<p><strong>ಬೆಂಗಳೂರು:</strong> ಯಲಹಂಕ, ಯಶವಂತಪುರ, ಆನೇಕಲ್, ದೇವನಹಳ್ಳಿ, ನೆಲಮಂಗಲ ಸೇರಿದಂತೆ ನಗರದ ಸುತ್ತಮುತ್ತ ಹತ್ತು ಸಾವಿರ ಮನೆಗಳನ್ನು ನಿರ್ಮಿಸುವ ಕಾಮಗಾರಿಗೆ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ ಇಲ್ಲಿ ತಿಳಿಸಿದರು.<br /> <br /> ಕರ್ನಾಟಕ ಗೃಹ ಮಂಡಳಿಯ ಪ್ರಗತಿ ಪರಿಶೀಲನೆ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಡಿಮೆ ವೆಚ್ಚದಲ್ಲಿ ಗುಂಪು ಮನೆಗಳನ್ನು ನಿರ್ಮಿಸಿಕೊಡಲು ತೀರ್ಮಾನಿಸಲಾಗಿದ್ದು, ಕಾಮಗಾರಿ ಆರಂಭವಾದ 18 ತಿಂಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಹೇಳಿದರು.<br /> <br /> ಸೂರ್ಯನಗರಕ್ಕೆ ಶಿಂಷಾದಿಂದ ನೀರು, ಒಳಚರಂಡಿ ವ್ಯವಸ್ಥೆ ಕಲ್ಪಿಸಲು 100 ಕೋಟಿ ರೂಪಾಯಿ ವೆಚ್ಚದ ಯೋಜನೆ ರೂಪಿಸಲಾಗಿದೆ. ಇನ್ನು ಮುಂದೆ ಗೃಹ ಮಂಡಳಿಯಿಂದ ನಿರ್ಮಿಸುವ ಬಡಾವಣೆಗಳಿಗೆ ಇಲಾಖೆಯಿಂದಲೇ ಮೂಲಸೌಕರ್ಯಗಳನ್ನು ಕಲ್ಪಿಸುವ ಕೆಲಸ ಮಾಡುತ್ತೇವೆ ಎಂದರು.<br /> <br /> ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ತಾವರೆಕೆರೆ, ದೊಡ್ಡ ಆಲದಮರ, ಬಂಗಾರಪೇಟೆ, ಶ್ರೀನಿವಾಸಪುರ, ಗೂಳೂರು, ಕುಣಿಗಲ್, ಶಿರಾ ತಾಲ್ಲೂಕುಗಳಲ್ಲಿ ಬೇಡಿಕೆಯ ಸಮೀಕ್ಷೆ ಆರಂಭವಾಗಿದ್ದು, ಮೂರು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. <br /> <br /> ಬೇಡಿಕೆಗೆ ಅನುಗುಣವಾಗಿ ಮನೆಗಳನ್ನು ನಿರ್ಮಿಸಲು, ನಿವೇಶನಗಳನ್ನು ಹಂಚಲು ಕ್ರಮ ಕೈಗೊಳ್ಳಲಾಗುವುದು. ಶೇ 30ರಷ್ಟು ಮನೆಗಳನ್ನು ನಿರ್ಮಿಸುವುದರ ಜೊತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತೇವೆ ಎಂದು ಸೋಮಣ್ಣ ಅವರು ಭರವಸೆ ನೀಡಿದರು.<br /> <br /> ಬಡಾವಣೆ ನಿರ್ಮಾಣವಾದ ಮೇಲೆ 4-5 ವರ್ಷಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು. ಕೆಂಗೇರಿ, ಬಂಡೆಮಠ ಮತ್ತು ವಡಗೇರಿಯಲ್ಲಿ ಗುಂಪು ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.<br /> <br /> <strong>ಕಾರಣ ತಿಳಿಯಬೇಕು</strong>: `ನನ್ನ ಮೇಲೆ ನಡೆದ ಹಲ್ಲೆಗೆ ಕಾರಣ ಏನು? ಆತನ ಉದ್ದೇಶ ಏನು ಎಂಬುದನ್ನು ತಿಳಿಯುವ ಉದ್ದೇಶದಿಂದ ದೂರು ನೀಡಿದ್ದೇನೆ. ಹಲ್ಲೆ ಮಾಡಿದ ವ್ಯಕ್ತಿಯ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಘಟನೆಯ ವೈಭವೀಕರಣಕ್ಕಿಂತ ಸತ್ಯ ಗೊತ್ತಾಗಬೇಕು ಎಂಬುದನ್ನು ಪೊಲೀಸರಿಗೆ ತಿಳಿಸಿದ್ದೇನೆ~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯಲಹಂಕ, ಯಶವಂತಪುರ, ಆನೇಕಲ್, ದೇವನಹಳ್ಳಿ, ನೆಲಮಂಗಲ ಸೇರಿದಂತೆ ನಗರದ ಸುತ್ತಮುತ್ತ ಹತ್ತು ಸಾವಿರ ಮನೆಗಳನ್ನು ನಿರ್ಮಿಸುವ ಕಾಮಗಾರಿಗೆ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ ಇಲ್ಲಿ ತಿಳಿಸಿದರು.<br /> <br /> ಕರ್ನಾಟಕ ಗೃಹ ಮಂಡಳಿಯ ಪ್ರಗತಿ ಪರಿಶೀಲನೆ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಡಿಮೆ ವೆಚ್ಚದಲ್ಲಿ ಗುಂಪು ಮನೆಗಳನ್ನು ನಿರ್ಮಿಸಿಕೊಡಲು ತೀರ್ಮಾನಿಸಲಾಗಿದ್ದು, ಕಾಮಗಾರಿ ಆರಂಭವಾದ 18 ತಿಂಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಹೇಳಿದರು.<br /> <br /> ಸೂರ್ಯನಗರಕ್ಕೆ ಶಿಂಷಾದಿಂದ ನೀರು, ಒಳಚರಂಡಿ ವ್ಯವಸ್ಥೆ ಕಲ್ಪಿಸಲು 100 ಕೋಟಿ ರೂಪಾಯಿ ವೆಚ್ಚದ ಯೋಜನೆ ರೂಪಿಸಲಾಗಿದೆ. ಇನ್ನು ಮುಂದೆ ಗೃಹ ಮಂಡಳಿಯಿಂದ ನಿರ್ಮಿಸುವ ಬಡಾವಣೆಗಳಿಗೆ ಇಲಾಖೆಯಿಂದಲೇ ಮೂಲಸೌಕರ್ಯಗಳನ್ನು ಕಲ್ಪಿಸುವ ಕೆಲಸ ಮಾಡುತ್ತೇವೆ ಎಂದರು.<br /> <br /> ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ತಾವರೆಕೆರೆ, ದೊಡ್ಡ ಆಲದಮರ, ಬಂಗಾರಪೇಟೆ, ಶ್ರೀನಿವಾಸಪುರ, ಗೂಳೂರು, ಕುಣಿಗಲ್, ಶಿರಾ ತಾಲ್ಲೂಕುಗಳಲ್ಲಿ ಬೇಡಿಕೆಯ ಸಮೀಕ್ಷೆ ಆರಂಭವಾಗಿದ್ದು, ಮೂರು ತಿಂಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. <br /> <br /> ಬೇಡಿಕೆಗೆ ಅನುಗುಣವಾಗಿ ಮನೆಗಳನ್ನು ನಿರ್ಮಿಸಲು, ನಿವೇಶನಗಳನ್ನು ಹಂಚಲು ಕ್ರಮ ಕೈಗೊಳ್ಳಲಾಗುವುದು. ಶೇ 30ರಷ್ಟು ಮನೆಗಳನ್ನು ನಿರ್ಮಿಸುವುದರ ಜೊತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತೇವೆ ಎಂದು ಸೋಮಣ್ಣ ಅವರು ಭರವಸೆ ನೀಡಿದರು.<br /> <br /> ಬಡಾವಣೆ ನಿರ್ಮಾಣವಾದ ಮೇಲೆ 4-5 ವರ್ಷಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು. ಕೆಂಗೇರಿ, ಬಂಡೆಮಠ ಮತ್ತು ವಡಗೇರಿಯಲ್ಲಿ ಗುಂಪು ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.<br /> <br /> <strong>ಕಾರಣ ತಿಳಿಯಬೇಕು</strong>: `ನನ್ನ ಮೇಲೆ ನಡೆದ ಹಲ್ಲೆಗೆ ಕಾರಣ ಏನು? ಆತನ ಉದ್ದೇಶ ಏನು ಎಂಬುದನ್ನು ತಿಳಿಯುವ ಉದ್ದೇಶದಿಂದ ದೂರು ನೀಡಿದ್ದೇನೆ. ಹಲ್ಲೆ ಮಾಡಿದ ವ್ಯಕ್ತಿಯ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಘಟನೆಯ ವೈಭವೀಕರಣಕ್ಕಿಂತ ಸತ್ಯ ಗೊತ್ತಾಗಬೇಕು ಎಂಬುದನ್ನು ಪೊಲೀಸರಿಗೆ ತಿಳಿಸಿದ್ದೇನೆ~ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>