<p><strong>ಬೆಂಗಳೂರು:</strong> ದರ್ಶನ್ ಅವರು ತಂದಿತ್ತ ಎರಡು ಗೋಲುಗಳ ನೆರವಿನಿಂದ ಎಸ್ಎಐ ತಂಡದವರು ಇಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಶ್ರಯದ ಡಿ.ಎಸ್. ಮೂರ್ತಿ ಮತ್ತು ವಿ. ಕರುಣಾಕರನ್ ಸ್ಮಾರಕ ಹಾಕಿ ಟೂರ್ನಿಯ ಪಂದ್ಯದಲ್ಲಿ ಗೆಲುವು ಪಡೆದರು.<br /> <br /> ಅಕ್ಕಿತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಎಸ್ಎಐ 3-1 ಗೋಲುಗಳಿಂದ ಪೋಸ್ಟಲ್ ತಂಡವನ್ನು ಮಣಿಸಿತು. ರಫೀಕ್ ಅವರು 7ನೇ ನಿಮಿಷದಲ್ಲಿ ಗೋಲು ಗಳಿಸಿ ಎಸ್ಎಐ ತಂಡದ ಗೋಲಿನ ಖಾತೆ ತೆರೆದರು.<br /> <br /> ಬಳಿಕ ದರ್ಶನ್ 22 ಮತ್ತು 38ನೇ ನಿಮಿಷದಲ್ಲಿ ಚೆಂಡನ್ನು ಗುರಿ ಸೇರಿಸಿ ತಂಡದ ಮುನ್ನಡೆಯನ್ನು 3-0 ಗೆ ಹೆಚ್ಚಿಸಿದರು. ಪೋಸ್ಟಲ್ ತಂಡದ ಏಕೈಕ ಗೋಲನ್ನು ಪ್ರಕಾಶ್ ಅವರು ಪಂದ್ಯದ 56ನೇ ನಿಮಿಷದಲ್ಲಿ ತಂದಿತ್ತರು.<br /> <br /> ಪಂದ್ಯದ ಮೊದಲ ನಿಮಿಷದಿಂದಲೇ ಎದುರಾಳಿ ಗೋಲುಪೆಟ್ಟಿಗೆ ಗುರಿಯಾಗಿಸಿ ಆಕ್ರಮಣ ನಡೆಸಿದ ಎಸ್ಎಐ ತಂಡದವರು ಕೊನೆಯವರೆಗೂ ಪೂರ್ಣ ಮೇಲುಗೈ ಸಾಧಿಸಿದರು. ಪೋಸ್ಟಲ್ ತಂಡ ಹೊಂದಾಣಿಕೆಯ ಪ್ರದರ್ಶನ ನೀಡಲು ವಿಫಲವಾಯಿತು. ಗೋಲು ಗಳಿಸಲು ನಡೆಸಿದ ಯಾವುದೇ ಪ್ರಯತ್ನಕ್ಕೆ ತಕ್ಕ ಫಲ ಲಭಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದರ್ಶನ್ ಅವರು ತಂದಿತ್ತ ಎರಡು ಗೋಲುಗಳ ನೆರವಿನಿಂದ ಎಸ್ಎಐ ತಂಡದವರು ಇಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಶ್ರಯದ ಡಿ.ಎಸ್. ಮೂರ್ತಿ ಮತ್ತು ವಿ. ಕರುಣಾಕರನ್ ಸ್ಮಾರಕ ಹಾಕಿ ಟೂರ್ನಿಯ ಪಂದ್ಯದಲ್ಲಿ ಗೆಲುವು ಪಡೆದರು.<br /> <br /> ಅಕ್ಕಿತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಎಸ್ಎಐ 3-1 ಗೋಲುಗಳಿಂದ ಪೋಸ್ಟಲ್ ತಂಡವನ್ನು ಮಣಿಸಿತು. ರಫೀಕ್ ಅವರು 7ನೇ ನಿಮಿಷದಲ್ಲಿ ಗೋಲು ಗಳಿಸಿ ಎಸ್ಎಐ ತಂಡದ ಗೋಲಿನ ಖಾತೆ ತೆರೆದರು.<br /> <br /> ಬಳಿಕ ದರ್ಶನ್ 22 ಮತ್ತು 38ನೇ ನಿಮಿಷದಲ್ಲಿ ಚೆಂಡನ್ನು ಗುರಿ ಸೇರಿಸಿ ತಂಡದ ಮುನ್ನಡೆಯನ್ನು 3-0 ಗೆ ಹೆಚ್ಚಿಸಿದರು. ಪೋಸ್ಟಲ್ ತಂಡದ ಏಕೈಕ ಗೋಲನ್ನು ಪ್ರಕಾಶ್ ಅವರು ಪಂದ್ಯದ 56ನೇ ನಿಮಿಷದಲ್ಲಿ ತಂದಿತ್ತರು.<br /> <br /> ಪಂದ್ಯದ ಮೊದಲ ನಿಮಿಷದಿಂದಲೇ ಎದುರಾಳಿ ಗೋಲುಪೆಟ್ಟಿಗೆ ಗುರಿಯಾಗಿಸಿ ಆಕ್ರಮಣ ನಡೆಸಿದ ಎಸ್ಎಐ ತಂಡದವರು ಕೊನೆಯವರೆಗೂ ಪೂರ್ಣ ಮೇಲುಗೈ ಸಾಧಿಸಿದರು. ಪೋಸ್ಟಲ್ ತಂಡ ಹೊಂದಾಣಿಕೆಯ ಪ್ರದರ್ಶನ ನೀಡಲು ವಿಫಲವಾಯಿತು. ಗೋಲು ಗಳಿಸಲು ನಡೆಸಿದ ಯಾವುದೇ ಪ್ರಯತ್ನಕ್ಕೆ ತಕ್ಕ ಫಲ ಲಭಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>