<p>ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ರೈತರ ಅನುಕೂಲಕ್ಕೆ ಫೆಬ್ರುವರಿ, ಮಾರ್ಚ್ ಮತ್ತು ಏಪ್ರಿಲ್ನಲ್ಲಿ ದಿನಕ್ಕೆ ಹಗಲು ಕನಿಷ್ಠ 6 ಗಂಟೆ ನಿರಂತರ ತ್ರೀ ಫೇಸ್ ವಿದ್ಯುತ್ ಪೂರೈಸಲು ಸರ್ಕಾರ ನಿರ್ಧರಿಸಿದೆ ಎಂದು ಇಂಧನ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.<br /> <br /> ರಾಯಚೂರು, ಬಳ್ಳಾರಿ, ಉಡುಪಿ ಘಟಕಗಳಲ್ಲಿ ನಿರೀಕ್ಷಿತ ಪ್ರಮಾಣದ ವಿದ್ಯುತ್ ಉತ್ಪಾದನೆಯಾಗುತ್ತಿದೆ. <br /> ಗರಿಷ್ಠ ಪ್ರಮಾಣದ ಜಲವಿದ್ಯುತ್ ಉತ್ಪಾದಿಸಲಾಗುತ್ತಿದೆ. ಜತೆಗೆ ಸಾಕಷ್ಟು ಪ್ರಮಾಣದ ವಿದ್ಯುತ್ ಖರೀದಿಸಲಾಗುತ್ತಿದೆ. ಹಾಗಾಗಿ, ಗ್ರಾಮೀಣ ಪ್ರದೇಶದಲ್ಲಷ್ಟೇ ಅಲ್ಲ, ನಗರ ಪ್ರದೇಶಗಳಲ್ಲೂ ಸರ್ಕಾರ ನಿರಂತರ ಗುಣಮಟ್ಟದ ವಿದ್ಯುತ್ ನೀಡಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಭರವಸೆ ನೀಡಿದರು.<br /> <br /> ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದ ರೀತಿಯಲ್ಲಿ ಸಂಜೆ 6ರಿಂದ ಮುಂಜಾನೆ 6ರವರೆಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ. <br /> <br /> ಹಾಗೆಯೇ, ಗ್ರಾಮೀಣ ಪ್ರದೇಶದಲ್ಲಿ ರೈತರ ಅನುಕೂಲಕ್ಕಾಗಿ ರಾತ್ರಿ ಕೂಡ ತ್ರೀ ಫೇಸ್ ವಿದ್ಯುತ್ ಪೂರೈಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.<br /> ದರ ಏರಿಕೆ ಸಮರ್ಥನೆ: ವಿದ್ಯುತ್ ದರ ಏರಿಕೆ ಸಮರ್ಥಿಸಿಕೊಂಡ ಅವರು, ರೈತರಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪೆನಿಗಳ ಮೇಲೆ 5ಸಾವಿರ ಕೋಟಿ ರೂ. ಸಾಲದ ಹೊರೆ ಇದೆ. <br /> <br /> ಹಾಗಾಗಿ, ದರ ಏರಿಕೆ ಅನಿವಾರ್ಯ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಪ್ರತಿ ಯೂನಿಟ್ಗೆ 75 ಪೈಸೆ ಹೆಚ್ಚಿಸಲು ಸರ್ಕಾರಕ್ಕೆ ಆದೇಶಿಸಿತ್ತು. ಆದರೆ, ಸರ್ಕಾರ ಕೇವಲ 30 ಪೈಸೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಗ್ರಾಮೀಣ ಪ್ರದೇಶದಲ್ಲಿ ರೈತರ ಅನುಕೂಲಕ್ಕೆ ಫೆಬ್ರುವರಿ, ಮಾರ್ಚ್ ಮತ್ತು ಏಪ್ರಿಲ್ನಲ್ಲಿ ದಿನಕ್ಕೆ ಹಗಲು ಕನಿಷ್ಠ 6 ಗಂಟೆ ನಿರಂತರ ತ್ರೀ ಫೇಸ್ ವಿದ್ಯುತ್ ಪೂರೈಸಲು ಸರ್ಕಾರ ನಿರ್ಧರಿಸಿದೆ ಎಂದು ಇಂಧನ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.<br /> <br /> ರಾಯಚೂರು, ಬಳ್ಳಾರಿ, ಉಡುಪಿ ಘಟಕಗಳಲ್ಲಿ ನಿರೀಕ್ಷಿತ ಪ್ರಮಾಣದ ವಿದ್ಯುತ್ ಉತ್ಪಾದನೆಯಾಗುತ್ತಿದೆ. <br /> ಗರಿಷ್ಠ ಪ್ರಮಾಣದ ಜಲವಿದ್ಯುತ್ ಉತ್ಪಾದಿಸಲಾಗುತ್ತಿದೆ. ಜತೆಗೆ ಸಾಕಷ್ಟು ಪ್ರಮಾಣದ ವಿದ್ಯುತ್ ಖರೀದಿಸಲಾಗುತ್ತಿದೆ. ಹಾಗಾಗಿ, ಗ್ರಾಮೀಣ ಪ್ರದೇಶದಲ್ಲಷ್ಟೇ ಅಲ್ಲ, ನಗರ ಪ್ರದೇಶಗಳಲ್ಲೂ ಸರ್ಕಾರ ನಿರಂತರ ಗುಣಮಟ್ಟದ ವಿದ್ಯುತ್ ನೀಡಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಭರವಸೆ ನೀಡಿದರು.<br /> <br /> ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದ ರೀತಿಯಲ್ಲಿ ಸಂಜೆ 6ರಿಂದ ಮುಂಜಾನೆ 6ರವರೆಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ. <br /> <br /> ಹಾಗೆಯೇ, ಗ್ರಾಮೀಣ ಪ್ರದೇಶದಲ್ಲಿ ರೈತರ ಅನುಕೂಲಕ್ಕಾಗಿ ರಾತ್ರಿ ಕೂಡ ತ್ರೀ ಫೇಸ್ ವಿದ್ಯುತ್ ಪೂರೈಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.<br /> ದರ ಏರಿಕೆ ಸಮರ್ಥನೆ: ವಿದ್ಯುತ್ ದರ ಏರಿಕೆ ಸಮರ್ಥಿಸಿಕೊಂಡ ಅವರು, ರೈತರಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪೆನಿಗಳ ಮೇಲೆ 5ಸಾವಿರ ಕೋಟಿ ರೂ. ಸಾಲದ ಹೊರೆ ಇದೆ. <br /> <br /> ಹಾಗಾಗಿ, ದರ ಏರಿಕೆ ಅನಿವಾರ್ಯ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಪ್ರತಿ ಯೂನಿಟ್ಗೆ 75 ಪೈಸೆ ಹೆಚ್ಚಿಸಲು ಸರ್ಕಾರಕ್ಕೆ ಆದೇಶಿಸಿತ್ತು. ಆದರೆ, ಸರ್ಕಾರ ಕೇವಲ 30 ಪೈಸೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>