<p><strong>ಕಾನೂರು (ಎನ್.ಆರ್.ಪುರ): </strong>ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಲವು ಗ್ರಾಮಗಳ ರಸ್ತೆಗಳು ದುರಸ್ತಿಗೊಂಡು ದಶಕಗಳೇ ಕಳೆದಿದ್ದು ಈ ರಸ್ತೆಗಳನ್ನು ಅಭಿವೃದ್ಧಿ ಪಡಿಸುವತ್ತ ಜನಪ್ರತಿನಿಧಿಗಳು ನಿರ್ಲ್ಯಕ್ಷ ಮಾಡಿದ್ದಾರೆ ಎಂಬ ದೂರು ಗ್ರಾಮಸ್ಥರರಲ್ಲಿ ಕೇಳಿಬರುತ್ತಿದೆ.<br /> <br /> ಪ್ರಮುಖವಾಗಿ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟೆಸರ–ಹೊಸಗದ್ದೆ, ತಟ್ಟೆಸರ–ಮಡೋಡಿ ಹಾಗೂ ತಟ್ಟೆಸರ– ದಾವಣ ಗ್ರಾಮದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಗ್ರಾಮಸ್ಥರ ಸಂಚಾರ ಮಾಡುವುದು ದುಸ್ತರವಾಗಿದೆ. ತಟ್ಟೆಸರದಿಂದ ಮಡೋಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯು 5 ಕಿ.ಲೋ ದೂರವಿದ್ದು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಸೇರಿದೆ. ಇದರ ವ್ಯಾಪ್ತಿಯಲ್ಲಿ ಹರಿಜನ ಕಾಲೊನಿ, ಕೆಳಕಟ್ಟಿಮನೆ, ಅವತಿಕೆರೆ, ಮಡೋಡಿ ಹರಿಜನ ಕಾಲೊನಿಗೆ ಸಂಪರ್ಕ ಕಲ್ಪಿಸುತ್ತದೆ.</p>.<p>ಈ ಮಾರ್ಗದ ಮೂಲಕವೇ ಕಟ್ಟಿಮನೆ ಶಾಲೆಗೆ, ಬಾಳೆಹೊನ್ನೂರು ಶಾಲೆಗೆ ಹೋಗುವ ಮಕ್ಕಳು ಪ್ರಯಾಣಿಸಬೇಕಾಗಿದೆ. ಗ್ರಾಮಸ್ಥರು ಇದೇ ಮಾರ್ಗದ ಮೂಲಕ 5 ಕಿ.ಮೀ ನಡೆದುಕೊಂಡು ಬಂದು ಬಸ್ ಹಿಡಿಯಬೇಕಾದ ಪರಿಸ್ಥಿತಿ ಇದೆ. ಕಳೆದ 10 ವರ್ಷದ ಹಿಂದೆ ಸಣ್ಣ ಸೇತುವೆ, ರಸ್ತೆಗೆ ಜಲ್ಲಿ, ಕೆಲವು ಮೋರಿಗಳನ್ನು ನಿರ್ಮಾಣ ಮಾಡಲಾಯಿತು. ಆದರೆ ರಸ್ತೆಗೆ ಹಾಕಿದ್ದ ಜಲ್ಲಿ ಸಂಪೂರ್ಣ ಕಿತ್ತುಕೊಂಡು ಹೋಗಿ ರಸ್ತೆ ತುಂಬ ಗುಂಡಿಗಳಾಗಿವೆ. ಮಳೆಗಾಲ ಬಂತೆಂದರೆ ಈ ಮಾರ್ಗದಲ್ಲಿ ನಡೆದುಕೊಂಡು ಹೋಗುವುದೇ ಕಷ್ಟ ರಸ್ತೆ ಯಾವುದು ಗುಂಡಿಯಾವುದು ಎಂಬುದೇ ಗೊತ್ತಾಗುವುದಿಲ್ಲ ಎನ್ನುತ್ತಾರೆ ಗ್ರಾಮಸ್ಥರು.<br /> <br /> ಇದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಟ್ಟೆಸರದಿಂದ ದಾವಣ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 3 ಕಿ.ಲೋ ದೂರದ ಜಿಲ್ಲಾ ಪಂಚಾಯಿತಿ ರಸ್ತೆಯಿದೆ. ಈ ರಸ್ತೆಗೆ ಅಲ್ಲಲ್ಲಿ ಡಾಂಬರೀಕರಣ ಮಾಡಲಾಗಿದ್ದರೂ ಅದು ಸಹ ಸಂಪೂರ್ಣ ದುಸ್ಥಿತಿಗೆ ತಲುಪಿದೆ. ಹರಾವರಿ ಹಾಗೂ ದಾವಣ ಗ್ರಾಮಗಳ ಮೂಲಕ ಹಾದು ಹೋಗುವ ಈ ರಸ್ತೆಯು ಕಲ್ಲೂರು, ದಾವಣ, ಅರಕುಡಿಗೆ, ತಟ್ಟೆಸರ ಕೆಳಗಿನ ಕಾಲೊನಿಗಳು ಸಂಪರ್ಕ ಕಲ್ಪಿಸುತ್ತದೆ.