<p>ಬೀದರ್: ಕ್ರೀಡೆಗೆ ಪ್ರೋತ್ಸಾಹ ನೀಡುವುದಕ್ಕಾಗಿ ಜಿಲ್ಲೆಯಲ್ಲಿ ಹಾಕಿ ಮತ್ತಿತರ ಟೂರ್ನಮೆಂಟ್ಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಾಬುರಾವ್ ಕಾರಬಾರಿ ನುಡಿದರು.<br /> <br /> ಗುರುನಾನಕರು ಬೀದರ್ಗೆ ಭೇಟಿ ನೀಡಿದ 500ನೇ ವರ್ಷಾಚರಣೆಯ ಪ್ರಯುಕ್ತ ಗುರುನಾನಕ್ ಝೀರಾ ಫೌಂಡೇಷನ್ ಏರ್ಪಡಿಸಿರುವ ರಾಷ್ಟ್ರಮಟ್ಟದ ಗುರುನಾನಕ್ ದೇವ್ ಹಾಕಿ ಪಂದ್ಯಾವಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.<br /> <br /> ಪಂದ್ಯಾವಳಿಗಳನ್ನು ಆಯೋಜಿಸುವುದರಿಂದ ಕ್ರೀಡಾಪಟುಗಳಿಗೆ ವೇದಿಕೆ ದೊರೆಯುತ್ತದೆ. ಕ್ರೀಡಾಭಿಮಾನಿಗಳಿಗೆ ಅದರ ಸವಿ ಅನುಭವಿಸಲು ಅನುಕೂಲವಾಗುತ್ತದೆ. ಹೊಸ ಕ್ರೀಡಾಪಟುಗಳು ಹುಟ್ಟಿಕೊಳ್ಳಲು ಪ್ರೇರಣೆ ಆಗುತ್ತದೆ ಎಂದು ಹೇಳಿದರು.<br /> <br /> ರಾಷ್ಟ್ರೀಯ ಕ್ರೀಡೆ ಹಾಕಿಗೆ ಸಿಗಬೇಕಾದ ಪ್ರಾಧಾನ್ಯತೆ ದೊರೆಯುತ್ತಿಲ್ಲ ಎಂದು ವಿಷಾದಿಸಿದ ಅರ್ಜುನ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಎ.ಬಿ. ಸುಬ್ಬಯ್ಯ `ಹಾಕಿಯಂತಹ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಕಲ್ಪಿಸುವ ಅಗತ್ಯವಿದೆ~ ಎಂದು ಹೇಳಿದರು.<br /> <br /> ಬೀದರ್ನಲ್ಲಿ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿ ಆಯೋಜಿಸಿರುವುದು ಸಂತಸದ ಸಂಗತಿ. ಮೂಲಸೌಕರ್ಯಗಳ ಕೊರತೆಯ ನಡುವೆ ಬೀದರ್ನಲ್ಲಿ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿ ನಡೆಯುತ್ತಿರುವುದು ಸಂತಸ ಉಂಟು ಮಾಡಿದೆ. ದೇಶೀಯ ಕ್ರೀಡೆಗಳಿಗೆ ಉತ್ತೇಜನ ನೀಡುವ ಕೆಲಸ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಗುರುನಾನಕ್ ಝೀರಾ ಫೌಂಡೇಷನ್ ಅಧ್ಯಕ್ಷ ಸರ್ದಾರ್ ಬಲಬೀರ್ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರೇಷ್ಮಾ ಕೌರ್, ಗುರುನಾನಕ್ ದೇವ್ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ವಿ.ಡಿ. ಮೈತ್ರಿ, ಗುರುನಾನಕ್ ಝೀರಾ ಫೌಂಡೇಷನ್ ಉಪಾಧ್ಯಕ್ಷ ವರಿಯಂಸಿಂಗ್, ಸದಸ್ಯ ಪ್ರೀತಮ್ಸಿಂಗ್ ಉಪಸ್ಥಿತರಿದ್ದರು.