<p>ಹಿರಿಯೂರು: ನಗರದ ಅರ್ಬನ್ ಸಹಕಾರಿ ಬ್ಯಾಂಕಿನಲ್ಲಿ ಹಣ ದುರುಪಯೋಗ ಮಾಡಿರುವ ಆರೋಪದ ಮೇಲೆ ನಗರ ಠಾಣೆ ಪೊಲೀಸರು ಜನರಲ್ ಮ್ಯಾನೇಜರ್ ಶ್ರೀನಿವಾಸ್ ಮತ್ತು ಸೇಲ್ಸ್ ಆಫೀಸರ್ ಸುಗುಮಾರನ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.<br /> <br /> ಮಾರ್ಚ್ ೨೦೧೧ರಿಂದ ಮಾರ್ಚ್ ೨೦೧೩ರವರೆಗೆ ಬ್ಯಾಂಕಿನ ಅಧ್ಯಕ್ಷರಾಗಿದ್ದ ಆರ್.ಮೊಹಮದ್ ರಫಿ ಅವರು, ಬ್ಯಾಂಕಿನಲ್ಲಿ ೧೯೯೫ರಿಂದ ೨೦೦೩ರ ಅವಧಿಯಲ್ಲಿ ಬ್ಯಾಂಕಿನ ಹಾಗೂ ಠೇವಣಿದಾರರ ಹಣವನ್ನು ದುರುಪಯೋಗ ಮಾಡಿಕೊಳ್ಳುವ ಮೂಲಕ ವಂಚಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.<br /> <br /> ನಗರ ಠಾಣೆ ಪಿಎಸ್ಐ ಶಿವಕುಮಾರ್ ಅವರು ಶನಿವಾರ ಶ್ರೀನಿವಾಸ್ ಮತ್ತು ಸುಗುಮಾರನ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಇಬ್ಬರೂ ಆರೋಪಿಗಳನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.<br /> <br /> <strong>ಅಪಘಾತ; ಸಾಹುಕಾರ್ ಜಯದೇವಪ್ಪ ಸಾವು</strong><br /> ಚಿತ್ರದುರ್ಗ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಬಂಜಗೇನಹಳ್ಳಿ ಸಮೀಪದ ನಡೆದಿದೆ.<br /> <br /> ಮೃತ ವ್ಯಕ್ತಿಯನ್ನು ಹಿರೇಗುಂಟನೂರಿನ ಜೆಡಿಎಸ್ ಮುಖಂಡ ಸಾಹುಕಾರ್ ಜಯದೇವಪ್ಪ (65) ಎಂದು ಗುರುತಿಸಲಾಗಿದೆ. ಜಯದೇವಪ್ಪ ದ್ಯಾಮಲಾಂಬ ದೇವಸ್ಥಾನ ಸಮಿತಿ ಸಂಚಾಲಕರಾಗಿದ್ದರು.<br /> <br /> ಚಿತ್ರದುರ್ಗದಿಂದ ಶಿವಮೊಗ್ಗದ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ನಗರದ ಅರ್ಬನ್ ಸಹಕಾರಿ ಬ್ಯಾಂಕಿನಲ್ಲಿ ಹಣ ದುರುಪಯೋಗ ಮಾಡಿರುವ ಆರೋಪದ ಮೇಲೆ ನಗರ ಠಾಣೆ ಪೊಲೀಸರು ಜನರಲ್ ಮ್ಯಾನೇಜರ್ ಶ್ರೀನಿವಾಸ್ ಮತ್ತು ಸೇಲ್ಸ್ ಆಫೀಸರ್ ಸುಗುಮಾರನ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.<br /> <br /> ಮಾರ್ಚ್ ೨೦೧೧ರಿಂದ ಮಾರ್ಚ್ ೨೦೧೩ರವರೆಗೆ ಬ್ಯಾಂಕಿನ ಅಧ್ಯಕ್ಷರಾಗಿದ್ದ ಆರ್.ಮೊಹಮದ್ ರಫಿ ಅವರು, ಬ್ಯಾಂಕಿನಲ್ಲಿ ೧೯೯೫ರಿಂದ ೨೦೦೩ರ ಅವಧಿಯಲ್ಲಿ ಬ್ಯಾಂಕಿನ ಹಾಗೂ ಠೇವಣಿದಾರರ ಹಣವನ್ನು ದುರುಪಯೋಗ ಮಾಡಿಕೊಳ್ಳುವ ಮೂಲಕ ವಂಚಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವಂತೆ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.<br /> <br /> ನಗರ ಠಾಣೆ ಪಿಎಸ್ಐ ಶಿವಕುಮಾರ್ ಅವರು ಶನಿವಾರ ಶ್ರೀನಿವಾಸ್ ಮತ್ತು ಸುಗುಮಾರನ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಇಬ್ಬರೂ ಆರೋಪಿಗಳನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.<br /> <br /> <strong>ಅಪಘಾತ; ಸಾಹುಕಾರ್ ಜಯದೇವಪ್ಪ ಸಾವು</strong><br /> ಚಿತ್ರದುರ್ಗ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಬಂಜಗೇನಹಳ್ಳಿ ಸಮೀಪದ ನಡೆದಿದೆ.<br /> <br /> ಮೃತ ವ್ಯಕ್ತಿಯನ್ನು ಹಿರೇಗುಂಟನೂರಿನ ಜೆಡಿಎಸ್ ಮುಖಂಡ ಸಾಹುಕಾರ್ ಜಯದೇವಪ್ಪ (65) ಎಂದು ಗುರುತಿಸಲಾಗಿದೆ. ಜಯದೇವಪ್ಪ ದ್ಯಾಮಲಾಂಬ ದೇವಸ್ಥಾನ ಸಮಿತಿ ಸಂಚಾಲಕರಾಗಿದ್ದರು.<br /> <br /> ಚಿತ್ರದುರ್ಗದಿಂದ ಶಿವಮೊಗ್ಗದ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>