<p><strong>ಬೀದರ್</strong>: ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ. <br /> <br /> ವಾಂತಿ ಭೇದಿಯಿಂದಾಗಿ ಗ್ರಾಮದ ಒಟ್ಟು 11 ಜನ ಗುರುವಾರ ಮತ್ತು ಶುಕ್ರವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಪೈಕಿ ಕೆಲವರನ್ನು ಚಿಕಿತ್ಸೆಗಾಗಿ ಬೀದರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.<br /> <br /> ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಟ್ರಾನ್ಸ್ಫಾರ್ಮರ್ ಸುಟ್ಟು ಹೋಗಿದೆ. ಇದನ್ನು ದುರಸ್ತಿ ಮಾಡುವಂತೆ ಅನೇಕ ಬಾರಿ ಜೆಸ್ಕಾಂ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಅದಾಗಿಯು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಬೋರ್ವೆಲ್ ನೀರು ಸರಬರಾಜು ಆಗುತ್ತಿಲ್ಲ. ಬಾವಿ ನೀರನ್ನೇ ಅವಲಂಬಿಸಬೇಕಾಗಿದೆ. ಕಲುಷಿತ ನೀರು ಕುಡಿದಿದ್ದರಿಂದಲೇ ವಾಂತಿ ಭೇದಿ ಉಲ್ಬಣಗೊಂಡಿರಬೇಕು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.<br /> <br /> ವಾಂತಿ ಭೇದಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ನೀರು ಹಾಗೂ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಗ್ರಾಮ ಪಂಚಾಯಿತಿ ವತಿಯಿಂದ ಡಂಗೂರು ಸಾರಲಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ಮೇತ್ರೆ, ಯುವ ಪ್ರಮುಖರಾದ ಸಂಜು ಪ್ರಭಾ ಮತ್ತಿತರರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ. <br /> <br /> ವಾಂತಿ ಭೇದಿಯಿಂದಾಗಿ ಗ್ರಾಮದ ಒಟ್ಟು 11 ಜನ ಗುರುವಾರ ಮತ್ತು ಶುಕ್ರವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಪೈಕಿ ಕೆಲವರನ್ನು ಚಿಕಿತ್ಸೆಗಾಗಿ ಬೀದರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.<br /> <br /> ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಟ್ರಾನ್ಸ್ಫಾರ್ಮರ್ ಸುಟ್ಟು ಹೋಗಿದೆ. ಇದನ್ನು ದುರಸ್ತಿ ಮಾಡುವಂತೆ ಅನೇಕ ಬಾರಿ ಜೆಸ್ಕಾಂ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಅದಾಗಿಯು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಬೋರ್ವೆಲ್ ನೀರು ಸರಬರಾಜು ಆಗುತ್ತಿಲ್ಲ. ಬಾವಿ ನೀರನ್ನೇ ಅವಲಂಬಿಸಬೇಕಾಗಿದೆ. ಕಲುಷಿತ ನೀರು ಕುಡಿದಿದ್ದರಿಂದಲೇ ವಾಂತಿ ಭೇದಿ ಉಲ್ಬಣಗೊಂಡಿರಬೇಕು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.<br /> <br /> ವಾಂತಿ ಭೇದಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ನೀರು ಹಾಗೂ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಗ್ರಾಮ ಪಂಚಾಯಿತಿ ವತಿಯಿಂದ ಡಂಗೂರು ಸಾರಲಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ಮೇತ್ರೆ, ಯುವ ಪ್ರಮುಖರಾದ ಸಂಜು ಪ್ರಭಾ ಮತ್ತಿತರರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>