯ ಆದಿವಾಸಿ ಆಂದೋಲನ, ಕುಶಾಲನಗರ ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ (ಕಾರ್ಡ್), ಕೊಡಗು ಜಿಲ್ಲಾ ಬುಡಕಟ್ಟು ಕೃಷಿಕರ ಸಂಘದ ಆಶ್ರಯದಲ್ಲಿ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುತ್ತಿರುವ 4 ದಿನಗಳ ರಾಷ್ಟ್ರೀಯ ಸಮುದಾಯ ಹಕ್ಕುಗಳ ಸಂಗಮ -2011ದಲ್ಲಿ ಮಾತನಾಡಿದ ಅವರು ಸಂಪನ್ಮೂಲಗಳ ಸಂರಕ್ಷಣೆಯ ಜವಾಬ್ದಾರಿಯನ್ನು ನಾವೇ ವಹಿಸಿಕೊಳ್ಳುವಂತಾಗಬೇಕು~ ಎಂದು ಹೇಳಿದರು.<br /> <br /> ಸರ್ಕಾರ ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರಿ ಜನರ ಮೂಲ ನೆಲೆಗಳಿಗೆ ಧಕ್ಕೆಯನ್ನುಂಟು ಮಾಡುತ್ತಿದೆ. ಜನರ ಸಂಪನ್ಮೂಲಗಳಾದ ಭೂಮಿ, ಕಾಡು, ಸಮುದ್ರ, ಜಲ ಸಂಪನ್ಮೂಲಗಳನ್ನು ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ಶ್ರೀಮಂತರಿಗೆ ಮಾರಾಟ ಮಾಡುತ್ತಿದೆ ಎಂದು ದೂರಿದರು.<br /> <br /> ಕೇರಳದ ಪ್ರೊ.ಮಾಧವನ್, ಡಾ ಕೆ.ಮಕ್ಬೂಲ್, ಕರಾವಳಿ ಜನಸಮುದಾಯ ವೇದಿಕೆಯ ಸಂಚಾಲಕಿ ವಿದ್ಯಾದಿನಕರ್ , ಅಶೋಕ್ ಚೌಧರಿ, `ಡೀಡ್~ ನಿರ್ದೇಶಕ ಎಸ್.ಶ್ರೀಕಾಂತ್ ಮಾತನಾಡಿದರು. ಮುಖಂಡರಾದ ಜೆ.ಕೆ.ರಾಮು, ಆರ್.ಕೆ.ಚಂದ್ರು, ಕುಡಿಯರ ಮುತ್ತಪ್ಪ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಶಾಲನಗರ: `ಸರ್ಕಾರ ಆದಿವಾಸಿಗಳು, ದೀನ ದಲಿತರು, ಮೀನುಗಾರಂತಹ ಜನ ಸಮುದಾಯದ ಮೂಲಭೂತ ಹಕ್ಕು ಕಸಿದುಕೊಳ್ಳದಂತೆ ಎಚ್ಚರ ವಹಿಸಬೇಕು ಎಂದು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಹೋರಾಟಗಾರ ಶ್ರೀಧರ್ ಸೋಮವಾರ ತಿಳಿಸಿದರು.<br /> <br /> ರಾಷ್ಟ್ರೀಯ ಆದಿವಾಸಿ ಆಂದೋಲನ, ಕುಶಾಲನಗರ ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ (ಕಾರ್ಡ್), ಕೊಡಗು ಜಿಲ್ಲಾ ಬುಡಕಟ್ಟು ಕೃಷಿಕರ ಸಂಘದ ಆಶ್ರಯದಲ್ಲಿ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುತ್ತಿರುವ 4 ದಿನಗಳ ರಾಷ್ಟ್ರೀಯ ಸಮುದಾಯ ಹಕ್ಕುಗಳ ಸಂಗಮ -2011ದಲ್ಲಿ ಮಾತನಾಡಿದ ಅವರು ಸಂಪನ್ಮೂಲಗಳ ಸಂರಕ್ಷಣೆಯ ಜವಾಬ್ದಾರಿಯನ್ನು ನಾವೇ ವಹಿಸಿಕೊಳ್ಳುವಂತಾಗಬೇಕು~ ಎಂದು ಹೇಳಿದರು.<br /> <br /> ಸರ್ಕಾರ ಸಂವಿಧಾನದ ನಿಯಮಗಳನ್ನು ಗಾಳಿಗೆ ತೂರಿ ಜನರ ಮೂಲ ನೆಲೆಗಳಿಗೆ ಧಕ್ಕೆಯನ್ನುಂಟು ಮಾಡುತ್ತಿದೆ. ಜನರ ಸಂಪನ್ಮೂಲಗಳಾದ ಭೂಮಿ, ಕಾಡು, ಸಮುದ್ರ, ಜಲ ಸಂಪನ್ಮೂಲಗಳನ್ನು ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ಶ್ರೀಮಂತರಿಗೆ ಮಾರಾಟ ಮಾಡುತ್ತಿದೆ ಎಂದು ದೂರಿದರು.<br /> <br /> ಕೇರಳದ ಪ್ರೊ.ಮಾಧವನ್, ಡಾ ಕೆ.ಮಕ್ಬೂಲ್, ಕರಾವಳಿ ಜನಸಮುದಾಯ ವೇದಿಕೆಯ ಸಂಚಾಲಕಿ ವಿದ್ಯಾದಿನಕರ್ , ಅಶೋಕ್ ಚೌಧರಿ, `ಡೀಡ್~ ನಿರ್ದೇಶಕ ಎಸ್.ಶ್ರೀಕಾಂತ್ ಮಾತನಾಡಿದರು. ಮುಖಂಡರಾದ ಜೆ.ಕೆ.ರಾಮು, ಆರ್.ಕೆ.ಚಂದ್ರು, ಕುಡಿಯರ ಮುತ್ತಪ್ಪ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>