<p>ನವದೆಹಲಿ: ಅಕ್ರಮ ಗಣಿಗಾರಿಕೆ ನಡೆದಿರುವ ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹತ್ತು ವರ್ಷಗಳ ಕಾಲ ಗಣಿಗಾರಿಕೆ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ನೇಮಿಸಿದ್ದ ಉನ್ನತಾಧಿಕಾರ ಸಮಿತಿ (ಸಿಇಸಿ) ಕೋರ್ಟ್ಗೆ ಶಿಫಾರಸು ಮಾಡಿದೆ.<br /> <br /> ಸಮಿತಿ ಬುಧವಾರ ಪೂರಕ ವರದಿಯನ್ನು ಸಲ್ಲಿಸಿತು. ಗಣಿ ಕಂಪೆನಿಗಳು, ರಾಜ್ಯ ಸರ್ಕಾರದ ಅಧಿಕಾರಿಗಳು, ಭಾರತೀಯ ಅರಣ್ಯ ಪರಿಷತ್ನ ಸಂಶೋಧನೆ ಮತ್ತು ಅರಿವು ಸಂಸ್ಥೆಯ ತಜ್ಞರು ಈ ಪ್ರದೇಶದಲ್ಲಿ ಸುಧಾರಣೆ ಮತ್ತು ಪುನರ್ವಸತಿ ಕಲ್ಪಿಸುವುದು ಅಗತ್ಯ ಎನ್ನುವ ಸರ್ವಾನುಮತಕ್ಕೆ ಬಂದಿರುವ ಅಂಶವನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.<br /> <br /> <strong>ವರದಿಯ ಪ್ರಮುಖ ಅಂಶ: </strong>ಅಕ್ರಮ ಗಣಿಗಾರಿಕೆ ನಡೆದಿರುವ ಪ್ರದೇಶದಲ್ಲಿ ನೈಸರ್ಗಿಕ ಸಂಪತ್ತು ಹಾಗೂ ಪ್ರಕೃತಿ ಹಾನಿಗೆ ಒಳಗಾಗಿದ್ದು, ಈ ಪ್ರದೇಶದಲ್ಲಿ ಪುನರ್ವಸತಿ ಕಲ್ಪಿಸಲು ಕನಿಷ್ಠ ಹತ್ತು ವರ್ಷಗಳು ಬೇಕಾಗುತ್ತದೆ. ಅಲ್ಲಿಯವರೆಗೆ ಗಣಿಗಾರಿಕೆ ನಿಷೇಧಿಸಬೇಕು. <br /> <br /> ಬಳ್ಳಾರಿ ಜಿಲ್ಲೆಯಲ್ಲಿ ವರ್ಷಕ್ಕೆ 25 ದಶಲಕ್ಷ ಟನ್, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ 5 ದಶಲಕ್ಷ ಟನ್ ಕಬ್ಬಿಣದ ಅದಿರು ತೆಗೆಯಲು ಮಿತಿ ಹೇರಬೇಕು.<br /> <br /> ಕಬ್ಬಿಣದ ಅದಿರನ್ನು ಇ-ಹರಾಜಿನ ಮೂಲಕವೇ ವಿಲೇವಾರಿ ಮಾಡಬೇಕು. ಈ ಪ್ರಕ್ರಿಯೆ ಸುಪ್ರೀಂ ಕೋರ್ಟ್ ನೇಮಿಸಿರುವ ಮೇಲ್ವಿಚಾರಣೆ ಸಮಿತಿಯ ಉಸ್ತುವಾರಿಯಲ್ಲಿ ನಡೆಯಬೇಕು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಅಕ್ರಮ ಗಣಿಗಾರಿಕೆ ನಡೆದಿರುವ ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹತ್ತು ವರ್ಷಗಳ ಕಾಲ ಗಣಿಗಾರಿಕೆ ನಿಷೇಧಿಸಬೇಕು ಎಂದು ಸುಪ್ರೀಂ ಕೋರ್ಟ್ ನೇಮಿಸಿದ್ದ ಉನ್ನತಾಧಿಕಾರ ಸಮಿತಿ (ಸಿಇಸಿ) ಕೋರ್ಟ್ಗೆ ಶಿಫಾರಸು ಮಾಡಿದೆ.<br /> <br /> ಸಮಿತಿ ಬುಧವಾರ ಪೂರಕ ವರದಿಯನ್ನು ಸಲ್ಲಿಸಿತು. ಗಣಿ ಕಂಪೆನಿಗಳು, ರಾಜ್ಯ ಸರ್ಕಾರದ ಅಧಿಕಾರಿಗಳು, ಭಾರತೀಯ ಅರಣ್ಯ ಪರಿಷತ್ನ ಸಂಶೋಧನೆ ಮತ್ತು ಅರಿವು ಸಂಸ್ಥೆಯ ತಜ್ಞರು ಈ ಪ್ರದೇಶದಲ್ಲಿ ಸುಧಾರಣೆ ಮತ್ತು ಪುನರ್ವಸತಿ ಕಲ್ಪಿಸುವುದು ಅಗತ್ಯ ಎನ್ನುವ ಸರ್ವಾನುಮತಕ್ಕೆ ಬಂದಿರುವ ಅಂಶವನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.<br /> <br /> <strong>ವರದಿಯ ಪ್ರಮುಖ ಅಂಶ: </strong>ಅಕ್ರಮ ಗಣಿಗಾರಿಕೆ ನಡೆದಿರುವ ಪ್ರದೇಶದಲ್ಲಿ ನೈಸರ್ಗಿಕ ಸಂಪತ್ತು ಹಾಗೂ ಪ್ರಕೃತಿ ಹಾನಿಗೆ ಒಳಗಾಗಿದ್ದು, ಈ ಪ್ರದೇಶದಲ್ಲಿ ಪುನರ್ವಸತಿ ಕಲ್ಪಿಸಲು ಕನಿಷ್ಠ ಹತ್ತು ವರ್ಷಗಳು ಬೇಕಾಗುತ್ತದೆ. ಅಲ್ಲಿಯವರೆಗೆ ಗಣಿಗಾರಿಕೆ ನಿಷೇಧಿಸಬೇಕು. <br /> <br /> ಬಳ್ಳಾರಿ ಜಿಲ್ಲೆಯಲ್ಲಿ ವರ್ಷಕ್ಕೆ 25 ದಶಲಕ್ಷ ಟನ್, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ 5 ದಶಲಕ್ಷ ಟನ್ ಕಬ್ಬಿಣದ ಅದಿರು ತೆಗೆಯಲು ಮಿತಿ ಹೇರಬೇಕು.<br /> <br /> ಕಬ್ಬಿಣದ ಅದಿರನ್ನು ಇ-ಹರಾಜಿನ ಮೂಲಕವೇ ವಿಲೇವಾರಿ ಮಾಡಬೇಕು. ಈ ಪ್ರಕ್ರಿಯೆ ಸುಪ್ರೀಂ ಕೋರ್ಟ್ ನೇಮಿಸಿರುವ ಮೇಲ್ವಿಚಾರಣೆ ಸಮಿತಿಯ ಉಸ್ತುವಾರಿಯಲ್ಲಿ ನಡೆಯಬೇಕು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>