<br /> <br /> ಈ ಎಲ್ಲ ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತೆ ಕಳೆದ 10 ವರ್ಷಗಳಿಂದಲೂ ಕ್ಷೇತ್ರದ ಎಲ್ಲ ಹಂತದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆ ದುರಸ್ತಿಯಾಗದೇ ಹಾಗೆಯೇ ಉಳಿಯಿತು. ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲ ಎನ್ನುತ್ತಾರೆ ಕಾನೂರು ಗ್ರಾಮಸ್ಥರಾದ ಸುಬ್ರಾಯಗೌಡ.<br /> <br /> ಈ ರಸ್ತೆಯ ಅಭಿವೃದ್ಧಿಗೆ ಜಿಲ್ಲಾಪಂಚಾಯಿತಿ ಅನುದಾನದಲ್ಲಿ ₨ 3 ಲಕ್ಷ ಮೀಸಲಿಡಲಾಗಿತ್ತು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಈ ಅನುದಾನ ಸಾಕಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಸದರಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಮಹಮ್ಮದ್ ಇಫ್ತೀಕಾರ್ ಆದಿಲ್ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ಈ ಬಗ್ಗೆ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಪ್ರಸಕ್ತ ಸಾಲಿನ ಸಂಸದರ ಅನುದಾನದಲ್ಲಿ ಈ ರಸ್ತೆ ಅಭಿವೃದ್ಧಿ ಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.<br /> <strong>– ಕೆ.ವಿ.ನಾಗರಾಜ್</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನೂರು (ಎನ್.ಆರ್.ಪುರ): </strong>ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಲವು ಗ್ರಾಮಗಳ ರಸ್ತೆಗಳು ದುರಸ್ತಿಗೊಂಡು ದಶಕಗಳೇ ಕಳೆದಿದ್ದು ಈ ರಸ್ತೆಗಳನ್ನು ಅಭಿವೃದ್ಧಿ ಪಡಿಸುವತ್ತ ಜನಪ್ರತಿನಿಧಿಗಳು ನಿರ್ಲ್ಯಕ್ಷ ಮಾಡಿದ್ದಾರೆ ಎಂಬ ದೂರು ಗ್ರಾಮಸ್ಥರರಲ್ಲಿ ಕೇಳಿಬರುತ್ತಿದೆ.<br /> <br /> ಪ್ರಮುಖವಾಗಿ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟೆಸರ–ಹೊಸಗದ್ದೆ, ತಟ್ಟೆಸರ–ಮಡೋಡಿ ಹಾಗೂ ತಟ್ಟೆಸರ– ದಾವಣ ಗ್ರಾಮದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಗ್ರಾಮಸ್ಥರ ಸಂಚಾರ ಮಾಡುವುದು ದುಸ್ತರವಾಗಿದೆ. ತಟ್ಟೆಸರದಿಂದ ಮಡೋಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯು 5 ಕಿ.ಲೋ ದೂರವಿದ್ದು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಸೇರಿದೆ. ಇದರ ವ್ಯಾಪ್ತಿಯಲ್ಲಿ ಹರಿಜನ ಕಾಲೊನಿ, ಕೆಳಕಟ್ಟಿಮನೆ, ಅವತಿಕೆರೆ, ಮಡೋಡಿ ಹರಿಜನ ಕಾಲೊನಿಗೆ ಸಂಪರ್ಕ ಕಲ್ಪಿಸುತ್ತದೆ.</p>.<p>ಈ ಮಾರ್ಗದ ಮೂಲಕವೇ ಕಟ್ಟಿಮನೆ ಶಾಲೆಗೆ, ಬಾಳೆಹೊನ್ನೂರು ಶಾಲೆಗೆ ಹೋಗುವ ಮಕ್ಕಳು ಪ್ರಯಾಣಿಸಬೇಕಾಗಿದೆ. ಗ್ರಾಮಸ್ಥರು ಇದೇ ಮಾರ್ಗದ ಮೂಲಕ 5 ಕಿ.