<p>ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ಗೆ ನುಗ್ಗಿದ ದುಷ್ಕರ್ಮಿ, ಗ್ರಾಹಕರೊಬ್ಬರ ಮೇಲೆ ಪಿಸ್ತೂಲ್ನಿಂದ ಗುಂಡು ಹಾರಿಸಿ ಕೊಲೆ ಮಾಡಿ ಸುಮಾರು 12 ಲಕ್ಷ ರೂಪಾಯಿ ಹಣ ದರೋಡೆ ಮಾಡಿರುವ ಘಟನೆ ನಗರದ ಹೆಸರಘಟ್ಟ ಮುಖ್ಯರಸ್ತೆಯ ಚಿಕ್ಕಬಾಣಾವರ ವೃತ್ತದಲ್ಲಿ ಸೋಮವಾರ ಹಾಡಹಗಲೇ ನಡೆದಿದೆ.<br /> <br /> ಚಿಕ್ಕಬಾಣಾವರ ನಿವಾಸಿ ಮುರಳೀಧರ್ (43) ಕೊಲೆಯಾದವರು. ಸಿವಿಲ್ ಗುತ್ತಿಗೆದಾರರಾಗಿದ್ದ ಅವರು, ವೆಂಕಟೇಶ್ ಎಂಬ ಸ್ನೇಹಿತನ ಪೆಟ್ರೋಲ್ ಬಂಕ್ನಲ್ಲಿ ವ್ಯವಸ್ಥಾಪಕರಾಗಿಯೂ ಕೆಲಸ ಮಾಡುತ್ತಿದ್ದರು.<br /> <br /> ಮುರಳೀಧರ್, ಪೆಟ್ರೋಲ್ ಬಂಕ್ನ ವಹಿವಾಟಿನ ಹಣವನ್ನು ಕಾರ್ಪೋರೇಷನ್ ಬ್ಯಾಂಕ್ನ ಚಿಕ್ಕಬಾಣಾವರ ಶಾಖೆಗೆ ಕಟ್ಟಲು ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.<br /> <br /> ವಿದ್ಯಾರ್ಥಿಯ ಸೋಗಿನಲ್ಲಿ ಬ್ಯಾಗ್ ಹಾಕಿಕೊಂಡು ಮಧ್ಯಾಹ್ನ 3.30ರ ಸುಮಾರಿಗೆ ಕಾರ್ಪೋರೇಷನ್ ಬ್ಯಾಂಕ್ಗೆ ಬಂದಿದ್ದ ಯುವಕನೊಬ್ಬ ಮೂರ್ನಾಲ್ಕು ನಿಮಿಷಗಳ ಕಾಲ ಆವರಣದಲ್ಲಿ ಅಡ್ಡಾಡಿ ಗ್ರಾಹಕರು ಮತ್ತು ಅಧಿಕಾರಿಗಳ ಚಲನವಲನಗಳನ್ನು ಗಮನಿಸಿದ.<br /> <br /> ನಂತರ ಬ್ಯಾಗ್ನಿಂದ ಪಿಸ್ತೂಲ್ ತೆಗೆದು, ಗ್ರಾಹಕರು ಹಾಗೂ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿ ಎಲ್ಲರನ್ನೂ ಒಂದೆಡೆ ಕೂರಿಸಿದ. ಬಳಿಕ ಅವರೆಲ್ಲರ ಮೊಬೈಲ್ಗಳನ್ನು ಕಿತ್ತುಕೊಂಡು, ನಗದು ಕೌಂಟರ್ಗೆ ನುಗ್ಗಿ ಹಣ ತೆಗೆದುಕೊಂಡು ಹೊರ ಹೋಗಲು ಮುಂದಾದ.