<p><strong>ಬೆಂಗಳೂರು: </strong>ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಮನೆಯೊಡತಿ ಮತ್ತು ಕೆಲಸದಾಕೆಯನ್ನು ಬೆದರಿಸಿ ಕಟ್ಟಿ ಹಾಕಿ ಅರ್ಧ ಕೆ.ಜಿ. ಚಿನ್ನದ ಆಭರಣ ದರೋಡೆ ಮಾಡಿರುವ ಘಟನೆ ಚೋಳೂರುಪಾಳ್ಯದ ವಿದ್ಯಾರಣ್ಯಪುರದಲ್ಲಿ ಶುಕ್ರವಾರ ನಡೆದಿದೆ.<br /> <br /> ನಾಗರತ್ನ ಮತ್ತು ಜಯಮ್ಮ ದರೋಡೆಗೊಳಗಾದವರು. ನಾಗರತ್ನ ಅವರ ಪತಿ ನಿತ್ಯಾನಂದ ಅವರು ಮೆಜೆಸ್ಟಿಕ್ನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ಬೆಳಿಗ್ಗೆ ಅವರು ಅಂಗಡಿಗೆ ಹೋಗಿದ್ದರು. ಜಯಮ್ಮ ಅವರು ಎಂದಿನಂತೆ ಮನೆ ಕೆಲಸಕ್ಕಾಗಿ ಬಂದಿದ್ದರು. <br /> <br /> ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ಏಕಾಏಕಿ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇಬ್ಬರನ್ನೂ ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ. ಕೊಠಡಿಗೆ ಎಳೆದೊಯ್ದ ಅವರು ಇಬ್ಬರಿಗೂ ಬಾಯಿಗೆ ಬಟ್ಟೆ ತುರುಕಿ ಹಗ್ಗದಿಂದ ಕೈಕಾಲು ಕಟ್ಟಿ ಹಾಕಿದ್ದಾರೆ. <br /> <br /> ಅಲ್ಮೇರಾದಲ್ಲಿ ಮತ್ತು ಮೈಮೇಲೆ ಇದ್ದ ಸುಮಾರು ಅರ್ಧ ಕೆ.ಜಿ. ಚಿನ್ನದ ಆಭರಣ ಮತ್ತು ಎಂಬತ್ತು ಸಾವಿರ ರೂಪಾಯಿ ನಗದು ದೋಚಿದ ಅವರು ಪರಾರಿಯಾಗಿದ್ದಾರೆ.<br /> <br /> ದುಷ್ಕರ್ಮಿಗಳು ಹೋದ ನಂತರ ಅರ್ಧ ಗಂಟೆಯಾದ ಮೇಲೆ ಕಟ್ಟು ಬಿಡಿಸಿಕೊಂಡ ಅವರು ಪಕ್ಕದ ಮನೆಯವರಿಗೆ ಈ ವಿಷಯ ತಿಳಿಸಿದ್ದಾರೆ. <br /> <br /> ಇಬ್ಬರೂ ಕನ್ನಡದಲ್ಲಿ ಮಾತನಾಡುತ್ತಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ. ಮನೆಯ ಬಾಗಿಲು ತೆರೆದಿಟ್ಟಿದ್ದರಿಂದ ದರೋಡೆಕೋರರು ಸುಲಭವಾಗಿ ಒಳಗೆ ನುಗ್ಗಿದ್ದಾರೆ. <br /> <br /> ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಎನ್. ಸಿದ್ದರಾಮಪ್ಪ ತಿಳಿಸಿದ್ದಾರೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಮನೆಯೊಡತಿ ಮತ್ತು ಕೆಲಸದಾಕೆಯನ್ನು ಬೆದರಿಸಿ ಕಟ್ಟಿ ಹಾಕಿ ಅರ್ಧ ಕೆ.ಜಿ. ಚಿನ್ನದ ಆಭರಣ ದರೋಡೆ ಮಾಡಿರುವ ಘಟನೆ ಚೋಳೂರುಪಾಳ್ಯದ ವಿದ್ಯಾರಣ್ಯಪುರದಲ್ಲಿ ಶುಕ್ರವಾರ ನಡೆದಿದೆ.<br /> <br /> ನಾಗರತ್ನ ಮತ್ತು ಜಯಮ್ಮ ದರೋಡೆಗೊಳಗಾದವರು. ನಾಗರತ್ನ ಅವರ ಪತಿ ನಿತ್ಯಾನಂದ ಅವರು ಮೆಜೆಸ್ಟಿಕ್ನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ಬೆಳಿಗ್ಗೆ ಅವರು ಅಂಗಡಿಗೆ ಹೋಗಿದ್ದರು. ಜಯಮ್ಮ ಅವರು ಎಂದಿನಂತೆ ಮನೆ ಕೆಲಸಕ್ಕಾಗಿ ಬಂದಿದ್ದರು. <br /> <br /> ಮಧ್ಯಾಹ್ನ ಹನ್ನೆರಡು ಗಂಟೆ ಸುಮಾರಿಗೆ ಏಕಾಏಕಿ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಇಬ್ಬರನ್ನೂ ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ. ಕೊಠಡಿಗೆ ಎಳೆದೊಯ್ದ ಅವರು ಇಬ್ಬರಿಗೂ ಬಾಯಿಗೆ ಬಟ್ಟೆ ತುರುಕಿ ಹಗ್ಗದಿಂದ ಕೈಕಾಲು ಕಟ್ಟಿ ಹಾಕಿದ್ದಾರೆ. <br /> <br /> ಅಲ್ಮೇರಾದಲ್ಲಿ ಮತ್ತು ಮೈಮೇಲೆ ಇದ್ದ ಸುಮಾರು ಅರ್ಧ ಕೆ.ಜಿ. ಚಿನ್ನದ ಆಭರಣ ಮತ್ತು ಎಂಬತ್ತು ಸಾವಿರ ರೂಪಾಯಿ ನಗದು ದೋಚಿದ ಅವರು ಪರಾರಿಯಾಗಿದ್ದಾರೆ.<br /> <br /> ದುಷ್ಕರ್ಮಿಗಳು ಹೋದ ನಂತರ ಅರ್ಧ ಗಂಟೆಯಾದ ಮೇಲೆ ಕಟ್ಟು ಬಿಡಿಸಿಕೊಂಡ ಅವರು ಪಕ್ಕದ ಮನೆಯವರಿಗೆ ಈ ವಿಷಯ ತಿಳಿಸಿದ್ದಾರೆ. <br /> <br /> ಇಬ್ಬರೂ ಕನ್ನಡದಲ್ಲಿ ಮಾತನಾಡುತ್ತಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ. ಮನೆಯ ಬಾಗಿಲು ತೆರೆದಿಟ್ಟಿದ್ದರಿಂದ ದರೋಡೆಕೋರರು ಸುಲಭವಾಗಿ ಒಳಗೆ ನುಗ್ಗಿದ್ದಾರೆ. <br /> <br /> ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಎನ್. ಸಿದ್ದರಾಮಪ್ಪ ತಿಳಿಸಿದ್ದಾರೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>