<br /> <br /> ಹಾಕಿ ಪಂದ್ಯಾವಳಿಯ ಕಾರ್ಯದರ್ಶಿ ಜಗತಾರಸಿಂಗ್ ಸ್ವಾಗತಿಸಿದರು. ರಾಜಶೇಖರ ಗಾಯತೊಂಡ ನಿರೂಪಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಕ್ರೀಡೆಗೆ ಪ್ರೋತ್ಸಾಹ ನೀಡುವುದಕ್ಕಾಗಿ ಜಿಲ್ಲೆಯಲ್ಲಿ ಹಾಕಿ ಮತ್ತಿತರ ಟೂರ್ನಮೆಂಟ್ಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಾಬುರಾವ್ ಕಾರಬಾರಿ ನುಡಿದರು.<br /> <br /> ಗುರುನಾನಕರು ಬೀದರ್ಗೆ ಭೇಟಿ ನೀಡಿದ 500ನೇ ವರ್ಷಾಚರಣೆಯ ಪ್ರಯುಕ್ತ ಗುರುನಾನಕ್ ಝೀರಾ ಫೌಂಡೇಷನ್ ಏರ್ಪಡಿಸಿರುವ ರಾಷ್ಟ್ರಮಟ್ಟದ ಗುರುನಾನಕ್ ದೇವ್ ಹಾಕಿ ಪಂದ್ಯಾವಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.<br /> <br /> ಪಂದ್ಯಾವಳಿಗಳನ್ನು ಆಯೋಜಿಸುವುದರಿಂದ ಕ್ರೀಡಾಪಟುಗಳಿಗೆ ವೇದಿಕೆ ದೊರೆಯುತ್ತದೆ. ಕ್ರೀಡಾಭಿಮಾನಿಗಳಿಗೆ ಅದರ ಸವಿ ಅನುಭವಿಸಲು ಅನುಕೂಲವಾಗುತ್ತದೆ. ಹೊಸ ಕ್ರೀಡಾಪಟುಗಳು ಹುಟ್ಟಿಕೊಳ್ಳಲು ಪ್ರೇರಣೆ ಆಗುತ್ತದೆ ಎಂದು ಹೇಳಿದರು.<br /> <br /> ರಾಷ್ಟ್ರೀಯ ಕ್ರೀಡೆ ಹಾಕಿಗೆ ಸಿಗಬೇಕಾದ ಪ್ರಾಧಾನ್ಯತೆ ದೊರೆಯುತ್ತಿಲ್ಲ ಎಂದು ವಿಷಾದಿಸಿದ ಅರ್ಜುನ ಪ್ರಶಸ್ತಿ ಪುರಸ್ಕೃತ ಹಾಕಿ ಆಟಗಾರ ಎ.ಬಿ. ಸುಬ್ಬಯ್ಯ `ಹಾಕಿಯಂತಹ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಕಲ್ಪಿಸುವ ಅಗತ್ಯವಿದೆ~ ಎಂದು ಹೇಳಿದರು.<br /> <br /> ಬೀದರ್ನಲ್ಲಿ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿ ಆಯೋಜಿಸಿರುವುದು ಸಂತಸದ ಸಂಗತಿ. ಮೂಲಸೌಕರ್ಯಗಳ ಕೊರತೆಯ ನಡುವೆ ಬೀದರ್ನಲ್ಲಿ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿ ನಡೆಯುತ್ತಿರುವುದು ಸಂತಸ ಉಂಟು ಮಾಡಿದೆ. ದೇಶೀಯ ಕ್ರೀಡೆಗಳಿಗೆ ಉತ್ತೇಜನ ನೀಡುವ ಕೆಲಸ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ಗುರುನಾನಕ್ ಝೀರಾ ಫೌಂಡೇಷನ್ ಅಧ್ಯಕ್ಷ ಸರ್ದಾರ್ ಬಲಬೀರ್ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರೇಷ್ಮಾ ಕೌರ್, ಗುರುನಾನಕ್ ದೇವ್ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ವಿ.ಡಿ. ಮೈತ್ರಿ, ಗುರುನಾನಕ್ ಝೀರಾ ಫೌಂಡೇಷನ್ ಉಪಾಧ್ಯಕ್ಷ ವರಿಯಂಸಿಂಗ್, ಸದಸ್ಯ ಪ್ರೀತಮ್ಸಿಂಗ್ ಉಪಸ್ಥಿತರಿದ್ದರು.<br /> <br /> ಹಾಕಿ ಪಂದ್ಯಾವಳಿಯ ಕಾರ್ಯದರ್ಶಿ ಜಗತಾರಸಿಂಗ್ ಸ್ವಾಗತಿಸಿದರು. ರಾಜಶೇಖರ ಗಾಯತೊಂಡ ನಿರೂಪಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>