<p>ತಿಪಟೂರು: ಮಹಾತ್ಮ ಗಾಂಧೀಜಿ ರೀತಿ ಸರಳವಾಗಿ ಬದುಕಿ ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಹರ್ಡೇಕರ್ ಮಂಜಪ್ಪ ಅವರನ್ನು ಮತ್ತೆ ಮತ್ತೆ ನೆನೆಯುವ ಮೂಲಕ ಹೊಸ ಜನಾಂಗದಲ್ಲಿ ನೈತಿಕತೆ ಕಟ್ಟಬೇಕಿದೆ ಎಂದು ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ತಿಳಿಸಿದರು.<br /> <br /> ನಗರದ ಗುರುಕುಲಾನಂದಾಶ್ರಮದಲ್ಲಿ ಈಚೆಗೆ ನಡೆದ ಲಿ.ಮಲಿಗಮ್ಮ ಶಿವಪ್ಪಶಾಸ್ತ್ರಿ ಸ್ಮರಣಾರ್ಥ ದತ್ತಿ ಮಾಲಿಕೆಯಲ್ಲಿ ಅವರು ಹರ್ಡೇಕರ್ ಕುರಿತು ಉಪನ್ಯಾಸ ನೀಡಿದರು.<br /> <br /> 1886ರ ಫೆ.18ರಂದು ಬನವಾಸಿಯ ಬಡ ಕುಟುಂಬದಲ್ಲಿ ಜನಿಸಿದ ಮಂಜಪ್ಪ ಅವರು ಪರಿಶ್ರಮದಿಂದ ಕೂಲಿ ಮಠದಲ್ಲಿ ವಿದ್ಯೆ ಕಲಿತರು. ಶಿಕ್ಷಕ ವೃತ್ತಿಗೆ ಸೇರಿದ ಸಂದರ್ಭದಲ್ಲೇ ಮಹಾತ್ಮಾ ಗಾಂಧಿ ಕರೆಗೆ ಓಗೊಟ್ಟು ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು ಎಂದು ಮಂಜಪ್ಪ ಜೀವನ ನೆನಪಿಸಿದರು.<br /> <br /> 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಸಾಹಿತ್ಯ ಸೇವೆಯನ್ನೂ ಸಲ್ಲಿಸಿದರು. ಅವರ ಬದುಕು ಮತ್ತು ಹೋರಾಟ ಅರಿಯುವ ಮೂಲಕ ನಾವು ಹೊಸ ಕಾಲದ ಸವಾಲುಗಳನ್ನು ಎದುರಿಸಬೇಕು ಎಂದು ತಿಳಿಸಿದರು.<br /> <br /> ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ನಗರಸಭೆ ಸದಸ್ಯ ಎಚ್.ಸಿ.ನಾಗರಾಜು ಕಾರ್ಯಕ್ರಮ ಉದ್ಘಾಟಿಸಿದರು.<br /> <br /> ಲೆಕ್ಕ ಪರಿಶೋಧಕ ವಿರೂಪಾಕ್ಷಪ್ಪ, ದತ್ತಿ ಸೇವಾಕರ್ತ ಹುಳಿಯಾರಿನ ಉಪನ್ಯಾಸಕ ತ.ಶಿ.ಬಸವಮೂರ್ತಿ, ವರ್ತಕ ರೇಣುಕಾರಾಧ್ಯ, ಕಸಾಪ ಘಟಕದ ಅಧ್ಯಕ್ಷ ಶಿವಕುಮಾರ್, ಉಪನ್ಯಾಸಕ ಜಿ.ಎಸ್.ರಘು ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ಮಹಾತ್ಮ ಗಾಂಧೀಜಿ ರೀತಿ ಸರಳವಾಗಿ ಬದುಕಿ ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಹರ್ಡೇಕರ್ ಮಂಜಪ್ಪ ಅವರನ್ನು ಮತ್ತೆ ಮತ್ತೆ ನೆನೆಯುವ ಮೂಲಕ ಹೊಸ ಜನಾಂಗದಲ್ಲಿ ನೈತಿಕತೆ ಕಟ್ಟಬೇಕಿದೆ ಎಂದು ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ ತಿಳಿಸಿದರು.<br /> <br /> ನಗರದ ಗುರುಕುಲಾನಂದಾಶ್ರಮದಲ್ಲಿ ಈಚೆಗೆ ನಡೆದ ಲಿ.ಮಲಿಗಮ್ಮ ಶಿವಪ್ಪಶಾಸ್ತ್ರಿ ಸ್ಮರಣಾರ್ಥ ದತ್ತಿ ಮಾಲಿಕೆಯಲ್ಲಿ ಅವರು ಹರ್ಡೇಕರ್ ಕುರಿತು ಉಪನ್ಯಾಸ ನೀಡಿದರು.<br /> <br /> 1886ರ ಫೆ.18ರಂದು ಬನವಾಸಿಯ ಬಡ ಕುಟುಂಬದಲ್ಲಿ ಜನಿಸಿದ ಮಂಜಪ್ಪ ಅವರು ಪರಿಶ್ರಮದಿಂದ ಕೂಲಿ ಮಠದಲ್ಲಿ ವಿದ್ಯೆ ಕಲಿತರು. ಶಿಕ್ಷಕ ವೃತ್ತಿಗೆ ಸೇರಿದ ಸಂದರ್ಭದಲ್ಲೇ ಮಹಾತ್ಮಾ ಗಾಂಧಿ ಕರೆಗೆ ಓಗೊಟ್ಟು ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು ಎಂದು ಮಂಜಪ್ಪ ಜೀವನ ನೆನಪಿಸಿದರು.<br /> <br /> 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಸಾಹಿತ್ಯ ಸೇವೆಯನ್ನೂ ಸಲ್ಲಿಸಿದರು. ಅವರ ಬದುಕು ಮತ್ತು ಹೋರಾಟ ಅರಿಯುವ ಮೂಲಕ ನಾವು ಹೊಸ ಕಾಲದ ಸವಾಲುಗಳನ್ನು ಎದುರಿಸಬೇಕು ಎಂದು ತಿಳಿಸಿದರು.<br /> <br /> ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ನಗರಸಭೆ ಸದಸ್ಯ ಎಚ್.ಸಿ.ನಾಗರಾಜು ಕಾರ್ಯಕ್ರಮ ಉದ್ಘಾಟಿಸಿದರು.<br /> <br /> ಲೆಕ್ಕ ಪರಿಶೋಧಕ ವಿರೂಪಾಕ್ಷಪ್ಪ, ದತ್ತಿ ಸೇವಾಕರ್ತ ಹುಳಿಯಾರಿನ ಉಪನ್ಯಾಸಕ ತ.ಶಿ.ಬಸವಮೂರ್ತಿ, ವರ್ತಕ ರೇಣುಕಾರಾಧ್ಯ, ಕಸಾಪ ಘಟಕದ ಅಧ್ಯಕ್ಷ ಶಿವಕುಮಾರ್, ಉಪನ್ಯಾಸಕ ಜಿ.ಎಸ್.ರಘು ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>