<p><strong>ನವದೆಹಲಿ, (ಪಿಟಿಐ): </strong>ಹಿರಿಯ ವಕೀಲ ಹಾಗೂ ಅಣ್ಣಾ ತಂಡದ ಸದಸ್ಯ ಪ್ರಶಾಂತ್ ಭೂಷಣ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಯುವಕರನ್ನು ಗುರುವಾರ ಬೆಳಿಗ್ಗೆ ಬಂಧಿಸಲಾಗಿದೆ. <br /> <br /> ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂರು ಜನರನ್ನು ಬಂಧಿಸಲಾಗಿದ್ದು, ದೆಹಲಿ ಹೈಕೋರ್ಟ್ ಎಲ್ಲರನ್ನೂ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.<br /> <br /> ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ದೆಹಲಿ ಘಟಕದ ಅಧ್ಯಕ್ಷ ಎನ್ನಲಾದ ಇಂದ್ರ ವರ್ಮನನ್ನು ಘಟನಾ ಸ್ಥಳದಲ್ಲೇ ಬಂಧಿಸಲಾಗಿತ್ತು. ಈ ಸಂದರ್ಭದಲ್ಲಿ ಪರಾರಿಯಾಗಿದ್ದ ಜೋಗೀಂದ್ರ ಪಾಲ್ ಸಿಂಗ್ ಬಗ್ಗ ಹಾಗೂ ವಿಷ್ಣು ಗುಪ್ತ ಎಂಬುವವರನ್ನು ನ್ಯಾಯಾಲಯಕ್ಕೆ ಶರಣಾಗಲು ತೆರಳುತ್ತಿದ್ದ ಸಂದರ್ಭದಲ್ಲಿ ಬಾಂಗ್ಲ ಸಾಹಿಬ್ ಗುರುದ್ವಾರದ ಬಳಿ ಗುರುವಾರ ಬಂಧಿಸಲಾಯಿತು.<br /> <br /> <strong>ಪ್ರದರ್ಶನಕ್ಕೆ ನಕಾರ:</strong> ಭೂಷಣ್ ಅವರ ಮುಂದೆ `ಗುರುತು ಪತ್ತೆ ಪ್ರದರ್ಶನ~ (ಟಿಐಪಿ) ನಡೆಸಲು ಮೂವರೂ ಆರೋಪಿಗಳು ನಿರಾಕರಿಸಿದ್ದಾರೆ. ತಾವು ಈಗಾಗಲೇ ಟಿ.ವಿ ವಾಹಿನಿಗಳಲ್ಲಿ ಸಾಕಷ್ಟು ಬಾರಿ ಕಾಣಿಸಿಕೊಂಡಿರುವುದರಿಂದ ಅದರ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. <br /> <br /> <strong>ಪಶ್ಚಾತ್ತಾಪ ಇಲ್ಲ:</strong> ಕಾಶ್ಮೀರಕ್ಕೆ ಸಂಬಂಧಿಸಿದ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಶಾಂತ್ ಭೂಷಣ್ ಗುರುವಾರ ಹೇಳಿದ್ದಾರೆ. ತಮ್ಮದು ವೈಯಕ್ತಿಕ ಹೇಳಿಕೆಯೇ ಹೊರತು ಅಣ್ಣಾ ತಂಡದ್ದಲ್ಲ. ಅಲ್ಲದೆ ಈ ಹೇಳಿಕೆಯ ಬಗ್ಗೆ ತಮಗೆ ಯಾವುದೇ ಪಶ್ಚಾತ್ತಾಪ ಸಹ ಇಲ್ಲ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.<br /> <br /> <strong>ಅಣ್ಣಾ ಬೆಂಬಲಿಗರ ಮೇಲೆ ಹಲ್ಲೆ<br /> ನವದೆಹಲಿ, (ಪಿಟಿಐ):</strong> ಹಲ್ಲೆಗೊಳಗಾದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ಪಟಿಯಾಲ ನ್ಯಾಯಾಲಯದ ಆವರಣದಲ್ಲಿ ಗುರುವಾರ ಜಮಾಯಿಸಿದ್ದ ಅಣ್ಣಾ ತಂಡದ ಸದಸ್ಯರ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.<br /> <br /> ಭೂಷಣ್ ಹಲ್ಲೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ವಿಚಾರಣೆ ಆಲಿಸಲು ಎರಡೂ ತಂಡದ ಸದಸ್ಯರು ಆವರಣದಲ್ಲಿ ಸೇರಿದ್ದರು. <br /> ಇದೇ ವೇಳೆ ಗೇಟ್ ಸಂಖ್ಯೆ 2ರ ಹೊರಭಾಗದಲ್ಲಿ ಸಂಜೆ 5ರ ವೇಳೆಗೆ ಶ್ರೀರಾಮ ಸೇನೆ ಕಾರ್ಯಕರ್ತರು ಅಣ್ಣಾ ಮತ್ತು ಪ್ರಶಾಂತ್ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾಗ ಅಣ್ಣಾ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದರು. <br /> <br /> ಈ ಸಂದರ್ಭದಲ್ಲಿ ಎರಡೂ ತಂಡಗಳ ನಡುವೆ ಪರಸ್ಪರ ವಾಗ್ವಾದ ನಡೆದಾಗ ಸೇನಾ ಕಾರ್ಯಕರ್ತರು ಹಲ್ಲೆ ನಡೆಸಿದರು ಎನ್ನಲಾಗಿದೆ. <br /> <br /> ಗಾಯಗೊಂಡ ಅಣ್ಣಾ ತಂಡದ ಮೊಹಮದ್ ಶಫಿ ಮತ್ತು ರಾಜ್ಕುಮಾರ್ ಎಂಬುವವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ, (ಪಿಟಿಐ): </strong>ಹಿರಿಯ ವಕೀಲ ಹಾಗೂ ಅಣ್ಣಾ ತಂಡದ ಸದಸ್ಯ ಪ್ರಶಾಂತ್ ಭೂಷಣ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು ಯುವಕರನ್ನು ಗುರುವಾರ ಬೆಳಿಗ್ಗೆ ಬಂಧಿಸಲಾಗಿದೆ. <br /> <br /> ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂರು ಜನರನ್ನು ಬಂಧಿಸಲಾಗಿದ್ದು, ದೆಹಲಿ ಹೈಕೋರ್ಟ್ ಎಲ್ಲರನ್ನೂ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.<br /> <br /> ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ದೆಹಲಿ ಘಟಕದ ಅಧ್ಯಕ್ಷ ಎನ್ನಲಾದ ಇಂದ್ರ ವರ್ಮನನ್ನು ಘಟನಾ ಸ್ಥಳದಲ್ಲೇ ಬಂಧಿಸಲಾಗಿತ್ತು. ಈ ಸಂದರ್ಭದಲ್ಲಿ ಪರಾರಿಯಾಗಿದ್ದ ಜೋಗೀಂದ್ರ ಪಾಲ್ ಸಿಂಗ್ ಬಗ್ಗ ಹಾಗೂ ವಿಷ್ಣು ಗುಪ್ತ ಎಂಬುವವರನ್ನು ನ್ಯಾಯಾಲಯಕ್ಕೆ ಶರಣಾಗಲು ತೆರಳುತ್ತಿದ್ದ ಸಂದರ್ಭದಲ್ಲಿ ಬಾಂಗ್ಲ ಸಾಹಿಬ್ ಗುರುದ್ವಾರದ ಬಳಿ ಗುರುವಾರ ಬಂಧಿಸಲಾಯಿತು.<br /> <br /> <strong>ಪ್ರದರ್ಶನಕ್ಕೆ ನಕಾರ:</strong> ಭೂಷಣ್ ಅವರ ಮುಂದೆ `ಗುರುತು ಪತ್ತೆ ಪ್ರದರ್ಶನ~ (ಟಿಐಪಿ) ನಡೆಸಲು ಮೂವರೂ ಆರೋಪಿಗಳು ನಿರಾಕರಿಸಿದ್ದಾರೆ. ತಾವು ಈಗಾಗಲೇ ಟಿ.ವಿ ವಾಹಿನಿಗಳಲ್ಲಿ ಸಾಕಷ್ಟು ಬಾರಿ ಕಾಣಿಸಿಕೊಂಡಿರುವುದರಿಂದ ಅದರ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. <br /> <br /> <strong>ಪಶ್ಚಾತ್ತಾಪ ಇಲ್ಲ:</strong> ಕಾಶ್ಮೀರಕ್ಕೆ ಸಂಬಂಧಿಸಿದ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಶಾಂತ್ ಭೂಷಣ್ ಗುರುವಾರ ಹೇಳಿದ್ದಾರೆ. ತಮ್ಮದು ವೈಯಕ್ತಿಕ ಹೇಳಿಕೆಯೇ ಹೊರತು ಅಣ್ಣಾ ತಂಡದ್ದಲ್ಲ. ಅಲ್ಲದೆ ಈ ಹೇಳಿಕೆಯ ಬಗ್ಗೆ ತಮಗೆ ಯಾವುದೇ ಪಶ್ಚಾತ್ತಾಪ ಸಹ ಇಲ್ಲ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.<br /> <br /> <strong>ಅಣ್ಣಾ ಬೆಂಬಲಿಗರ ಮೇಲೆ ಹಲ್ಲೆ<br /> ನವದೆಹಲಿ, (ಪಿಟಿಐ):</strong> ಹಲ್ಲೆಗೊಳಗಾದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ಪಟಿಯಾಲ ನ್ಯಾಯಾಲಯದ ಆವರಣದಲ್ಲಿ ಗುರುವಾರ ಜಮಾಯಿಸಿದ್ದ ಅಣ್ಣಾ ತಂಡದ ಸದಸ್ಯರ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.<br /> <br /> ಭೂಷಣ್ ಹಲ್ಲೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ವಿಚಾರಣೆ ಆಲಿಸಲು ಎರಡೂ ತಂಡದ ಸದಸ್ಯರು ಆವರಣದಲ್ಲಿ ಸೇರಿದ್ದರು. <br /> ಇದೇ ವೇಳೆ ಗೇಟ್ ಸಂಖ್ಯೆ 2ರ ಹೊರಭಾಗದಲ್ಲಿ ಸಂಜೆ 5ರ ವೇಳೆಗೆ ಶ್ರೀರಾಮ ಸೇನೆ ಕಾರ್ಯಕರ್ತರು ಅಣ್ಣಾ ಮತ್ತು ಪ್ರಶಾಂತ್ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾಗ ಅಣ್ಣಾ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದರು. <br /> <br /> ಈ ಸಂದರ್ಭದಲ್ಲಿ ಎರಡೂ ತಂಡಗಳ ನಡುವೆ ಪರಸ್ಪರ ವಾಗ್ವಾದ ನಡೆದಾಗ ಸೇನಾ ಕಾರ್ಯಕರ್ತರು ಹಲ್ಲೆ ನಡೆಸಿದರು ಎನ್ನಲಾಗಿದೆ. <br /> <br /> ಗಾಯಗೊಂಡ ಅಣ್ಣಾ ತಂಡದ ಮೊಹಮದ್ ಶಫಿ ಮತ್ತು ರಾಜ್ಕುಮಾರ್ ಎಂಬುವವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>