<p>ಶಿವಮೊಗ್ಗ: ಕೇವಲ ಪುಸ್ತಕಗಳನ್ನು ಓದುವುದರಿಂದ ಪರಿಪೂರ್ಣ ವಿದ್ಯೆ ಸಂಪಾದಿಸಲಾಗುವುದಿಲ್ಲ. ಗ್ರಾಮೀಣ ನೆಲೆಯ ಜನಪದ ಸಾಹಿತ್ಯ, ಸಂಸ್ಕೃತಿ, ಕಲೆ, ಪ್ರಕೃತಿಯ ವಿಸ್ಮಯಗಳನ್ನು ಕುತೂಹಲಕಾರಿಯಾಗಿ ಆಸ್ವಾದನೆ ಮಾಡುವುದರಿಂದ ಬದುಕು ಪರಿಪೂರ್ಣವಾಗುತ್ತದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಎಚ್.ಜೆ. ಲಕ್ಕಪ್ಪಗೌಡ ಅಭಿಪ್ರಾಯಪಟ್ಟರು.<br /> <br /> ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ಕನ್ನಡ ಭಾರತಿ ಸಾಹಿತ್ಯ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> ಗ್ರಾಮೀಣ ಜನರ ಒಡನಾಟಗಳಿಂದ ಪರಿಪೂರ್ಣ ವಿದ್ಯೆಯನ್ನು ಕಲಿತು, ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ. ಬಾಲ್ಯದ ಬದುಕು ನಮ್ಮಗಳ ವ್ಯಕ್ತಿತ್ವವನ್ನು ವಿಕಾಸಗೊಳಿಸಲು ತಳಹದಿಯಾಗುತ್ತದೆ. ಹಳ್ಳಿಯ ಜನಜೀವನವು ಬದುಕನ್ನು ವಿಸ್ತಾರಗೊಳಿಸುತ್ತದೆ ಎಂದರು.<br /> <br /> ಅನುಭವವಿಲ್ಲದೆ ಹೋದರೆ ಮನುಷ್ಯತ್ವ ಇರುವುದಿಲ್ಲ. ಜೀವಂತ ಇರುವವರೆಗೂ ಕಲಿಯುತ್ತಿರಬೇಕು ಎಂದು ಅವರು ಹೇಳಿದರು.<br /> <br /> ಇದೇ ಸಂದರ್ಭದಲ್ಲಿ ಪ್ರೊ.ಎಚ್.ಜೆ. ಲಕ್ಕಪ್ಪಗೌಡ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದ ಆಧ್ಯಕ್ಷತೆಯನ್ನು ಕನ್ನಡ ಭಾರತಿ ನಿರ್ದೇಶಕ ಡಾ.ಸಣ್ಣರಾಮ ವಹಿಸಿದ್ದರು. ಪ್ರಾಧ್ಯಾಪಕರಾದ ಡಾ.ಕುಮಾರಚಲ್ಯ, ಡಾ.ಜಿ. ಪ್ರಶಾಂತ ನಾಯಕ, ಡಾ.ಶಿವಾನಂದ ಕೆಳಗಿನಮನಿ ಉಪಸ್ಥಿತರಿದ್ದರು.<br /> <br /> ಪುರುಷೋತ್ತಮ ಪ್ರಾರ್ಥಿಸಿದರು. ಸಾಹಿತ್ಯ ಸಂಘದ ಉಪಾಧ್ಯಕ್ಷ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಸ್ವಾಗತಿಸಿದರು. ಕಾರ್ಯದರ್ಶಿ ಅನಿಲ್ ಸಾಗರ್ ವಂದಿಸಿದರು. ಎಸ್.ಎಂ. ನಿಲೇಶ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಕೇವಲ ಪುಸ್ತಕಗಳನ್ನು ಓದುವುದರಿಂದ ಪರಿಪೂರ್ಣ ವಿದ್ಯೆ ಸಂಪಾದಿಸಲಾಗುವುದಿಲ್ಲ. ಗ್ರಾಮೀಣ ನೆಲೆಯ ಜನಪದ ಸಾಹಿತ್ಯ, ಸಂಸ್ಕೃತಿ, ಕಲೆ, ಪ್ರಕೃತಿಯ ವಿಸ್ಮಯಗಳನ್ನು ಕುತೂಹಲಕಾರಿಯಾಗಿ ಆಸ್ವಾದನೆ ಮಾಡುವುದರಿಂದ ಬದುಕು ಪರಿಪೂರ್ಣವಾಗುತ್ತದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಎಚ್.ಜೆ. ಲಕ್ಕಪ್ಪಗೌಡ ಅಭಿಪ್ರಾಯಪಟ್ಟರು.<br /> <br /> ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ಕನ್ನಡ ಭಾರತಿ ಸಾಹಿತ್ಯ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> ಗ್ರಾಮೀಣ ಜನರ ಒಡನಾಟಗಳಿಂದ ಪರಿಪೂರ್ಣ ವಿದ್ಯೆಯನ್ನು ಕಲಿತು, ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ. ಬಾಲ್ಯದ ಬದುಕು ನಮ್ಮಗಳ ವ್ಯಕ್ತಿತ್ವವನ್ನು ವಿಕಾಸಗೊಳಿಸಲು ತಳಹದಿಯಾಗುತ್ತದೆ. ಹಳ್ಳಿಯ ಜನಜೀವನವು ಬದುಕನ್ನು ವಿಸ್ತಾರಗೊಳಿಸುತ್ತದೆ ಎಂದರು.<br /> <br /> ಅನುಭವವಿಲ್ಲದೆ ಹೋದರೆ ಮನುಷ್ಯತ್ವ ಇರುವುದಿಲ್ಲ. ಜೀವಂತ ಇರುವವರೆಗೂ ಕಲಿಯುತ್ತಿರಬೇಕು ಎಂದು ಅವರು ಹೇಳಿದರು.<br /> <br /> ಇದೇ ಸಂದರ್ಭದಲ್ಲಿ ಪ್ರೊ.ಎಚ್.ಜೆ. ಲಕ್ಕಪ್ಪಗೌಡ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದ ಆಧ್ಯಕ್ಷತೆಯನ್ನು ಕನ್ನಡ ಭಾರತಿ ನಿರ್ದೇಶಕ ಡಾ.ಸಣ್ಣರಾಮ ವಹಿಸಿದ್ದರು. ಪ್ರಾಧ್ಯಾಪಕರಾದ ಡಾ.ಕುಮಾರಚಲ್ಯ, ಡಾ.ಜಿ. ಪ್ರಶಾಂತ ನಾಯಕ, ಡಾ.ಶಿವಾನಂದ ಕೆಳಗಿನಮನಿ ಉಪಸ್ಥಿತರಿದ್ದರು.<br /> <br /> ಪುರುಷೋತ್ತಮ ಪ್ರಾರ್ಥಿಸಿದರು. ಸಾಹಿತ್ಯ ಸಂಘದ ಉಪಾಧ್ಯಕ್ಷ ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಸ್ವಾಗತಿಸಿದರು. ಕಾರ್ಯದರ್ಶಿ ಅನಿಲ್ ಸಾಗರ್ ವಂದಿಸಿದರು. ಎಸ್.ಎಂ. ನಿಲೇಶ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>