<p><strong>ರಾಯಚೂರು:</strong> ಇಲ್ಲಿನ ಹರಿಜನವಾಡ ಬಡಾವಣೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 24 ಗಂಟೆಗಳ ತುರ್ತು ಸೇವೆ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಜಾ ಸೇವಾ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಎಸ್. ಎನ್. ನಾಗರಾಜ ಅವರಿಗೆ ಮನವಿ ಸಲ್ಲಿಸಿದರು.<br /> <br /> ಬಡಾವಣೆಯಲ್ಲಿ ಆರೋಗ್ಯ ಕೇಂದ್ರ ಇದ್ದರೂ ಯಾವುದೇ ಸೌಕರ್ಯಗಳು ಇರುವುದಿಲ್ಲ. ಹೆರಿಗೆ, ತುರ್ತು ಚಿಕಿತ್ಸೆಗೆ ಸಂಬಂಧಿಸಿದ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಪಾದಿಸಿದರು.<br /> <br /> ಈ ಬಡಾವಣೆಯಲ್ಲಿ ನಗರಸಭೆಯು ಶೇ 22.75ರ ಯೋಜನೆಯಡಿ ಸಮುದಾಯ ಭವನ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಸರ್ಕಾರ ಶೇ 22.75ಯೋಜನೆಯಲ್ಲಿ ಅನುದಾನ ಮಂಜೂರು ಮಾಡಿದರೂ ನಗರಸಭೆ ಅನುದಾನವನ್ನು ಬಳಕೆ ಮಾಡಿಲ್ಲ ಎಂದು ಆರೋಪಿಸಿದರು.<br /> <br /> ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಬ್ಬರು ವೈದ್ಯರನ್ನು ನೇಮಕ ಮಾಡಬೇಕು. ಅಂಬ್ಯುಲೆನ್ಸ್ ವಾಹನದ ವ್ಯವಸ್ಥೆ ಮಾಡಬೇಕು. ಅರ್ಧಕ್ಕೆ ಸ್ಥಗಿತಗೊಂಡ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳಿಸಬೇಕು.<br /> <br /> ಗ್ರಂಥಾಲಯದ ವ್ಯವಸ್ಥೆ ಮಾಡಬೇಕು ಎಂದು ಸಮಿತಿ ಅಧ್ಯಕ್ಷ ಶ್ರೀಹರಿ ಜಗ್ಲಿ, ಪ್ರಧಾನ ಕಾರ್ಯದರ್ಶಿ ಜೆ.ಮಾರೆಪ್ಪ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಪದಾಧಿಕಾರಿಗಳಾದ ಆರ್.ಉರುಕುಂದ, ಎಸ್.ರಾಜು, ಎ. ಉರುಕುಂದ, ಎಂ. ಹನುಮಂತಪ್ಪ ಹಾಗೂ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಇಲ್ಲಿನ ಹರಿಜನವಾಡ ಬಡಾವಣೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 24 ಗಂಟೆಗಳ ತುರ್ತು ಸೇವೆ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಜಾ ಸೇವಾ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಎಸ್. ಎನ್. ನಾಗರಾಜ ಅವರಿಗೆ ಮನವಿ ಸಲ್ಲಿಸಿದರು.<br /> <br /> ಬಡಾವಣೆಯಲ್ಲಿ ಆರೋಗ್ಯ ಕೇಂದ್ರ ಇದ್ದರೂ ಯಾವುದೇ ಸೌಕರ್ಯಗಳು ಇರುವುದಿಲ್ಲ. ಹೆರಿಗೆ, ತುರ್ತು ಚಿಕಿತ್ಸೆಗೆ ಸಂಬಂಧಿಸಿದ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಪಾದಿಸಿದರು.<br /> <br /> ಈ ಬಡಾವಣೆಯಲ್ಲಿ ನಗರಸಭೆಯು ಶೇ 22.75ರ ಯೋಜನೆಯಡಿ ಸಮುದಾಯ ಭವನ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಸರ್ಕಾರ ಶೇ 22.75ಯೋಜನೆಯಲ್ಲಿ ಅನುದಾನ ಮಂಜೂರು ಮಾಡಿದರೂ ನಗರಸಭೆ ಅನುದಾನವನ್ನು ಬಳಕೆ ಮಾಡಿಲ್ಲ ಎಂದು ಆರೋಪಿಸಿದರು.<br /> <br /> ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಬ್ಬರು ವೈದ್ಯರನ್ನು ನೇಮಕ ಮಾಡಬೇಕು. ಅಂಬ್ಯುಲೆನ್ಸ್ ವಾಹನದ ವ್ಯವಸ್ಥೆ ಮಾಡಬೇಕು. ಅರ್ಧಕ್ಕೆ ಸ್ಥಗಿತಗೊಂಡ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳಿಸಬೇಕು.<br /> <br /> ಗ್ರಂಥಾಲಯದ ವ್ಯವಸ್ಥೆ ಮಾಡಬೇಕು ಎಂದು ಸಮಿತಿ ಅಧ್ಯಕ್ಷ ಶ್ರೀಹರಿ ಜಗ್ಲಿ, ಪ್ರಧಾನ ಕಾರ್ಯದರ್ಶಿ ಜೆ.ಮಾರೆಪ್ಪ ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಪದಾಧಿಕಾರಿಗಳಾದ ಆರ್.ಉರುಕುಂದ, ಎಸ್.ರಾಜು, ಎ. ಉರುಕುಂದ, ಎಂ. ಹನುಮಂತಪ್ಪ ಹಾಗೂ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>