<p>ಕಾರವಾರ: ಇಲ್ಲಿನ ಹೊರವಲಯದ ಅಂಚಿನಲ್ಲಿರುವ ಸಂಪರ್ಕ ರಸ್ತೆಯೊಂದು ಸಂಪೂರ್ಣ ಹಾಳಾಗಿದ್ದು, ಇದರಿಂದ ಇಲ್ಲಿ ಸಂಚರಿಸುವ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ.<br /> <br /> ನಗರದಿಂದ ಸುಮಾರು 5 ಕಿ.ಮೀ. ದೂರದಲ್ಲಿರುವ ಈ ರಸ್ತೆಯು ಕಾರವಾರ ತಾಲ್ಲೂಕಿನ ಸದಾಶಿವಗಡಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯು ಕಳೆದೆರಡು ವರ್ಷಗಳಿಂದ ಹದಗೆಟ್ಟಿದ್ದು, ಅಲ್ಲಲ್ಲಿ ಹೊಂಡಗಳಾಗಿವೆ. ಮಳೆಗಾಲದಲ್ಲಿ ಈ ರಸ್ತೆ ಕೊಚ್ಚೆಗುಂಡಿಯಾಗಿ ಪರಿವರ್ತನೆಯಾಗುತ್ತದೆ.<br /> <br /> ಈ ರಸ್ತೆ ಮಾರ್ಗವಾಗಿ ನಿತ್ಯ ನೂರಾರು ಸಾರಿಗೆ ಬಸ್ಗಳು, ಕಾರುಗಳು, ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಬೆಳಗಾವಿ, ಪುಣೆ, ವಿಜಾಪುರ, ಮಲ್ಲಾಪುರ, ಕೈಗಾಕ್ಕೆ ಈ ಮಾರ್ಗವಾಗಿಯೇ ಹೋಗಬೇಕು. ಆದರೆ, ಹದಗೆಟ್ಟ ರಸ್ತೆಯಿಂದ ಇಲ್ಲಿ ಸಂಚರಿಸುವ ವಾಹನ ಸವಾರರು ಹೈರಾಣಾಗುತ್ತಿದ್ದಾರೆ.<br /> <br /> ಇದರ ದುರಸ್ತಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ.<br /> <br /> ಈ ರಸ್ತೆಯ ಸಮೀಪದಲ್ಲೆ ಶಾಲೆ, ಮಾರುಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳು ಇರುವುದರಿಂದ ಇಲ್ಲಿ ಸದಾ ಜನಸಂದಣಿಯಿಂದ ಕೂಡಿರುತ್ತದೆ. ಆದರೂ ಕೂಡ ಈ ರಸ್ತೆಯ ಅಭಿವೃದ್ಧಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನ ಹರಿಸಿಲ್ಲ.<br /> <br /> ಸ್ವಚ್ಛತೆ, ಬೀದಿ ದೀಪದ ಕೊರತೆ: ಹದಗೆಟ್ಟ ರಸ್ತೆಯ ಜೊತೆಗೆ ಇಲ್ಲಿ ಸ್ವಚ್ಛತೆ ಹಾಗೂ ಬೀದಿ ದೀಪದ ವ್ಯವಸ್ಥೆ ಕೂಡ ಸಮರ್ಪಕವಾಗಿಲ್ಲ. ರಸ್ತೆಯ ಬದಿಯಲ್ಲಿನ ಕಸದ ತೊಟ್ಟಿ ಸುತ್ತಮುತ್ತ ಕಸ ಚೆಲ್ಲಾಪಿಲ್ಲಿಯಾಗಿ ಹರಡಿರುತ್ತದೆ. ಈ ಮಾರ್ಗದಲ್ಲಿ ಬೀದಿ ದೀಪ ಕೂಡ ಹಾಳಾಗಿದ್ದು, ರಾತ್ರಿ ವೇಳೆ ಕತ್ತಲೆಯಲ್ಲಿ ಸಂಚರಿಸಬೇಕಾದ ದುಃಸ್ಥಿತಿ ಇದೆ.<br /> <br /> ರಸ್ತೆ ದುರಸ್ತಿ ಮಾಡುವ ಸಂಬಂಧ ಚಿತ್ತಾಕುಲ ಗ್ರಾಮ ಪಂಚಾಯ್ತಿ ಅಧಿಕಾರಿಗಳನ್ನು ಕೇಳಿದರೆ ಈ ರಸ್ತೆ ಲೋಕೋಪಯೋಗಿ ಇಲಾಖೆ ಸೇರಿದ್ದು, ಹಾಗಾಗಿ ಅವರೇ ಈ ರಸ್ತೆಯ ಅಭಿವೃದ್ಧಿ ಮಾಡಬೇಕು ಎಂದು ಹಾರಿಕೆ ಉತ್ತರ ನೀಡುತ್ತಾರೆ.<br /> <br /> ‘ಕಳೆದ ವರ್ಷ ಈ ರಸ್ತೆಗೆ ಜಲ್ಲಿ ಪೌಡರ್ ಹಾಕಿ ತೇಪೆ ಹಾಕಲಾಗಿತ್ತು. ಆದರೆ, ಈ ಬಾರಿಯ ಮಳೆಗೆ ಅದು ಕೊಚ್ಚಿಕೊಂಡು ಹೋಗಿದೆ. ಹದಗೆಟ್ಟ ರಸ್ತೆಯಿಂದ ಇಲ್ಲಿ ಅಪಘಾತಗಳು ನಡೆದ ನಿದರ್ಶನಗಳಿವೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ರಸ್ತೆಯನ್ನು ದುರಸ್ತಿಪಡಿಸಬೇಕು’ ಎಂದು ಸ್ಥಳೀಯರಾದ ಅಜಿತ್ ಪೊಕಳೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ಇಲ್ಲಿನ ಹೊರವಲಯದ ಅಂಚಿನಲ್ಲಿರುವ ಸಂಪರ್ಕ ರಸ್ತೆಯೊಂದು ಸಂಪೂರ್ಣ ಹಾಳಾಗಿದ್ದು, ಇದರಿಂದ ಇಲ್ಲಿ ಸಂಚರಿಸುವ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ.