<p>ನವದೆಹಲಿ (ಐಎಎನ್ಎಸ್): ಆಮ್ ಆದ್ಮಿ ಪಕ್ಷದ ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದ ಆಪಾದನೆಯಲ್ಲಿ ತನ್ನ ಇಬ್ಬರು ನಾಯಕರನ್ನು ಎಎಪಿ ಶುಕ್ರವಾರ ಉಚ್ಚಾಟಿಸಿದೆ.<br /> <br /> ಟಿಕೆಟ್ ಕೊಡಿಸುವುದಾಗಿ ಹೇಳಿ ಭರವಸೆ ನೀಡುವ ಪಕ್ಷದ ಯಾರೇ ಸದಸ್ಯರಿಗೂ ಹಣ ನೀಡಬೇಡಿ ಎಂದು ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರು ಟಿಕೆಟ್ ಆಕಾಂಕ್ಷಿಗಳಿಗೆ ಮನವಿ ಮಾಡಿದರು.<br /> <br /> 'ಇಬ್ಬರು ಸದಸ್ಯರಾದ ಅರುಣಾ ಸಿಂಗ್ (ಅವಧ್ ವಲಯದ ಸಂಚಾಲಕಿ) ಮತ್ತು ಅಶೋಕ ಕುಮಾರ (ಖಜಾಂಚಿ, ಹರ್ದೋಯಿ) ಅವರನ್ನು ಪಕ್ಷ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಹಣಕ್ಕಾಗಿ ಪಕ್ಷದ ಟಿಕೆಟ್ ಕೊಡಿಸುವ ವಿಚಾರದಲ್ಲಿ ಅವರು ಷಾಮೀಲಾಗಿದ್ದರೆಂಬುದು ಗೊತ್ತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಯಿತು ಎಂದು ಕೇಜ್ರಿವಾಲ್ ಪತ್ರಕರ್ತರಿಗೆ ತಿಳಿಸಿದರು.<br /> <br /> ಇಂತಹ ಚಟುವಟಿಕೆಗಳು ಗಮನಕ್ಕೆ ಬಂದಲ್ಲಿ ಪಕ್ಷಕ್ಕೆ ಮಾಹಿತಿ ನೀಡುವಂತೆ ಮತ್ತು ಇಂತಹ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಕು ಕಾರ್ಯಾಚರಣೆ ಕೈಗೊಳ್ಳುವಂತೆ ಕೇಜ್ರಿವಾಲ್ ಮಾಧ್ಯಮಗಳಿಗೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): ಆಮ್ ಆದ್ಮಿ ಪಕ್ಷದ ಟಿಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದ ಆಪಾದನೆಯಲ್ಲಿ ತನ್ನ ಇಬ್ಬರು ನಾಯಕರನ್ನು ಎಎಪಿ ಶುಕ್ರವಾರ ಉಚ್ಚಾಟಿಸಿದೆ.<br /> <br /> ಟಿಕೆಟ್ ಕೊಡಿಸುವುದಾಗಿ ಹೇಳಿ ಭರವಸೆ ನೀಡುವ ಪಕ್ಷದ ಯಾರೇ ಸದಸ್ಯರಿಗೂ ಹಣ ನೀಡಬೇಡಿ ಎಂದು ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರು ಟಿಕೆಟ್ ಆಕಾಂಕ್ಷಿಗಳಿಗೆ ಮನವಿ ಮಾಡಿದರು.<br /> <br /> 'ಇಬ್ಬರು ಸದಸ್ಯರಾದ ಅರುಣಾ ಸಿಂಗ್ (ಅವಧ್ ವಲಯದ ಸಂಚಾಲಕಿ) ಮತ್ತು ಅಶೋಕ ಕುಮಾರ (ಖಜಾಂಚಿ, ಹರ್ದೋಯಿ) ಅವರನ್ನು ಪಕ್ಷ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಹಣಕ್ಕಾಗಿ ಪಕ್ಷದ ಟಿಕೆಟ್ ಕೊಡಿಸುವ ವಿಚಾರದಲ್ಲಿ ಅವರು ಷಾಮೀಲಾಗಿದ್ದರೆಂಬುದು ಗೊತ್ತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಯಿತು ಎಂದು ಕೇಜ್ರಿವಾಲ್ ಪತ್ರಕರ್ತರಿಗೆ ತಿಳಿಸಿದರು.<br /> <br /> ಇಂತಹ ಚಟುವಟಿಕೆಗಳು ಗಮನಕ್ಕೆ ಬಂದಲ್ಲಿ ಪಕ್ಷಕ್ಕೆ ಮಾಹಿತಿ ನೀಡುವಂತೆ ಮತ್ತು ಇಂತಹ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಕು ಕಾರ್ಯಾಚರಣೆ ಕೈಗೊಳ್ಳುವಂತೆ ಕೇಜ್ರಿವಾಲ್ ಮಾಧ್ಯಮಗಳಿಗೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>