<p>ಬೆಳಗಾವಿ: ಸುವರ್ಣಸೌಧ ಪರಿಷ್ಕೃತ ಅಂದಾಜು ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ನಡೆದಿದ್ದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ 20 ಅಧಿಕಾರಿಗಳಿಗೆ ವಿಚಾರಣೆಗೆ ಬರುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.<br /> <br /> ಈ ಕುರಿತು ಈಗಾಗಲೇ ಬೆಳಗಾವಿ ಗ್ರಾಮೀಣ ಉಪವಿಭಾಗದ ಡಿವೈಎಸ್ಪಿ ಅಶ್ವಿನಿ ನೋಟಿಸ್ ನೀಡಿದ್ದು, ಜೂನ್ 8 ರಂದು ಬೆಳಿಗ್ಗೆ 10.30ಕ್ಕೆ ಪೊಲೀಸ್ ಠಾಣೆಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. <br /> <br /> ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡೆಂಟ್ ಎಂಜಿನಿಯರ್ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಪ್ರಸಾದ ಅವರ ಮೇಲೆ ಸೂಪರಿಂಟೆಂಡೆಂಟ್ ಎಂಜಿನಿಯರ್ ವಿನಾಯಕ ಸೂಗೂರ ನಡೆಸಿದ ಹಲ್ಲೆಯ ಕುರಿತು ವಿಚಾರಣೆ ನಡೆಸಲಾಗುವುದು ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.<br /> <br /> ಹಲ್ಲೆ ನಡೆಸಿದ್ದನ್ನು ಖಂಡಿಸಿ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು. ಪೊಲೀಸ್ ಠಾಣೆಗೆ ದೂರು ನೀಡಲೂ ಯೋಜಿಸಲಾಗಿತ್ತು. ಆದರೆ ನಂತರ ಸಂಧಾನ ನಡೆಸಿ ಪ್ರಕರಣಕ್ಕೆ ತೆರೆ ಎಳೆಯುವ ಯತ್ನ ಮಾಡಲಾಗಿತ್ತು.<br /> <br /> ಆದರೆ ಕೆಲವರು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದ್ದ ಮನವಿ ಪತ್ರದ ಒಂದು ಪ್ರತಿಯನ್ನು ಮಾನವ ಹಕ್ಕುಗಳ ಆಯೋಗಕ್ಕೂ ಕಳುಹಿಸಿದ್ದಾರೆ. ಆಯೋಗವು ಪ್ರಕರಣ ಕುರಿತು ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆ ಆರಂಭಿಸಲಾಗಿದೆ ಎನ್ನುತ್ತಾರೆ ಡಿವೈಎಸ್ಪಿ ಅಶ್ವಿನಿ.<br /> <br /> `ಹಲ್ಲೆ ನಡೆದಾಗ ಅಲ್ಲಿದ್ದದ್ದು ಬೆರಳೆಣಿಕೆಯಷ್ಟು ಜನರು ಮಾತ್ರ. ಆದರೆ ಈಗ ವಿಚಾರಣೆಗಾಗಿ 20 ಅಧಿಕಾರಿಗಳನ್ನು ಕರೆದಿರುವುದು ಏಕೆ~ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಪ್ರಶ್ನಿಸುತ್ತಾರೆ.