<p>ಕನಕಪುರ: ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಹಗಲಿನ ವೇಳೆ ಬೀದಿ ದೀಪಗಳು ನಿರಂತರವಾಗಿ ಉರಿದು ಸಾವಿರಾರು ಯೂನಿಟ್ನಷ್ಟು ವಿದ್ಯುತ್ ನಷ್ಟವಾಗುತ್ತಿದೆ. ಆದರೂ ಸಂಬಂಧಪಟ್ಟವರು ಇದರ ಕಡೆ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ನಾಗರಿಕರು ದೂರಿದ್ದಾರೆ.<br /> <br /> ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಲಕ್ಷಾಂತರ ರೂಪಾಯಿಗಳನ್ನು ವೆಚ್ಚಮಾಡಿ ಸೌರಶಕ್ತಿಯ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಬೀದಿ ದೀಪಗಳು ರಾತ್ರಿವೇಳೆ ಉರಿಯುವುದು ಸಾರ್ವಜನಿಕವಾಗಿ ಉಪಯುಕ್ತವಾಗುತ್ತದೆ. ಆದರೆ ಬೆಳಗಿನ ವೇಳೆಯಲ್ಲಿ ಉರಿಯುವುದು ಯಾರಿಗೂ ಉಪಯೋಗವಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. <br /> <br /> ಬಳಕೆಯಾದ ವಿದ್ಯುತ್ಗೆ ಪಂಚಾಯಿತಿಯಿಂದಲೇ ಹಣ ಪಾವತಿಸಲಾಗುತ್ತಿದ್ದರೂ ಆ ಹಣ ಸಾರ್ವಜನಿಕರದ್ದಾಗಿದೆ. ಸರಿಯಾದ ನಿರ್ವಹಣೆ ಇಲ್ಲದೇ ಹಗಲಿನಲ್ಲೂ ದೀಪಗಳು ಉರಿಯುತ್ತಿವೆ. ಇದರಿಂದ ಸಾರ್ವಜನಿಕ ಕೆಲಸಗಳಿಗೆ ಬಳಕೆಯಾಗುವ ಹಣ ವಿನಾಕಾರಣ ವಿದ್ಯುತ್ ಬಳಕೆಗೆ ಕಟ್ಟಬೇಕಾದ ಪರಿಸ್ಥಿತಿ ಇದೆ. ಪೂರೈಕೆಯಾಗುವ ವಿದ್ಯುತ್ನ್ನು ಸದ್ಬಳಕೆ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಹಗಲಿನ ವೇಳೆ ಬೀದಿ ದೀಪಗಳು ನಿರಂತರವಾಗಿ ಉರಿದು ಸಾವಿರಾರು ಯೂನಿಟ್ನಷ್ಟು ವಿದ್ಯುತ್ ನಷ್ಟವಾಗುತ್ತಿದೆ. ಆದರೂ ಸಂಬಂಧಪಟ್ಟವರು ಇದರ ಕಡೆ ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯ ನಾಗರಿಕರು ದೂರಿದ್ದಾರೆ.<br /> <br /> ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಲಕ್ಷಾಂತರ ರೂಪಾಯಿಗಳನ್ನು ವೆಚ್ಚಮಾಡಿ ಸೌರಶಕ್ತಿಯ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಬೀದಿ ದೀಪಗಳು ರಾತ್ರಿವೇಳೆ ಉರಿಯುವುದು ಸಾರ್ವಜನಿಕವಾಗಿ ಉಪಯುಕ್ತವಾಗುತ್ತದೆ. ಆದರೆ ಬೆಳಗಿನ ವೇಳೆಯಲ್ಲಿ ಉರಿಯುವುದು ಯಾರಿಗೂ ಉಪಯೋಗವಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. <br /> <br /> ಬಳಕೆಯಾದ ವಿದ್ಯುತ್ಗೆ ಪಂಚಾಯಿತಿಯಿಂದಲೇ ಹಣ ಪಾವತಿಸಲಾಗುತ್ತಿದ್ದರೂ ಆ ಹಣ ಸಾರ್ವಜನಿಕರದ್ದಾಗಿದೆ. ಸರಿಯಾದ ನಿರ್ವಹಣೆ ಇಲ್ಲದೇ ಹಗಲಿನಲ್ಲೂ ದೀಪಗಳು ಉರಿಯುತ್ತಿವೆ. ಇದರಿಂದ ಸಾರ್ವಜನಿಕ ಕೆಲಸಗಳಿಗೆ ಬಳಕೆಯಾಗುವ ಹಣ ವಿನಾಕಾರಣ ವಿದ್ಯುತ್ ಬಳಕೆಗೆ ಕಟ್ಟಬೇಕಾದ ಪರಿಸ್ಥಿತಿ ಇದೆ. ಪೂರೈಕೆಯಾಗುವ ವಿದ್ಯುತ್ನ್ನು ಸದ್ಬಳಕೆ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>