<p><strong>ಚಾಮರಾಜನಗರ</strong>: ಚಾಲಕನ ಅಜಾಗರೂಕತೆಯಿಂದ ಸರಕು ಸಾಗಣೆ ಆಟೊ ಹಳ್ಳಕ್ಕೆ ಉರುಳಿ ಬ್ದ್ದಿದು ಐವರು ಮೃತಪಟ್ಟು 15 ಮಂದಿ ಮಹಿಳೆಯರು ಗಾಯಗೊಂಡ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಗಾಣಿಗಮಂಗಲ ಗ್ರಾಮದ ಬಳಿ ಬುಧವಾರ ನಡೆದಿದೆ. <br /> <br /> ಕಳ್ಳಿದೊಡ್ಡಿ ಗ್ರಾಮದ ರತ್ನಮ್ಮ (28), ಮಹದೇವಮ್ಮ (48), ಶಿವಮಲ್ಲಮ್ಮ (45), ತುಳಸಮ್ಮ (38) ಹಾಗೂ ಗಾಣಿಗಮಂಗಲದ ಬೋಳೆಮಾದೇಗೌಡ (54) ಮೃತಪಟ್ಟವರು. <br /> <br /> ಕಳ್ಳಿದೊಡ್ಡಿ ಗ್ರಾಮದಿಂದ ಗಾಣಿಗಮಂಗಲದ ತೋಟವೊಂದರಲ್ಲಿ ಕೆಲಸ ಮಾಡಲು ಬೋಳೆಮಾದೇಗೌಡ ಮಹಿಳೆಯರನ್ನು ಕರೆದುಕೊಂಡು ಹೋಗುತ್ತಿದ್ದರು. ಚಾಲಕನ ಅತಿಯಾದ ವೇಗವೇ ಈ ಘಟನೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಚಾಲಕನ ನಿಯಂತ್ರಣ ತಪ್ಪಿದ ಆಟೋ ಈಜಿಕೆರೆ ಬಳಿಯ ಹಳ್ಳಕ್ಕೆ ಉರುಳಿ ಬಿತ್ತು. ರತ್ನಮ್ಮ ಸ್ಥಳದಲ್ಲಿಯೇ ಮೃತಪಟ್ಟರು. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. <br /> <br /> ಗಾಯಾಳುಗಳನ್ನು ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆ ಹಾಗೂ ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೊ ಚಾಲಕ ಮುತ್ತುಕುಮಾರ್ ಪರಾರಿಯಾಗಿದ್ದಾನೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. <br /> <br /> ಸ್ಥಳಕ್ಕೆ ಹನೂರು ಕ್ಷೇತ್ರದ ಶಾಸಕ ಆರ್. ನರೇಂದ್ರ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.</p>.<p>ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸಿ ಕೊಡುವ ಬಗ್ಗೆ ಭರವಸೆ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಚಾಲಕನ ಅಜಾಗರೂಕತೆಯಿಂದ ಸರಕು ಸಾಗಣೆ ಆಟೊ ಹಳ್ಳಕ್ಕೆ ಉರುಳಿ ಬ್ದ್ದಿದು ಐವರು ಮೃತಪಟ್ಟು 15 ಮಂದಿ ಮಹಿಳೆಯರು ಗಾಯಗೊಂಡ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಗಾಣಿಗಮಂಗಲ ಗ್ರಾಮದ ಬಳಿ ಬುಧವಾರ ನಡೆದಿದೆ. <br /> <br /> ಕಳ್ಳಿದೊಡ್ಡಿ ಗ್ರಾಮದ ರತ್ನಮ್ಮ (28), ಮಹದೇವಮ್ಮ (48), ಶಿವಮಲ್ಲಮ್ಮ (45), ತುಳಸಮ್ಮ (38) ಹಾಗೂ ಗಾಣಿಗಮಂಗಲದ ಬೋಳೆಮಾದೇಗೌಡ (54) ಮೃತಪಟ್ಟವರು. <br /> <br /> ಕಳ್ಳಿದೊಡ್ಡಿ ಗ್ರಾಮದಿಂದ ಗಾಣಿಗಮಂಗಲದ ತೋಟವೊಂದರಲ್ಲಿ ಕೆಲಸ ಮಾಡಲು ಬೋಳೆಮಾದೇಗೌಡ ಮಹಿಳೆಯರನ್ನು ಕರೆದುಕೊಂಡು ಹೋಗುತ್ತಿದ್ದರು. ಚಾಲಕನ ಅತಿಯಾದ ವೇಗವೇ ಈ ಘಟನೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಚಾಲಕನ ನಿಯಂತ್ರಣ ತಪ್ಪಿದ ಆಟೋ ಈಜಿಕೆರೆ ಬಳಿಯ ಹಳ್ಳಕ್ಕೆ ಉರುಳಿ ಬಿತ್ತು. ರತ್ನಮ್ಮ ಸ್ಥಳದಲ್ಲಿಯೇ ಮೃತಪಟ್ಟರು. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. <br /> <br /> ಗಾಯಾಳುಗಳನ್ನು ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆ ಹಾಗೂ ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೊ ಚಾಲಕ ಮುತ್ತುಕುಮಾರ್ ಪರಾರಿಯಾಗಿದ್ದಾನೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. <br /> <br /> ಸ್ಥಳಕ್ಕೆ ಹನೂರು ಕ್ಷೇತ್ರದ ಶಾಸಕ ಆರ್. ನರೇಂದ್ರ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.</p>.<p>ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸಿ ಕೊಡುವ ಬಗ್ಗೆ ಭರವಸೆ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>