ಮೀ ನಡೆದುಕೊಂಡು ಬಂದು ಬಸ್ ಹಿಡಿಯಬೇಕಾದ ಪರಿಸ್ಥಿತಿ ಇದೆ. ಕಳೆದ 10 ವರ್ಷದ ಹಿಂದೆ ಸಣ್ಣ ಸೇತುವೆ, ರಸ್ತೆಗೆ ಜಲ್ಲಿ, ಕೆಲವು ಮೋರಿಗಳನ್ನು ನಿರ್ಮಾಣ ಮಾಡಲಾಯಿತು. ಆದರೆ ರಸ್ತೆಗೆ ಹಾಕಿದ್ದ ಜಲ್ಲಿ ಸಂಪೂರ್ಣ ಕಿತ್ತುಕೊಂಡು ಹೋಗಿ ರಸ್ತೆ ತುಂಬ ಗುಂಡಿಗಳಾಗಿವೆ. ಮಳೆಗಾಲ ಬಂತೆಂದರೆ ಈ ಮಾರ್ಗದಲ್ಲಿ ನಡೆದುಕೊಂಡು ಹೋಗುವುದೇ ಕಷ್ಟ ರಸ್ತೆ ಯಾವುದು ಗುಂಡಿಯಾವುದು ಎಂಬುದೇ ಗೊತ್ತಾಗುವುದಿಲ್ಲ ಎನ್ನುತ್ತಾರೆ ಗ್ರಾಮಸ್ಥರು.<br /> <br /> ಇದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಟ್ಟೆಸರದಿಂದ ದಾವಣ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 3 ಕಿ.ಲೋ ದೂರದ ಜಿಲ್ಲಾ ಪಂಚಾಯಿತಿ ರಸ್ತೆಯಿದೆ. ಈ ರಸ್ತೆಗೆ ಅಲ್ಲಲ್ಲಿ ಡಾಂಬರೀಕರಣ ಮಾಡಲಾಗಿದ್ದರೂ ಅದು ಸಹ ಸಂಪೂರ್ಣ ದುಸ್ಥಿತಿಗೆ ತಲುಪಿದೆ. ಹರಾವರಿ ಹಾಗೂ ದಾವಣ ಗ್ರಾಮಗಳ ಮೂಲಕ ಹಾದು ಹೋಗುವ ಈ ರಸ್ತೆಯು ಕಲ್ಲೂರು, ದಾವಣ, ಅರಕುಡಿಗೆ, ತಟ್ಟೆಸರ ಕೆಳಗಿನ ಕಾಲೊನಿಗಳು ಸಂಪರ್ಕ ಕಲ್ಪಿಸುತ್ತದೆ.<br /> <br /> ಈ ಎಲ್ಲ ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತೆ ಕಳೆದ 10 ವರ್ಷಗಳಿಂದಲೂ ಕ್ಷೇತ್ರದ ಎಲ್ಲ ಹಂತದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರಸ್ತೆ ದುರಸ್ತಿಯಾಗದೇ ಹಾಗೆಯೇ ಉಳಿಯಿತು. ಗ್ರಾಮಸ್ಥರ ಗೋಳು ಕೇಳುವವರೇ ಇಲ್ಲ ಎನ್ನುತ್ತಾರೆ ಕಾನೂರು ಗ್ರಾಮಸ್ಥರಾದ ಸುಬ್ರಾಯಗೌಡ.<br /> <br /> ಈ ರಸ್ತೆಯ ಅಭಿವೃದ್ಧಿಗೆ ಜಿಲ್ಲಾಪಂಚಾಯಿತಿ ಅನುದಾನದಲ್ಲಿ ₨ 3 ಲಕ್ಷ ಮೀಸಲಿಡಲಾಗಿತ್ತು. ಆದರೆ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಈ ಅನುದಾನ ಸಾಕಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಸದರಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಮಹಮ್ಮದ್ ಇಫ್ತೀಕಾರ್ ಆದಿಲ್ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ಈ ಬಗ್ಗೆ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಪ್ರಸಕ್ತ ಸಾಲಿನ ಸಂಸದರ ಅನುದಾನದಲ್ಲಿ ಈ ರಸ್ತೆ ಅಭಿವೃದ್ಧಿ ಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.<br /> <strong>– ಕೆ.ವಿ.ನಾಗರಾಜ್</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>