<br /> `ಘಟನೆ ನಡೆದಾಗ ನಾನು ಕಚೇರಿಯಲ್ಲಿಯೇ ಇರಲಿಲ್ಲ. ಆದರೂ ಘಟನೆ ಕುರಿತಂತೆ ವಿವರ ನೀಡಲು ನನ್ನನ್ನು ಠಾಣೆಗೆ ಬರುವಂತೆ ಸೂಚಿಸಲಾಗಿದೆ. ಘಟನಾ ಸ್ಥಳದಲ್ಲಿ ಇರಲಿಲ್ಲ ಎಂದ ಮೇಲೆ ಹೇಳುವುದೇನು? <br /> <br /> ವಿಚಾರಣೆಯ ದಾರಿ ತಪ್ಪಿಸುವ ಉದ್ದೇಶದಿಂದ ಹೀಗೆ ಮಾಡಲಾಗಿದೆ~ ಎಂದು ಅವರು ಆರೋಪಿಸುತ್ತಾರೆ.<br /> `ಬುಧವಾರ ನಡೆಸಲಿರುವ ವಿಚಾರಣೆಗೆ ಹಾಜರಾಗುವುದೇ, ಬೇಡವೇ ಎಂಬ ಬಗೆಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ನಾಳೆ ಬೆಳಿಗ್ಗೆ ನಿರ್ಧರಿಸಲಾಗುವುದು~ ಎನ್ನುತ್ತಾರೆ ಎಂಜಿನಿಯರ್ಗಳ ಸಂಘದ ಗೌರವಾಧ್ಯಕ್ಷ ಎಸ್. ಹೂಗಾರ. <br /> <br /> `ಘಟನೆ ಕುರಿತು ಸೂಪರಿಂಟೆಂಡಿಂಗ್ ಎಂಜಿನಿಯರ್ ವಿಷಾದ ವ್ಯಕ್ತಪಡಿಸಿರುವುದರಿಂದ ಅದೊಂದು ಮುಗಿದ ಅಧ್ಯಾಯ. ದೂರು ನೀಡ ದಿದ್ದರೂ ಏಕೆ ವಿಚಾರಣೆಗೆ ಕರೆಯುತ್ತಿದ್ದಾರೆ ಎಂಬುದು ನಮಗೂ ಗೊತ್ತಾಗಿಲ್ಲ~ ಎಂದು ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಹಲ್ಲೆ ಘಟನೆ ಮುಗಿದ ಅಧ್ಯಾಯ ಎನ್ನುತ್ತಿರುವಾಗಲೇ ಪೊಲೀಸ್ ಇಲಾಖೆ ವಿಚಾರಣೆ ಆರಂಭಿಸಿರುವುದರಿಂದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಸುವರ್ಣಸೌಧ ಪರಿಷ್ಕೃತ ಅಂದಾಜು ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ನಡೆದಿದ್ದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ 20 ಅಧಿಕಾರಿಗಳಿಗೆ ವಿಚಾರಣೆಗೆ ಬರುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.<br /> <br /> ಈ ಕುರಿತು ಈಗಾಗಲೇ ಬೆಳಗಾವಿ ಗ್ರಾಮೀಣ ಉಪವಿಭಾಗದ ಡಿವೈಎಸ್ಪಿ ಅಶ್ವಿನಿ ನೋಟಿಸ್ ನೀಡಿದ್ದು, ಜೂನ್ 8 ರಂದು ಬೆಳಿಗ್ಗೆ 10.30ಕ್ಕೆ ಪೊಲೀಸ್ ಠಾಣೆಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. <br /> <br /> ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡೆಂಟ್ ಎಂಜಿನಿಯರ್ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಪ್ರಸಾದ ಅವರ ಮೇಲೆ ಸೂಪರಿಂಟೆಂಡೆಂಟ್ ಎಂಜಿನಿಯರ್ ವಿನಾಯಕ ಸೂಗೂರ ನಡೆಸಿದ ಹಲ್ಲೆಯ ಕುರಿತು ವಿಚಾರಣೆ ನಡೆಸಲಾಗುವುದು ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.