<br /> <br /> ಈ ಹಂತದಲ್ಲಿ ಮುರಳೀಧರ್, ಆತನನ್ನು ಹಿಡಿದುಕೊಳ್ಳಲು ಹೋದಾಗ ದುಷ್ಕರ್ಮಿ ಪಿಸ್ತೂಲ್ನಿಂದ ಅವರ ಮೇಲೆ ಒಂದು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ಗೆ ನುಗ್ಗಿದ ದುಷ್ಕರ್ಮಿ, ಗ್ರಾಹಕರೊಬ್ಬರ ಮೇಲೆ ಪಿಸ್ತೂಲ್ನಿಂದ ಗುಂಡು ಹಾರಿಸಿ ಕೊಲೆ ಮಾಡಿ ಸುಮಾರು 12 ಲಕ್ಷ ರೂಪಾಯಿ ಹಣ ದರೋಡೆ ಮಾಡಿರುವ ಘಟನೆ ನಗರದ ಹೆಸರಘಟ್ಟ ಮುಖ್ಯರಸ್ತೆಯ ಚಿಕ್ಕಬಾಣಾವರ ವೃತ್ತದಲ್ಲಿ ಸೋಮವಾರ ಹಾಡಹಗಲೇ ನಡೆದಿದೆ.<br /> <br /> ಚಿಕ್ಕಬಾಣಾವರ ನಿವಾಸಿ ಮುರಳೀಧರ್ (43) ಕೊಲೆಯಾದವರು. ಸಿವಿಲ್ ಗುತ್ತಿಗೆದಾರರಾಗಿದ್ದ ಅವರು, ವೆಂಕಟೇಶ್ ಎಂಬ ಸ್ನೇಹಿತನ ಪೆಟ್ರೋಲ್ ಬಂಕ್ನಲ್ಲಿ ವ್ಯವಸ್ಥಾಪಕರಾಗಿಯೂ ಕೆಲಸ ಮಾಡುತ್ತಿದ್ದರು.<br /> <br /> ಮುರಳೀಧರ್, ಪೆಟ್ರೋಲ್ ಬಂಕ್ನ ವಹಿವಾಟಿನ ಹಣವನ್ನು ಕಾರ್ಪೋರೇಷನ್ ಬ್ಯಾಂಕ್ನ ಚಿಕ್ಕಬಾಣಾವರ ಶಾಖೆಗೆ ಕಟ್ಟಲು ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.<br /> <br /> ವಿದ್ಯಾರ್ಥಿಯ ಸೋಗಿನಲ್ಲಿ ಬ್ಯಾಗ್ ಹಾಕಿಕೊಂಡು ಮಧ್ಯಾಹ್ನ 3.30ರ ಸುಮಾರಿಗೆ ಕಾರ್ಪೋರೇಷನ್ ಬ್ಯಾಂಕ್ಗೆ ಬಂದಿದ್ದ ಯುವಕನೊಬ್ಬ ಮೂರ್ನಾಲ್ಕು ನಿಮಿಷಗಳ ಕಾಲ ಆವರಣದಲ್ಲಿ ಅಡ್ಡಾಡಿ ಗ್ರಾಹಕರು ಮತ್ತು ಅಧಿಕಾರಿಗಳ ಚಲನವಲನಗಳನ್ನು ಗಮನಿಸಿದ.<br /> <br /> ನಂತರ ಬ್ಯಾಗ್ನಿಂದ ಪಿಸ್ತೂಲ್ ತೆಗೆದು, ಗ್ರಾಹಕರು ಹಾಗೂ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿ ಎಲ್ಲರನ್ನೂ ಒಂದೆಡೆ ಕೂರಿಸಿದ. ಬಳಿಕ ಅವರೆಲ್ಲರ ಮೊಬೈಲ್ಗಳನ್ನು ಕಿತ್ತುಕೊಂಡು, ನಗದು ಕೌಂಟರ್ಗೆ ನುಗ್ಗಿ ಹಣ ತೆಗೆದುಕೊಂಡು ಹೊರ ಹೋಗಲು ಮುಂದಾದ.<br /> <br /> ಈ ಹಂತದಲ್ಲಿ ಮುರಳೀಧರ್, ಆತನನ್ನು ಹಿಡಿದುಕೊಳ್ಳಲು ಹೋದಾಗ ದುಷ್ಕರ್ಮಿ ಪಿಸ್ತೂಲ್ನಿಂದ ಅವರ ಮೇಲೆ ಒಂದು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>