<p>ಬೆಂಗಳೂರು: ‘ಹಿರಿಯ ನಾಗರಿಕರನ್ನು ಗಮನದಲ್ಲಿಟ್ಟುಕೊಂಡು ನಗರದಲ್ಲಿ ಉದ್ಯಾನಗಳನ್ನು ನಿರ್ಮಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<br /> <br /> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಸರ್ವಜ್ಞ ನಗರ ವ್ಯಾಪ್ತಿಯಲ್ಲಿರುವ ಬೈಟಗುಂಟೆಪಾಳ್ಯ ಗ್ರಾಮದಲ್ಲಿ ₨52 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉದ್ಯಾನ ಮತ್ತು ಆಟದ ಮೈದಾನವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ ಮಾತನಾಡಿದರು.<br /> <br /> ‘60 ವರ್ಷ ಮೇಲ್ಪಟ್ಟವರು ಬಡಾವಣೆಯಲ್ಲಿರುವ ಉದ್ಯಾನಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಅವರ ಮನಸ್ಥಿತಿಗೆ ಅನುಗುಣವಾಗಿ ಉದ್ಯಾನ ನಿರ್ಮಾಣಗೊಳ್ಳಬೇಕು’ ಎಂದು ಆಶಯ ವ್ಯಕ್ತಪಡಿಸಿದರು.<br /> <br /> ‘ನಗರದಲ್ಲಿ ಗಿಡ–ಮರ, ಉದ್ಯಾನಗಳ ಮೂಲಕ ಹಸಿರು ಹೆಚ್ಚಿಸುವ ಕೆಲಸ ಆಗಬೇಕಿದೆ. ಅಲ್ಲದೇ ಕೊರತೆಯಿರುವ ಆಟದ ಮೈದಾನಗಳಿಗೂ ಜಾಗವನ್ನು ಮೀಸಲಿಡಬೇಕಿದೆ’ ಎಂದು ಹೇಳಿದರು.<br /> <br /> ಗೃಹ ಸಚಿವ ಕೆ.ಜೆ.ಜಾರ್ಜ್, ‘ಸರ್ವಜ್ಞನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಅಗತ್ಯವಿರುವ ಆಟದ ಮೈದಾನಗಳ ಕೊರತೆಯಿದ್ದು, ಈ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಹಿರಿಯ ನಾಗರಿಕರನ್ನು ಗಮನದಲ್ಲಿಟ್ಟುಕೊಂಡು ನಗರದಲ್ಲಿ ಉದ್ಯಾನಗಳನ್ನು ನಿರ್ಮಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<br /> <br /> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಸರ್ವಜ್ಞ ನಗರ ವ್ಯಾಪ್ತಿಯಲ್ಲಿರುವ ಬೈಟಗುಂಟೆಪಾಳ್ಯ ಗ್ರಾಮದಲ್ಲಿ ₨52 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉದ್ಯಾನ ಮತ್ತು ಆಟದ ಮೈದಾನವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ ಮಾತನಾಡಿದರು.<br /> <br /> ‘60 ವರ್ಷ ಮೇಲ್ಪಟ್ಟವರು ಬಡಾವಣೆಯಲ್ಲಿರುವ ಉದ್ಯಾನಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಅವರ ಮನಸ್ಥಿತಿಗೆ ಅನುಗುಣವಾಗಿ ಉದ್ಯಾನ ನಿರ್ಮಾಣಗೊಳ್ಳಬೇಕು’ ಎಂದು ಆಶಯ ವ್ಯಕ್ತಪಡಿಸಿದರು.<br /> <br /> ‘ನಗರದಲ್ಲಿ ಗಿಡ–ಮರ, ಉದ್ಯಾನಗಳ ಮೂಲಕ ಹಸಿರು ಹೆಚ್ಚಿಸುವ ಕೆಲಸ ಆಗಬೇಕಿದೆ. ಅಲ್ಲದೇ ಕೊರತೆಯಿರುವ ಆಟದ ಮೈದಾನಗಳಿಗೂ ಜಾಗವನ್ನು ಮೀಸಲಿಡಬೇಕಿದೆ’ ಎಂದು ಹೇಳಿದರು.<br /> <br /> ಗೃಹ ಸಚಿವ ಕೆ.ಜೆ.ಜಾರ್ಜ್, ‘ಸರ್ವಜ್ಞನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಅಗತ್ಯವಿರುವ ಆಟದ ಮೈದಾನಗಳ ಕೊರತೆಯಿದ್ದು, ಈ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>