<p><strong>ಹುಬ್ಬಳ್ಳಿ</strong>: ಗ್ರಾಮೀಣ ಪ್ರದೇಶಗಳಿಗೆ ಪರಿಣಾಮಕಾರಿ ವೈದ್ಯಕೀಯ ಸೇವೆಯನ್ನು ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಕೋರುವುದಾಗಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕೇಂದ್ರ ಘಟಕದ ನಿಯೋಜಿತ ಅಧ್ಯಕ್ಷ ಡಾ. ಜಿ.ಕೆ. ರಾಮಚಂದ್ರಪ್ಪ ಇಲ್ಲಿ ತಿಳಿಸಿದರು.<br /> <br /> ಐಎಂಎ ರಾಜ್ಯ ಘಟಕ, ನಗರದ ಕಿಮ್ಸ ಆವರಣದಲ್ಲಿ ಹಮ್ಮಿಕೊಂಡಿರುವ 77ನೇ ವಾರ್ಷಿಕ ಸಮ್ಮೇಳನ `ಮೆಡಿಕಾನ್ 2011~ಅನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಲಭ್ಯಗಳ ಕೊರತೆ ಇದೆ. ವೈದ್ಯಕೀಯ ಸೇವೆ ಕೂಡ ಸರಿಯಾಗಿ ಸಿಗುತ್ತಿಲ್ಲ. ಮೂಲಸೌಲಭ್ಯಗಳನ್ನು ಕಲ್ಪಿಸಿ ವೈದ್ಯರನ್ನು ನೇಮಕ ಮಾಡಬೇಕಾಗಿದೆ. ಕನಿಷ್ಠ 2015ರ ಒಳಗಾದರೂ ಇದನ್ನು ಸಾಧಿಸಲು ಕಾರ್ಯಕ್ರಮ ರೂಪಿಸಿಕೊಳ್ಳಬೇಕೆಎಂದು ಸರ್ಕಾರವನ್ನು ಆಗ್ರಹಿಸಲಾಗುವುದು~ ಎಂದು ತಿಳಿಸಿದರು.<br /> <br /> <strong>ಸಲಹೆ</strong>: ಅನ್ಯಾಯವಾದಾಗ ಬೀದಿಗಿಳಿದು ಹೋರಾಡುವಂತೆ ರಾಜ್ಯದ ವೈದ್ಯರಿಗೆ ಸಲಹೆ ನೀಡಿದ ರಾಮಚಂದ್ರಪ್ಪ, ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ವೈದ್ಯರಿಗೆ ಹೋರಾಟ ಮನೋಭಾವ ಕಡಿಮೆ ಎಂದರು.<br /> <br /> ಕೇಂದ್ರ ಸರ್ಕಾರ ಈ ಹಿಂದೆ ಬಿಆರ್ಎಂಎಸ್ಕೋರ್ಸ್ ಕಡ್ಡಾಯಮಾಡಲು ಹೊರಟಾಗ ನವದೆಹಲಿಯಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಕರ್ನಾಟಕದಿಂದ ಕೇವಲ ಒಬ್ಬರು ಮಾತ್ರ ಭಾಗವಹಿಸಿದ್ದರು. <br /> <br /> ಸರ್ಕಾರ ಈಗ ಮತ್ತೆ ಈ ಕೋರ್ಸ್ ಕಡ್ಡಾಯ ಮಾಡಲು ಹೊರಟಿದೆ. ಈಗಲಾದರೂ ರಾಜ್ಯದ ವೈದ್ಯರು ಹೋರಾಟಕ್ಕೆ ಮುಂದಾಗಬೇಕು ಎಂದು ಅವರು ಹೇಳಿದರು.<br /> <br /> ರಾಜ್ಯ ಸರ್ಕಾರದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥಾಪನಾ ಮಸೂದೆಯ ರೀತಿಯ ಮಸೂದೆಯೊಂದನ್ನು ಕೇಂದ್ರ ಸರ್ಕಾರವೂ ಜಾರಿಗೆ ತರಲು ಮುಂದಾಗಿದೆ. ಇದರಿಂದ ವೈದ್ಯರಿಗೆ ತೊಂದರೆಯಾಗಲಿದೆ. ಇದರ ವಿರುದ್ಧವೂ ಹೋರಾಡಲು ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಗ್ರಾಮೀಣ ಪ್ರದೇಶಗಳಿಗೆ ಪರಿಣಾಮಕಾರಿ ವೈದ್ಯಕೀಯ ಸೇವೆಯನ್ನು ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಕೋರುವುದಾಗಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಕೇಂದ್ರ ಘಟಕದ ನಿಯೋಜಿತ ಅಧ್ಯಕ್ಷ ಡಾ. ಜಿ.ಕೆ. ರಾಮಚಂದ್ರಪ್ಪ ಇಲ್ಲಿ ತಿಳಿಸಿದರು.<br /> <br /> ಐಎಂಎ ರಾಜ್ಯ ಘಟಕ, ನಗರದ ಕಿಮ್ಸ ಆವರಣದಲ್ಲಿ ಹಮ್ಮಿಕೊಂಡಿರುವ 77ನೇ ವಾರ್ಷಿಕ ಸಮ್ಮೇಳನ `ಮೆಡಿಕಾನ್ 2011~ಅನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಲಭ್ಯಗಳ ಕೊರತೆ ಇದೆ. ವೈದ್ಯಕೀಯ ಸೇವೆ ಕೂಡ ಸರಿಯಾಗಿ ಸಿಗುತ್ತಿಲ್ಲ. ಮೂಲಸೌಲಭ್ಯಗಳನ್ನು ಕಲ್ಪಿಸಿ ವೈದ್ಯರನ್ನು ನೇಮಕ ಮಾಡಬೇಕಾಗಿದೆ. ಕನಿಷ್ಠ 2015ರ ಒಳಗಾದರೂ ಇದನ್ನು ಸಾಧಿಸಲು ಕಾರ್ಯಕ್ರಮ ರೂಪಿಸಿಕೊಳ್ಳಬೇಕೆಎಂದು ಸರ್ಕಾರವನ್ನು ಆಗ್ರಹಿಸಲಾಗುವುದು~ ಎಂದು ತಿಳಿಸಿದರು.<br /> <br /> <strong>ಸಲಹೆ</strong>: ಅನ್ಯಾಯವಾದಾಗ ಬೀದಿಗಿಳಿದು ಹೋರಾಡುವಂತೆ ರಾಜ್ಯದ ವೈದ್ಯರಿಗೆ ಸಲಹೆ ನೀಡಿದ ರಾಮಚಂದ್ರಪ್ಪ, ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ವೈದ್ಯರಿಗೆ ಹೋರಾಟ ಮನೋಭಾವ ಕಡಿಮೆ ಎಂದರು.<br /> <br /> ಕೇಂದ್ರ ಸರ್ಕಾರ ಈ ಹಿಂದೆ ಬಿಆರ್ಎಂಎಸ್ಕೋರ್ಸ್ ಕಡ್ಡಾಯಮಾಡಲು ಹೊರಟಾಗ ನವದೆಹಲಿಯಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಕರ್ನಾಟಕದಿಂದ ಕೇವಲ ಒಬ್ಬರು ಮಾತ್ರ ಭಾಗವಹಿಸಿದ್ದರು. <br /> <br /> ಸರ್ಕಾರ ಈಗ ಮತ್ತೆ ಈ ಕೋರ್ಸ್ ಕಡ್ಡಾಯ ಮಾಡಲು ಹೊರಟಿದೆ. ಈಗಲಾದರೂ ರಾಜ್ಯದ ವೈದ್ಯರು ಹೋರಾಟಕ್ಕೆ ಮುಂದಾಗಬೇಕು ಎಂದು ಅವರು ಹೇಳಿದರು.<br /> <br /> ರಾಜ್ಯ ಸರ್ಕಾರದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥಾಪನಾ ಮಸೂದೆಯ ರೀತಿಯ ಮಸೂದೆಯೊಂದನ್ನು ಕೇಂದ್ರ ಸರ್ಕಾರವೂ ಜಾರಿಗೆ ತರಲು ಮುಂದಾಗಿದೆ. ಇದರಿಂದ ವೈದ್ಯರಿಗೆ ತೊಂದರೆಯಾಗಲಿದೆ. ಇದರ ವಿರುದ್ಧವೂ ಹೋರಾಡಲು ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>