<p><strong>ಬೆಂಗಳೂರು: </strong>ಕರ್ನಾಟಕ ಹಾಗೂ ತಮಿಳುನಾಡು ತಂಡಗಳ ನಡುವೆ ಶುಕ್ರವಾರ ನಡೆದ ದಕ್ಷಿಣ ವಲಯ ರಾಷ್ಟ್ರೀಯ ಹಾಕಿ ಚಾಂಪಿಯನ್ಷಿಪ್ನ ಕೊನೆಯ ಲೀಗ್ ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿತು. ಆದರೂ, ಹೆಚ್ಚು ಗೋಲು ಗಳಿಸಿರುವ ಆತಿಥೇಯರು ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳುವ ಅರ್ಹತೆ ಪಡೆದುಕೊಂಡರು.<br /> <br /> ಅಕ್ಕಿ ತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಉಭಯ ತಂಡಗಳು ತಲಾ 2 ಗೋಲು ಗಳಿಸಿ 13 ಪಾಯಿಂಟ್ಸ್ನಿಂದ ಸಮಬಲ ಸಾಧಿಸಿದವು. ಆತಿಥೇಯ ತಂಡದ ಡಿ.ಎಸ್. ದರ್ಶನ್ ಹಾಗೂ ನಾಯಕ ಹರಿಪ್ರಸಾದ್ ಜಿ.ಎಂ. ಕ್ರಮವಾಗಿ 12 ಮತ್ತು 30ನೇ ನಿಮಿಷದಲ್ಲಿ ಗೋಲು ತಂದಿತ್ತರು. <br /> <br /> ರಾಷ್ಟ್ರೀಯ ಹಾಕಿ ಚಾಂಪಿಯನ್ಷಿಪ್ ಬೆಂಗಳೂರು ಅಥವಾ ಮುಂಬೈಯಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಮೂಲಗಳು ತಿಳಿಸಿವೆ. ಆದರೆ, ಈ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ. <br /> <br /> ಮಹಮ್ಮದ್ ನಯೀಮುದ್ದಿನ್ (ಗರಿಷ್ಠ ಗೋಲು, ಕರ್ನಾಟಕ), ಕಮಲ್ ಕಣ್ಣನ್ (ಪುದುಚೇರಿ, ಗಮನಾರ್ಹ ಪ್ರದರ್ಶನ ನೀಡಿದವರು) ಗೌರವಕ್ಕೆ ಪಾತ್ರರಾದರು. ಚಾಂಪಿಯನ್ಷಿಪ್ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದಕ್ಕೆ ಕರ್ನಾಟಕದ ಗೋಲ್ ಕೀಪರ್ ಜಗದೀಪ್ ದಯಾಳ್ ಅವರಿಗೆ ಟಿವಿಎಸ್ ಗ್ರೂಪ್ ಕಂಪೆನಿ ಮೋಟಾರ್ ಬೈಕನ್ನು ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕರ್ನಾಟಕ ಹಾಗೂ ತಮಿಳುನಾಡು ತಂಡಗಳ ನಡುವೆ ಶುಕ್ರವಾರ ನಡೆದ ದಕ್ಷಿಣ ವಲಯ ರಾಷ್ಟ್ರೀಯ ಹಾಕಿ ಚಾಂಪಿಯನ್ಷಿಪ್ನ ಕೊನೆಯ ಲೀಗ್ ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿತು. ಆದರೂ, ಹೆಚ್ಚು ಗೋಲು ಗಳಿಸಿರುವ ಆತಿಥೇಯರು ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳುವ ಅರ್ಹತೆ ಪಡೆದುಕೊಂಡರು.<br /> <br /> ಅಕ್ಕಿ ತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಉಭಯ ತಂಡಗಳು ತಲಾ 2 ಗೋಲು ಗಳಿಸಿ 13 ಪಾಯಿಂಟ್ಸ್ನಿಂದ ಸಮಬಲ ಸಾಧಿಸಿದವು. ಆತಿಥೇಯ ತಂಡದ ಡಿ.ಎಸ್. ದರ್ಶನ್ ಹಾಗೂ ನಾಯಕ ಹರಿಪ್ರಸಾದ್ ಜಿ.ಎಂ. ಕ್ರಮವಾಗಿ 12 ಮತ್ತು 30ನೇ ನಿಮಿಷದಲ್ಲಿ ಗೋಲು ತಂದಿತ್ತರು. <br /> <br /> ರಾಷ್ಟ್ರೀಯ ಹಾಕಿ ಚಾಂಪಿಯನ್ಷಿಪ್ ಬೆಂಗಳೂರು ಅಥವಾ ಮುಂಬೈಯಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಮೂಲಗಳು ತಿಳಿಸಿವೆ. ಆದರೆ, ಈ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ. <br /> <br /> ಮಹಮ್ಮದ್ ನಯೀಮುದ್ದಿನ್ (ಗರಿಷ್ಠ ಗೋಲು, ಕರ್ನಾಟಕ), ಕಮಲ್ ಕಣ್ಣನ್ (ಪುದುಚೇರಿ, ಗಮನಾರ್ಹ ಪ್ರದರ್ಶನ ನೀಡಿದವರು) ಗೌರವಕ್ಕೆ ಪಾತ್ರರಾದರು. ಚಾಂಪಿಯನ್ಷಿಪ್ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದಕ್ಕೆ ಕರ್ನಾಟಕದ ಗೋಲ್ ಕೀಪರ್ ಜಗದೀಪ್ ದಯಾಳ್ ಅವರಿಗೆ ಟಿವಿಎಸ್ ಗ್ರೂಪ್ ಕಂಪೆನಿ ಮೋಟಾರ್ ಬೈಕನ್ನು ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>