<p><strong>ಹುಬ್ಬಳ್ಳಿ: </strong>ಕೊಲ್ಹಾಪುರದಿಂದ ತಿರುಪತಿಗೆ ಹೊರಟಿದ್ದ ಹರಿಪ್ರಿಯಾ ಎಕ್ಸ್ಪ್ರೆಸ್ ರೈಲು (ಸಂಖ್ಯೆ:17416) ಗುರುವಾರ ಇಲ್ಲಿನ ರಾಯಾಪುರ ಬಳಿ ಹಳಿ ತಪ್ಪಿತು.<br /> <br /> ಧಾರವಾಡದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ರೈಲು ಸಂಜೆ 6.45ರ ವೇಳೆ ಹಳಿ ತಪ್ಪಿದೆ. ಎಂಜಿನ್ನ 2 ಚಕ್ರಗಳು ಹಳಿ ತಪ್ಪಿ ಸುಮಾರು 200 ಮೀಟರ್ ಉಜ್ಜಿಕೊಂಡು ಹೋಗಿ ನಿಂತಿದೆ. ಇದರಿಂದ ಹಳಿ ಕಿತ್ತು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. <br /> <br /> ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೆ ಅಧಿಕಾರಿಗಳು ಕ್ರೇನ್ ಬಳಸಿ ಎಂಜಿನ್ ಹಾಗೂ ಹಳಿಯ ದುರಸ್ತಿ ಕಾರ್ಯಾಚರಣೆ ಕೈಗೊಂಡರು. ಆದರೆ ಮಳೆಯಿಂದಾಗಿ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಯಲು ಆಗಲಿಲ್ಲ.<br /> <br /> ರಾಯಾಪುರ ಮಾರ್ಗ ಜೋಡಿ ಪಥವಾಗಿದ್ದು, ಬೇರೆ ರೈಲುಗಳ ಸಂಚಾರಕ್ಕೆ ಅಡಚಣೆಯಾಗಿಲ್ಲ. ತಿರುಪತಿಗೆ ತೆರಳುವ ಪ್ರಯಾಣಿಕರಿಗೆ ಪರ್ಯಾಯ ರೈಲಿನ ವ್ಯವಸ್ಥೆ ಕಲ್ಪಿಸುವುದಾಗಿ ಸ್ಥಳದಲ್ಲಿದ್ದ ರೈಲ್ವೆ ಅಧಿಕಾರಿಗಳು `ಪ್ರಜಾವಾಣಿ~ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಕೊಲ್ಹಾಪುರದಿಂದ ತಿರುಪತಿಗೆ ಹೊರಟಿದ್ದ ಹರಿಪ್ರಿಯಾ ಎಕ್ಸ್ಪ್ರೆಸ್ ರೈಲು (ಸಂಖ್ಯೆ:17416) ಗುರುವಾರ ಇಲ್ಲಿನ ರಾಯಾಪುರ ಬಳಿ ಹಳಿ ತಪ್ಪಿತು.<br /> <br /> ಧಾರವಾಡದಿಂದ ಹುಬ್ಬಳ್ಳಿಯತ್ತ ಹೊರಟಿದ್ದ ರೈಲು ಸಂಜೆ 6.45ರ ವೇಳೆ ಹಳಿ ತಪ್ಪಿದೆ. ಎಂಜಿನ್ನ 2 ಚಕ್ರಗಳು ಹಳಿ ತಪ್ಪಿ ಸುಮಾರು 200 ಮೀಟರ್ ಉಜ್ಜಿಕೊಂಡು ಹೋಗಿ ನಿಂತಿದೆ. ಇದರಿಂದ ಹಳಿ ಕಿತ್ತು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. <br /> <br /> ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೆ ಅಧಿಕಾರಿಗಳು ಕ್ರೇನ್ ಬಳಸಿ ಎಂಜಿನ್ ಹಾಗೂ ಹಳಿಯ ದುರಸ್ತಿ ಕಾರ್ಯಾಚರಣೆ ಕೈಗೊಂಡರು. ಆದರೆ ಮಳೆಯಿಂದಾಗಿ ಪ್ರಯಾಣಿಕರು ರೈಲಿನಿಂದ ಕೆಳಗೆ ಇಳಿಯಲು ಆಗಲಿಲ್ಲ.<br /> <br /> ರಾಯಾಪುರ ಮಾರ್ಗ ಜೋಡಿ ಪಥವಾಗಿದ್ದು, ಬೇರೆ ರೈಲುಗಳ ಸಂಚಾರಕ್ಕೆ ಅಡಚಣೆಯಾಗಿಲ್ಲ. ತಿರುಪತಿಗೆ ತೆರಳುವ ಪ್ರಯಾಣಿಕರಿಗೆ ಪರ್ಯಾಯ ರೈಲಿನ ವ್ಯವಸ್ಥೆ ಕಲ್ಪಿಸುವುದಾಗಿ ಸ್ಥಳದಲ್ಲಿದ್ದ ರೈಲ್ವೆ ಅಧಿಕಾರಿಗಳು `ಪ್ರಜಾವಾಣಿ~ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>