<p>ಕೊಳ್ಳೇಗಾಲ: ಮಳೆ ಬಾರದೆ ಸಂಪೂರ್ಣವಾಗಿ ಒಣಗಿಹೋಗಿರುವ ಕಬ್ಬಿನ ಬೆಳೆಗೆ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಶಾಸಕ ಆರ್.ನರೇಂದ್ರ ಭರವಸೆ ನೀಡಿದರು.<br /> <br /> ತಾಲ್ಲೂಕಿನ ಹನೂರು ಸಮೀಪದ ಬೆಳ್ತೂರು ಗ್ರಾಮದ ರೈತ ಪುಟ್ಟರಾಜಶೆಟ್ಟಿ ಅವರ 4 ಎಕರೆ ಜಮೀನಿನಲ್ಲಿ ಹಾಕಿದ್ದ ಕಬ್ಬಿನ ಬೆಳೆ ಅಂತರ್ಜಲ ಕುಸಿತ ಮತ್ತು ಮಳೆ ಇಲ್ಲದ ಕಾರಣ ಸಂಪೂರ್ಣವಾಗಿ ಒಣಗಿ ನಷ್ಟ ಉಂಟಾಗಿದ್ದು, ಬುಧವಾರ ಶಾಸಕ ಆರ್. ನರೇಂದ್ರ ಭೇಟಿ ನೀಡಿ ಪರಿಶೀಲಿಸಿದರು.<br /> <br /> ಮಳೆಬಾರದ ಹನೂರು ಕ್ಷೇತ್ರದಲ್ಲಿ ಹೆಚ್ಚಿನ ಬೆಳೆ ನಷ್ಟ ಉಂಟಾಗಿದ್ದು ರೈತರಿಗೆ ಕೂಡಲೇ ಸೂಕ್ತ ಪರಿಹಾರ ದೊರಕಿಸಲು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುವುದಾಗಿ ಅವರು ರೈತರಿಗೆ ತಿಳಿಸಿದರು.<br /> ರಾಮಾಪುರ ಬ್ಲಾಕ್ ಅಧ್ಯಕ್ಷ ಕೆ. ಕಾಮರಾಜು ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಮಳೆ ಬಾರದೆ ಸಂಪೂರ್ಣವಾಗಿ ಒಣಗಿಹೋಗಿರುವ ಕಬ್ಬಿನ ಬೆಳೆಗೆ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಶಾಸಕ ಆರ್.ನರೇಂದ್ರ ಭರವಸೆ ನೀಡಿದರು.<br /> <br /> ತಾಲ್ಲೂಕಿನ ಹನೂರು ಸಮೀಪದ ಬೆಳ್ತೂರು ಗ್ರಾಮದ ರೈತ ಪುಟ್ಟರಾಜಶೆಟ್ಟಿ ಅವರ 4 ಎಕರೆ ಜಮೀನಿನಲ್ಲಿ ಹಾಕಿದ್ದ ಕಬ್ಬಿನ ಬೆಳೆ ಅಂತರ್ಜಲ ಕುಸಿತ ಮತ್ತು ಮಳೆ ಇಲ್ಲದ ಕಾರಣ ಸಂಪೂರ್ಣವಾಗಿ ಒಣಗಿ ನಷ್ಟ ಉಂಟಾಗಿದ್ದು, ಬುಧವಾರ ಶಾಸಕ ಆರ್. ನರೇಂದ್ರ ಭೇಟಿ ನೀಡಿ ಪರಿಶೀಲಿಸಿದರು.<br /> <br /> ಮಳೆಬಾರದ ಹನೂರು ಕ್ಷೇತ್ರದಲ್ಲಿ ಹೆಚ್ಚಿನ ಬೆಳೆ ನಷ್ಟ ಉಂಟಾಗಿದ್ದು ರೈತರಿಗೆ ಕೂಡಲೇ ಸೂಕ್ತ ಪರಿಹಾರ ದೊರಕಿಸಲು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುವುದಾಗಿ ಅವರು ರೈತರಿಗೆ ತಿಳಿಸಿದರು.<br /> ರಾಮಾಪುರ ಬ್ಲಾಕ್ ಅಧ್ಯಕ್ಷ ಕೆ. ಕಾಮರಾಜು ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>