<p>ಹಾಸನ: `ಕಾಲೇಜಿನ ಆವರಣದಲ್ಲಿ ಔಷಧೀಯ ಸಸ್ಯಗಳನ್ನು ನೆಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಜತೆಗೆ ಉತ್ತಮ ಪರಿಸರದಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಸಹ ಪಡೆಯಬಹುದು~ ಎಂದು ವೈದ್ಯ ಡಾ. ಗುರುರಾಜ ಹೆಬ್ಬಾರ್ ನುಡಿದರು.<br /> <br /> ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಿಭಾಗದವರು ಶನಿವಾರ ಏರ್ಪಡಿಸಿದ್ದ `ಹಸಿರು ವಲಯ ನಿರ್ಮಾಣ~ ಕಾರ್ಯಕ್ರಮವನ್ನು ಗಿಡನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಸಸಿಗಳನ್ನು ನೆಡುವುದರ ಜತೆಗೆ ಅವುಗಳನ್ನು ಕಾಪಾಡಿಕೊಳ್ಳುವುದು ಅಗತ್ಯ~ ಎಂದು ಅವರು ಸಲಹೆ ನೀಡಿದರು.<br /> <br /> ಮುಖ್ಯ ಅತಿಥಿಯಾಗಿದ್ದ ಪರಿಸರವಾದಿ ಹೆಮ್ಮಿಗೆ ಮೋಹನ್ `ಪರಿಸರವನ್ನು ಉಳಿಸಿ ಬೆಳೆಸುವ ಜವಬ್ದಾರಿ ಇಂದಿನ ಯುವಕರ ಮೇಲಿದೆ~ ಎಂದು ಅವರು ಹೇಳಿದರು.<br /> <br /> ಪರಿಸರವಾದಿ ಅನುಗನಾಳು ಕೃಷ್ಣಮೂರ್ತಿ `ಕಾಲೇಜಿನ ಪರಿಸರ ಉತ್ತಮವಾಗಿದ್ದರೆ ಆರೋಗ್ಯವಂತ ವಿದ್ಯಾರ್ಥಿಗಳನ್ನು ಸೃಷ್ಟಿಸಬಹುದು~ ಎಂದರು. <br /> <br /> ಕಾಲೇಜಿನ ಆವರಣದಲ್ಲಿ ನೆಟ್ಟ ಸಸಿಗಳನ್ನು ಉಪನ್ಯಾಸಕರು ದತ್ತು ಪಡೆದುಕೊಂಡರು. <br /> ಪ್ರಾಂಶುಪಾಲ ಪ್ರೊ. ವಿ. ಕೃಷ್ಣಪ್ಪ, ಸಾಂಸ್ಕೃತಿಕ ವೇದಿಕೆ ಕಾರ್ಯದರ್ಶಿ ಪ್ರೊ. ಕೆ. ಗುರುರಾಜು, ಎನ್ಎಸ್ ಎಸ್ ಅಧಿಕಾರಿ ಎಂ.ಕೆ. ಮಹೇಶ್, ಐ.ಕ್ಯೂ.ಎ.ಸಿ ಸಂಚಾಲಕ ಡಾ. ಡಿ. ಶ್ರೀನಿವಾಸ ಹಾಗೂ ಉಪನ್ಯಾಸಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: `ಕಾಲೇಜಿನ ಆವರಣದಲ್ಲಿ ಔಷಧೀಯ ಸಸ್ಯಗಳನ್ನು ನೆಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಜತೆಗೆ ಉತ್ತಮ ಪರಿಸರದಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಸಹ ಪಡೆಯಬಹುದು~ ಎಂದು ವೈದ್ಯ ಡಾ. ಗುರುರಾಜ ಹೆಬ್ಬಾರ್ ನುಡಿದರು.<br /> <br /> ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಿಭಾಗದವರು ಶನಿವಾರ ಏರ್ಪಡಿಸಿದ್ದ `ಹಸಿರು ವಲಯ ನಿರ್ಮಾಣ~ ಕಾರ್ಯಕ್ರಮವನ್ನು ಗಿಡನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಸಸಿಗಳನ್ನು ನೆಡುವುದರ ಜತೆಗೆ ಅವುಗಳನ್ನು ಕಾಪಾಡಿಕೊಳ್ಳುವುದು ಅಗತ್ಯ~ ಎಂದು ಅವರು ಸಲಹೆ ನೀಡಿದರು.<br /> <br /> ಮುಖ್ಯ ಅತಿಥಿಯಾಗಿದ್ದ ಪರಿಸರವಾದಿ ಹೆಮ್ಮಿಗೆ ಮೋಹನ್ `ಪರಿಸರವನ್ನು ಉಳಿಸಿ ಬೆಳೆಸುವ ಜವಬ್ದಾರಿ ಇಂದಿನ ಯುವಕರ ಮೇಲಿದೆ~ ಎಂದು ಅವರು ಹೇಳಿದರು.<br /> <br /> ಪರಿಸರವಾದಿ ಅನುಗನಾಳು ಕೃಷ್ಣಮೂರ್ತಿ `ಕಾಲೇಜಿನ ಪರಿಸರ ಉತ್ತಮವಾಗಿದ್ದರೆ ಆರೋಗ್ಯವಂತ ವಿದ್ಯಾರ್ಥಿಗಳನ್ನು ಸೃಷ್ಟಿಸಬಹುದು~ ಎಂದರು. <br /> <br /> ಕಾಲೇಜಿನ ಆವರಣದಲ್ಲಿ ನೆಟ್ಟ ಸಸಿಗಳನ್ನು ಉಪನ್ಯಾಸಕರು ದತ್ತು ಪಡೆದುಕೊಂಡರು. <br /> ಪ್ರಾಂಶುಪಾಲ ಪ್ರೊ. ವಿ. ಕೃಷ್ಣಪ್ಪ, ಸಾಂಸ್ಕೃತಿಕ ವೇದಿಕೆ ಕಾರ್ಯದರ್ಶಿ ಪ್ರೊ. ಕೆ. ಗುರುರಾಜು, ಎನ್ಎಸ್ ಎಸ್ ಅಧಿಕಾರಿ ಎಂ.ಕೆ. ಮಹೇಶ್, ಐ.ಕ್ಯೂ.ಎ.ಸಿ ಸಂಚಾಲಕ ಡಾ. ಡಿ. ಶ್ರೀನಿವಾಸ ಹಾಗೂ ಉಪನ್ಯಾಸಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>