<br /> <br /> ಹಲ್ಲೆ ನಡೆಸಿದ್ದನ್ನು ಖಂಡಿಸಿ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತ್ತು. ಪೊಲೀಸ್ ಠಾಣೆಗೆ ದೂರು ನೀಡಲೂ ಯೋಜಿಸಲಾಗಿತ್ತು. ಆದರೆ ನಂತರ ಸಂಧಾನ ನಡೆಸಿ ಪ್ರಕರಣಕ್ಕೆ ತೆರೆ ಎಳೆಯುವ ಯತ್ನ ಮಾಡಲಾಗಿತ್ತು.<br /> <br /> ಆದರೆ ಕೆಲವರು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದ್ದ ಮನವಿ ಪತ್ರದ ಒಂದು ಪ್ರತಿಯನ್ನು ಮಾನವ ಹಕ್ಕುಗಳ ಆಯೋಗಕ್ಕೂ ಕಳುಹಿಸಿದ್ದಾರೆ. ಆಯೋಗವು ಪ್ರಕರಣ ಕುರಿತು ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆ ಆರಂಭಿಸಲಾಗಿದೆ ಎನ್ನುತ್ತಾರೆ ಡಿವೈಎಸ್ಪಿ ಅಶ್ವಿನಿ.<br /> <br /> `ಹಲ್ಲೆ ನಡೆದಾಗ ಅಲ್ಲಿದ್ದದ್ದು ಬೆರಳೆಣಿಕೆಯಷ್ಟು ಜನರು ಮಾತ್ರ. ಆದರೆ ಈಗ ವಿಚಾರಣೆಗಾಗಿ 20 ಅಧಿಕಾರಿಗಳನ್ನು ಕರೆದಿರುವುದು ಏಕೆ~ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಪ್ರಶ್ನಿಸುತ್ತಾರೆ.<br /> `ಘಟನೆ ನಡೆದಾಗ ನಾನು ಕಚೇರಿಯಲ್ಲಿಯೇ ಇರಲಿಲ್ಲ. ಆದರೂ ಘಟನೆ ಕುರಿತಂತೆ ವಿವರ ನೀಡಲು ನನ್ನನ್ನು ಠಾಣೆಗೆ ಬರುವಂತೆ ಸೂಚಿಸಲಾಗಿದೆ. ಘಟನಾ ಸ್ಥಳದಲ್ಲಿ ಇರಲಿಲ್ಲ ಎಂದ ಮೇಲೆ ಹೇಳುವುದೇನು? <br /> <br /> ವಿಚಾರಣೆಯ ದಾರಿ ತಪ್ಪಿಸುವ ಉದ್ದೇಶದಿಂದ ಹೀಗೆ ಮಾಡಲಾಗಿದೆ~ ಎಂದು ಅವರು ಆರೋಪಿಸುತ್ತಾರೆ.<br /> `ಬುಧವಾರ ನಡೆಸಲಿರುವ ವಿಚಾರಣೆಗೆ ಹಾಜರಾಗುವುದೇ, ಬೇಡವೇ ಎಂಬ ಬಗೆಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ನಾಳೆ ಬೆಳಿಗ್ಗೆ ನಿರ್ಧರಿಸಲಾಗುವುದು~ ಎನ್ನುತ್ತಾರೆ ಎಂಜಿನಿಯರ್ಗಳ ಸಂಘದ ಗೌರವಾಧ್ಯಕ್ಷ ಎಸ್. ಹೂಗಾರ. <br /> <br /> `ಘಟನೆ ಕುರಿತು ಸೂಪರಿಂಟೆಂಡಿಂಗ್ ಎಂಜಿನಿಯರ್ ವಿಷಾದ ವ್ಯಕ್ತಪಡಿಸಿರುವುದರಿಂದ ಅದೊಂದು ಮುಗಿದ ಅಧ್ಯಾಯ. ದೂರು ನೀಡ ದಿದ್ದರೂ ಏಕೆ ವಿಚಾರಣೆಗೆ ಕರೆಯುತ್ತಿದ್ದಾರೆ ಎಂಬುದು ನಮಗೂ ಗೊತ್ತಾಗಿಲ್ಲ~ ಎಂದು ಅವರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಹಲ್ಲೆ ಘಟನೆ ಮುಗಿದ ಅಧ್ಯಾಯ ಎನ್ನುತ್ತಿರುವಾಗಲೇ ಪೊಲೀಸ್ ಇಲಾಖೆ ವಿಚಾರಣೆ ಆರಂಭಿಸಿರುವುದರಿಂದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>