<p>ನವದೆಹಲಿ (ಐಎಎನ್ಎಸ್): `ವೋಟಿಗಾಗಿ ನೋಟು~ ಹಗರಣದ ಹಿಂದೆ ಇರುವ ವ್ಯಕ್ತಿಗಳ ಹೆಸರನ್ನು ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಸಮಾಜವಾದಿ ಪಕ್ಷದ ಮಾಜಿ ಮುಖಂಡ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಅವರು ಬಹಿರಂಗಪಡಿಸಬೇಕು ಎಂದು ಬಿಜೆಪಿ ಹೇಳಿದೆ.<br /> <br /> `ಈ ಹಗರಣದಲ್ಲಿ ಯಾರ ಹೆಸರು ಬಂದರೂ, ಹಗರಣದ ಪ್ರಯೋಜನ ಪಡೆದಿರುವುದು ಯುಪಿಎ ಸರ್ಕಾರ~ ಎಂದು ಬಿಜೆಪಿ ಮುಖಂಡ ರಾಜೀವ್ ಪ್ರತಾಪ್ ರೂಡಿ ಸುದ್ದಿಗಾರರಿಗೆ ತಿಳಿಸಿದರು.<br /> <br /> `ಹಗರಣದಿಂದ ಪ್ರಯೋಜನ ಪಡೆದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಹೇಗೆ? ಈ ಹಗರಣದ ಸಂಬಂಧ ಸ್ಪಷ್ಟನೆ ನೀಡಲು ಮತ್ತು ರೂವಾರಿಗಳ ಹೆಸರನ್ನು ಬಹಿರಂಗ ಪಡಿಸಲು ಅಮರ್ ಸಿಂಗ್ ಅವರಿಗೆ ಇದು ಸೂಕ್ತ ಸಮಯ~ ಎಂದು ರೂಡಿ ಹೇಳಿದರು.<br /> <br /> ಲೋಕಸಭೆಯಲ್ಲಿ 2008ರಲ್ಲಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ನಡೆದಿದ್ದ `ಓಟಿಗಾಗಿ ನೋಟು~ ಹಗರಣದ ಲ್ಲಿ ಭಾಗಿಯಾದ ಆರೋಪದಲ್ಲಿ ಅಮರ್ ಸಿಂಗ್ ಮತ್ತು ಇಬ್ಬರು ಬಿಜೆಪಿ ಸಂಸತ್ ಸದಸ್ಯರನ್ನು ಮಂಗಳವಾರ ಬಂಧಿಸಲಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.<br /> <br /> ಈ ಮಧ್ಯೆ, ಹಗರಣದಲ್ಲಿ ಬಳಕೆಯಾದ ಹಣದ ಮೂಲ ವಿಚಾರ ಅತ್ಯಂತ ಪ್ರಮುಖವಾದುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ.<br /> <br /> `ಅಷ್ಟೊಂದು ಹಣ ಎಲ್ಲಿಂದ ಬಂತು, ಯಾರು ಕೊಟ್ಟರು ಎಂಬ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿಲ್ಲ. ಇವುಗಳು ಅತ್ಯಂತ ಪ್ರಮುಖ ವಿಚಾರವಾಗಿದ್ದು, ಸಿಬಿಐ ಈ ಬಗ್ಗೆ ಗಮನ ಹರಿಸಬೇಕು~ ಎಂದು ಪ್ರಸಾದ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): `ವೋಟಿಗಾಗಿ ನೋಟು~ ಹಗರಣದ ಹಿಂದೆ ಇರುವ ವ್ಯಕ್ತಿಗಳ ಹೆಸರನ್ನು ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಸಮಾಜವಾದಿ ಪಕ್ಷದ ಮಾಜಿ ಮುಖಂಡ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಅವರು ಬಹಿರಂಗಪಡಿಸಬೇಕು ಎಂದು ಬಿಜೆಪಿ ಹೇಳಿದೆ.<br /> <br /> `ಈ ಹಗರಣದಲ್ಲಿ ಯಾರ ಹೆಸರು ಬಂದರೂ, ಹಗರಣದ ಪ್ರಯೋಜನ ಪಡೆದಿರುವುದು ಯುಪಿಎ ಸರ್ಕಾರ~ ಎಂದು ಬಿಜೆಪಿ ಮುಖಂಡ ರಾಜೀವ್ ಪ್ರತಾಪ್ ರೂಡಿ ಸುದ್ದಿಗಾರರಿಗೆ ತಿಳಿಸಿದರು.<br /> <br /> `ಹಗರಣದಿಂದ ಪ್ರಯೋಜನ ಪಡೆದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಹೇಗೆ? ಈ ಹಗರಣದ ಸಂಬಂಧ ಸ್ಪಷ್ಟನೆ ನೀಡಲು ಮತ್ತು ರೂವಾರಿಗಳ ಹೆಸರನ್ನು ಬಹಿರಂಗ ಪಡಿಸಲು ಅಮರ್ ಸಿಂಗ್ ಅವರಿಗೆ ಇದು ಸೂಕ್ತ ಸಮಯ~ ಎಂದು ರೂಡಿ ಹೇಳಿದರು.<br /> <br /> ಲೋಕಸಭೆಯಲ್ಲಿ 2008ರಲ್ಲಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ನಡೆದಿದ್ದ `ಓಟಿಗಾಗಿ ನೋಟು~ ಹಗರಣದ ಲ್ಲಿ ಭಾಗಿಯಾದ ಆರೋಪದಲ್ಲಿ ಅಮರ್ ಸಿಂಗ್ ಮತ್ತು ಇಬ್ಬರು ಬಿಜೆಪಿ ಸಂಸತ್ ಸದಸ್ಯರನ್ನು ಮಂಗಳವಾರ ಬಂಧಿಸಲಾಗಿದ್ದು, ಅವರನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.<br /> <br /> ಈ ಮಧ್ಯೆ, ಹಗರಣದಲ್ಲಿ ಬಳಕೆಯಾದ ಹಣದ ಮೂಲ ವಿಚಾರ ಅತ್ಯಂತ ಪ್ರಮುಖವಾದುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ.<br /> <br /> `ಅಷ್ಟೊಂದು ಹಣ ಎಲ್ಲಿಂದ ಬಂತು, ಯಾರು ಕೊಟ್ಟರು ಎಂಬ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿಲ್ಲ. ಇವುಗಳು ಅತ್ಯಂತ ಪ್ರಮುಖ ವಿಚಾರವಾಗಿದ್ದು, ಸಿಬಿಐ ಈ ಬಗ್ಗೆ ಗಮನ ಹರಿಸಬೇಕು~ ಎಂದು ಪ್ರಸಾದ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>