<br /> <br /> ನಗರದಿಂದ ಸುಮಾರು 5 ಕಿ.ಮೀ. ದೂರದಲ್ಲಿರುವ ಈ ರಸ್ತೆಯು ಕಾರವಾರ ತಾಲ್ಲೂಕಿನ ಸದಾಶಿವಗಡಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯು ಕಳೆದೆರಡು ವರ್ಷಗಳಿಂದ ಹದಗೆಟ್ಟಿದ್ದು, ಅಲ್ಲಲ್ಲಿ ಹೊಂಡಗಳಾಗಿವೆ. ಮಳೆಗಾಲದಲ್ಲಿ ಈ ರಸ್ತೆ ಕೊಚ್ಚೆಗುಂಡಿಯಾಗಿ ಪರಿವರ್ತನೆಯಾಗುತ್ತದೆ.<br /> <br /> ಈ ರಸ್ತೆ ಮಾರ್ಗವಾಗಿ ನಿತ್ಯ ನೂರಾರು ಸಾರಿಗೆ ಬಸ್ಗಳು, ಕಾರುಗಳು, ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಬೆಳಗಾವಿ, ಪುಣೆ, ವಿಜಾಪುರ, ಮಲ್ಲಾಪುರ, ಕೈಗಾಕ್ಕೆ ಈ ಮಾರ್ಗವಾಗಿಯೇ ಹೋಗಬೇಕು. ಆದರೆ, ಹದಗೆಟ್ಟ ರಸ್ತೆಯಿಂದ ಇಲ್ಲಿ ಸಂಚರಿಸುವ ವಾಹನ ಸವಾರರು ಹೈರಾಣಾಗುತ್ತಿದ್ದಾರೆ.<br /> <br /> ಇದರ ದುರಸ್ತಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದಾರೆಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ.<br /> <br /> ಈ ರಸ್ತೆಯ ಸಮೀಪದಲ್ಲೆ ಶಾಲೆ, ಮಾರುಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳು ಇರುವುದರಿಂದ ಇಲ್ಲಿ ಸದಾ ಜನಸಂದಣಿಯಿಂದ ಕೂಡಿರುತ್ತದೆ. ಆದರೂ ಕೂಡ ಈ ರಸ್ತೆಯ ಅಭಿವೃದ್ಧಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನ ಹರಿಸಿಲ್ಲ.<br /> <br /> ಸ್ವಚ್ಛತೆ, ಬೀದಿ ದೀಪದ ಕೊರತೆ: ಹದಗೆಟ್ಟ ರಸ್ತೆಯ ಜೊತೆಗೆ ಇಲ್ಲಿ ಸ್ವಚ್ಛತೆ ಹಾಗೂ ಬೀದಿ ದೀಪದ ವ್ಯವಸ್ಥೆ ಕೂಡ ಸಮರ್ಪಕವಾಗಿಲ್ಲ. ರಸ್ತೆಯ ಬದಿಯಲ್ಲಿನ ಕಸದ ತೊಟ್ಟಿ ಸುತ್ತಮುತ್ತ ಕಸ ಚೆಲ್ಲಾಪಿಲ್ಲಿಯಾಗಿ ಹರಡಿರುತ್ತದೆ. ಈ ಮಾರ್ಗದಲ್ಲಿ ಬೀದಿ ದೀಪ ಕೂಡ ಹಾಳಾಗಿದ್ದು, ರಾತ್ರಿ ವೇಳೆ ಕತ್ತಲೆಯಲ್ಲಿ ಸಂಚರಿಸಬೇಕಾದ ದುಃಸ್ಥಿತಿ ಇದೆ.<br /> <br /> ರಸ್ತೆ ದುರಸ್ತಿ ಮಾಡುವ ಸಂಬಂಧ ಚಿತ್ತಾಕುಲ ಗ್ರಾಮ ಪಂಚಾಯ್ತಿ ಅಧಿಕಾರಿಗಳನ್ನು ಕೇಳಿದರೆ ಈ ರಸ್ತೆ ಲೋಕೋಪಯೋಗಿ ಇಲಾಖೆ ಸೇರಿದ್ದು, ಹಾಗಾಗಿ ಅವರೇ ಈ ರಸ್ತೆಯ ಅಭಿವೃದ್ಧಿ ಮಾಡಬೇಕು ಎಂದು ಹಾರಿಕೆ ಉತ್ತರ ನೀಡುತ್ತಾರೆ.<br /> <br /> ‘ಕಳೆದ ವರ್ಷ ಈ ರಸ್ತೆಗೆ ಜಲ್ಲಿ ಪೌಡರ್ ಹಾಕಿ ತೇಪೆ ಹಾಕಲಾಗಿತ್ತು. ಆದರೆ, ಈ ಬಾರಿಯ ಮಳೆಗೆ ಅದು ಕೊಚ್ಚಿಕೊಂಡು ಹೋಗಿದೆ. ಹದಗೆಟ್ಟ ರಸ್ತೆಯಿಂದ ಇಲ್ಲಿ ಅಪಘಾತಗಳು ನಡೆದ ನಿದರ್ಶನಗಳಿವೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ರಸ್ತೆಯನ್ನು ದುರಸ್ತಿಪಡಿಸಬೇಕು’ ಎಂದು ಸ್ಥಳೀಯರಾದ ಅಜಿತ್ ಪೊಕಳೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>