<p>ಚಿತ್ರದುರ್ಗ: ದುಡಿಯುವ ವರ್ಗ ಸಾಮಾಜಿಕ ಹೊಣೆಗಾರಿಕೆ ಅರಿತು ತಮ್ಮ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಮಾಡಬೇಕು ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಎಚ್.ಕೆ. ರಾಮಚಂದ್ರಪ್ಪ ಕರೆ ನೀಡಿದರು.<br /> <br /> ಭಾರತ ಕಮ್ಯುನಿಸ್ಟ್ ಪಕ್ಷ, ಎಐಟಿಯುಸಿ, ಜಿಲ್ಲಾ ಕಾರ್ಮಿಕರ ಸಾಮೂಹಿಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಗರದಲ್ಲಿ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ದೇಶದಲ್ಲಿರುವ 41 ಕೋಟಿ ದುಡಿಯುವ ವರ್ಗದ ಪೈಕಿ 5 ಕೋಟಿ ಮಂದಿ ಮಾತ್ರ ಭವಿಷ್ಯನಿಧಿ ಸೌಲಭ್ಯ ಹೊಂದಿದ್ದಾರೆ. ಉಳಿದ 36 ಕೋಟಿ ಮಂದಿ ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎಂದು ಸರ್ಕಾರದ ಅಂಕಿ ಸಂಖ್ಯೆಗಳೇ ತಿಳಿಸಿವೆ. ಇಎಸ್ಐ ಸೌಲಭ್ಯ ಸಹ ಕೇವಲ 2.76 ಕೋಟಿ ಮಂದಿಗೆ ಮಾತ್ರ ದೊರೆಯುತ್ತಿದೆ ಎಂದು ವಿವರಿಸಿದರು.<br /> <br /> ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದೇಶಿ ಕಂಪೆನಿಗಳಿಗೆ ಮಣೆ ಹಾಕುತ್ತಿವೆ. ಕುಡಿಯುವ ನೀರು ಸರಬರಾಜು ಮಾಡುವುದನ್ನು ಸಹ ವಿದೇಶಿ ಕಂಪೆನಿಗಳಿಗೆ ಗುತ್ತಿಗೆ ನೀಡುವ ಹುನ್ನಾರ ನಡೆಯುತ್ತಿದೆ. ಸರ್ಕಾರದ ಇಂತಹ ನೀತಿಗಳ ವಿರುದ್ಧ ದುಡಿಯುವ ವರ್ಗ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.<br /> <br /> ನಗರಸಭೆ ಅಧ್ಯಕ್ಷೆ ಸುನೀತಾ ಮಲ್ಲಿಕಾರ್ಜುನ್ ಮಾತನಾಡಿ, ನಗರಸಭೆ ವತಿಯಿಂದ ಮೇ 2ರಂದು ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.<br /> <br /> ಸಿಪಿಐ ಜಿಲ್ಲಾ ಮಂಡಳಿ ಕಾರ್ಯದರ್ಶಿ ಜಿ. ಚಂದ್ರಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಎ.ಪಿ. ಪುಂಡಲೀಕರಾವ್, ವೈ. ಹನುಮಂತಪ್ಪ, ಜಿ. ತಿಪ್ಪೇಸ್ವಾಮಿ, ಪಿ. ಪ್ರಕಾಶ್, ಜಿ.ಸಿ. ಸುರೇಶ್ಬಾಬು, ಪ್ರೇಮಕುಮಾರ್, ಗಂಗಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ದುಡಿಯುವ ವರ್ಗ ಸಾಮಾಜಿಕ ಹೊಣೆಗಾರಿಕೆ ಅರಿತು ತಮ್ಮ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಮಾಡಬೇಕು ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಎಚ್.ಕೆ. ರಾಮಚಂದ್ರಪ್ಪ ಕರೆ ನೀಡಿದರು.<br /> <br /> ಭಾರತ ಕಮ್ಯುನಿಸ್ಟ್ ಪಕ್ಷ, ಎಐಟಿಯುಸಿ, ಜಿಲ್ಲಾ ಕಾರ್ಮಿಕರ ಸಾಮೂಹಿಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಗರದಲ್ಲಿ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ದೇಶದಲ್ಲಿರುವ 41 ಕೋಟಿ ದುಡಿಯುವ ವರ್ಗದ ಪೈಕಿ 5 ಕೋಟಿ ಮಂದಿ ಮಾತ್ರ ಭವಿಷ್ಯನಿಧಿ ಸೌಲಭ್ಯ ಹೊಂದಿದ್ದಾರೆ. ಉಳಿದ 36 ಕೋಟಿ ಮಂದಿ ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ ಎಂದು ಸರ್ಕಾರದ ಅಂಕಿ ಸಂಖ್ಯೆಗಳೇ ತಿಳಿಸಿವೆ. ಇಎಸ್ಐ ಸೌಲಭ್ಯ ಸಹ ಕೇವಲ 2.76 ಕೋಟಿ ಮಂದಿಗೆ ಮಾತ್ರ ದೊರೆಯುತ್ತಿದೆ ಎಂದು ವಿವರಿಸಿದರು.<br /> <br /> ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದೇಶಿ ಕಂಪೆನಿಗಳಿಗೆ ಮಣೆ ಹಾಕುತ್ತಿವೆ. ಕುಡಿಯುವ ನೀರು ಸರಬರಾಜು ಮಾಡುವುದನ್ನು ಸಹ ವಿದೇಶಿ ಕಂಪೆನಿಗಳಿಗೆ ಗುತ್ತಿಗೆ ನೀಡುವ ಹುನ್ನಾರ ನಡೆಯುತ್ತಿದೆ. ಸರ್ಕಾರದ ಇಂತಹ ನೀತಿಗಳ ವಿರುದ್ಧ ದುಡಿಯುವ ವರ್ಗ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.<br /> <br /> ನಗರಸಭೆ ಅಧ್ಯಕ್ಷೆ ಸುನೀತಾ ಮಲ್ಲಿಕಾರ್ಜುನ್ ಮಾತನಾಡಿ, ನಗರಸಭೆ ವತಿಯಿಂದ ಮೇ 2ರಂದು ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.<br /> <br /> ಸಿಪಿಐ ಜಿಲ್ಲಾ ಮಂಡಳಿ ಕಾರ್ಯದರ್ಶಿ ಜಿ. ಚಂದ್ರಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಎ.ಪಿ. ಪುಂಡಲೀಕರಾವ್, ವೈ. ಹನುಮಂತಪ್ಪ, ಜಿ. ತಿಪ್ಪೇಸ್ವಾಮಿ, ಪಿ. ಪ್ರಕಾಶ್, ಜಿ.ಸಿ. ಸುರೇಶ್ಬಾಬು, ಪ್ರೇಮಕುಮಾರ್, ಗಂಗಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>