<p><strong>ಗಂಗಾವತಿ:</strong> ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಮಾಲಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ವಸ್ತುಸ್ಥಿತಿಯ ಆಧಾರದ ಮೇಲೆ ರಾಜ್ಯದ ಎಪಿಎಂಸಿಗಳನ್ನು ಎರಡು ಅಥವಾ ಮೂರು ಭಾಗವಾಗಿ ವರ್ಗೀಕರಿಸಲಾಗುವುದು ಎಂದು ಕೃಷಿ ಮಾರಾಟ ನಿರ್ದೇಶನಾಲಯದ ನಿರ್ದೇಶಕ ವಿ.ಬಿ. ಪಾಟೀಲ್ ತಿಳಿಸಿದರು.<br /> <br /> ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿರುವ ಸಮುದಾಯ ಭವನದಲ್ಲಿ ಭಾನುವಾರ ಎಪಿಎಂಸಿ ಹಮಾಲಿ ಕಾರ್ಮಿಕರ 2ನೇ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಎಪಿಎಂಸಿ ಹಮಾಲಿ ಕಾರ್ಮಿಕರು ಈ ಹಿಂದೆ ಸಲ್ಲಿಸಿದ್ದ ಬೇಡಿಕೆಯ ಬಗ್ಗೆ ಚರ್ಚಿಸಿ ಪರಿಶೀಲನೆಗೆ ಸರ್ಕಾರಕ್ಕೆ ಸಲ್ಲಿಸಲಾಗಿದೆ.<br /> <br /> ಅವುಗಳಲ್ಲಿ ಒಂದಷ್ಟು ಬೇಡಿಕೆ ಈಡೇರುವ ಹಂತದಲ್ಲಿವೆ. ಇವುಗಳಲ್ಲಿ ವಸತಿ ಸಮಸ್ಯೆಯೇ ಮುಖ್ಯವಾದದ್ದು. ರಾಜ್ಯದ ಕೆಲ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಜಮೀನು ಇದೆ. <br /> <br /> ಅಂತಹ ಎಪಿಎಂಸಿಗಳಲ್ಲಿ ಹಮಾಲಿ ಕಾರ್ಮಿಕರಿಗೆ ವಸತಿ ನಿವೇಶನಕ್ಕೆ ಯೋಜನೆ ರೂಪಿಸಲಾಗುವುದು ಎಂದರು. ಹಮಾಲಿ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಸಿಐಟಿಯು ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಸ್. ಪ್ರಸನ್ನ ಕುಮಾರ್, ುಖಂಡ ಜಿ. ನಾಗರಾಜ್, ಮಾಜಿ ಶಾಸಕ ಜಿ. ವೀರಪ್ಪ, ಎಪಿಎಂಸಿ ಹಮಾಲರ ಸಂಘದ ಮಾಜಿ ಅಧ್ಯಕ್ಷ ಜೋಗದ ನಾರಾಯಣಪ್ಪ ನಾಯಕ, ಆರ್.ಕೆ. ದೇಸಾಯಿ, ಎ.ಎಲ್. ತಿಮ್ಮಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಮಾಲಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ವಸ್ತುಸ್ಥಿತಿಯ ಆಧಾರದ ಮೇಲೆ ರಾಜ್ಯದ ಎಪಿಎಂಸಿಗಳನ್ನು ಎರಡು ಅಥವಾ ಮೂರು ಭಾಗವಾಗಿ ವರ್ಗೀಕರಿಸಲಾಗುವುದು ಎಂದು ಕೃಷಿ ಮಾರಾಟ ನಿರ್ದೇಶನಾಲಯದ ನಿರ್ದೇಶಕ ವಿ.ಬಿ. ಪಾಟೀಲ್ ತಿಳಿಸಿದರು.<br /> <br /> ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿರುವ ಸಮುದಾಯ ಭವನದಲ್ಲಿ ಭಾನುವಾರ ಎಪಿಎಂಸಿ ಹಮಾಲಿ ಕಾರ್ಮಿಕರ 2ನೇ ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಎಪಿಎಂಸಿ ಹಮಾಲಿ ಕಾರ್ಮಿಕರು ಈ ಹಿಂದೆ ಸಲ್ಲಿಸಿದ್ದ ಬೇಡಿಕೆಯ ಬಗ್ಗೆ ಚರ್ಚಿಸಿ ಪರಿಶೀಲನೆಗೆ ಸರ್ಕಾರಕ್ಕೆ ಸಲ್ಲಿಸಲಾಗಿದೆ.<br /> <br /> ಅವುಗಳಲ್ಲಿ ಒಂದಷ್ಟು ಬೇಡಿಕೆ ಈಡೇರುವ ಹಂತದಲ್ಲಿವೆ. ಇವುಗಳಲ್ಲಿ ವಸತಿ ಸಮಸ್ಯೆಯೇ ಮುಖ್ಯವಾದದ್ದು. ರಾಜ್ಯದ ಕೆಲ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಜಮೀನು ಇದೆ. <br /> <br /> ಅಂತಹ ಎಪಿಎಂಸಿಗಳಲ್ಲಿ ಹಮಾಲಿ ಕಾರ್ಮಿಕರಿಗೆ ವಸತಿ ನಿವೇಶನಕ್ಕೆ ಯೋಜನೆ ರೂಪಿಸಲಾಗುವುದು ಎಂದರು. ಹಮಾಲಿ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಸಿಐಟಿಯು ಸಂಘಟನೆಯ ರಾಜ್ಯ ಕಾರ್ಯದರ್ಶಿ ಎಸ್. ಪ್ರಸನ್ನ ಕುಮಾರ್, ುಖಂಡ ಜಿ. ನಾಗರಾಜ್, ಮಾಜಿ ಶಾಸಕ ಜಿ. ವೀರಪ್ಪ, ಎಪಿಎಂಸಿ ಹಮಾಲರ ಸಂಘದ ಮಾಜಿ ಅಧ್ಯಕ್ಷ ಜೋಗದ ನಾರಾಯಣಪ್ಪ ನಾಯಕ, ಆರ್.ಕೆ. ದೇಸಾಯಿ, ಎ.ಎಲ್. ತಿಮ್ಮಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>