<p>ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ಹಾಗೂ ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ತನ್ನ ವ್ಯಾಪ್ತಿಯಲ್ಲಿನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ 2.60 ರೂಪಾಯಿ ನೀಡುವ ಮೂಲಕ ಸಂಕ್ರಾಂತಿ ಉಡುಗೊರೆ ನೀಡಿದೆ. ಇದು 16ರಿಂದ ಜಾರಿಯಾಗಲಿದೆ.<br /> <br /> ನಗರದ ಡಾ.ಎಂ.ಎಚ್. ಮರಿಗೌಡ ರಸ್ತೆಯಲ್ಲಿರುವ ಒಕ್ಕೂಟದ ಆವರಣದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ದಿಬ್ಬೂರು ಜಯಣ್ಣ, `ಹಾಲು ಉತ್ಪಾದಕರಿಗೆ ಸಂಕ್ರಾಂತಿ ಉಡುಗೊರೆಯಾಗಿ ಪ್ರತಿ ಲೀಟರ್ಗೆ 2.60 ರೂಪಾಯಿ ನೀಡಲು ಆಡಳಿತ ಮಂಡಲಿ ಸಭೆಯಲ್ಲಿ ನಿರ್ಧರಿಸಲಾಗಿದೆ~ ಎಂದರು.<br /> <br /> `ಪಶು ಆಹಾರದ ಬೆಲೆ ಏರಿಕೆಯಾಗಿರುವುದರಿಂದ ರೈತರಿಗೆ ತೀವ್ರ ಹೊರೆಯಾಗುತ್ತಿತ್ತು. ಇದೀಗ ಹಾಲಿನ ದರ ಪ್ರತಿ ಲೀಟರ್ಗೆ ಮೂರು ರೂಪಾಯಿ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಅನುಕೂಲವಾಗಲಿದೆ~ ಎಂದರು.<br /> <br /> ಒಕ್ಕೂಟದ ನಿರ್ದೇಶಕ ಮಂಜುನಾಥ್, `ಹಾಲಿನ ದರದಲ್ಲಿ ಏರಿಕೆಯಾಗಿರುವ ಮೂರು ರೂಪಾಯಿಯಲ್ಲಿ 2.60 ರೂಪಾಯಿಯನ್ನು ರೈತರಿಗೆ ನೀಡಲಾಗುವುದು. ಪೆಟ್ರೋಲ್, ಡೀಸೆಲ್ ದರ ಏರಿಕೆ, ಸಂಸ್ಕರಣೆ ಶುಲ್ಕ, ಪ್ಯಾಕಿಂಗ್ ಶುಲ್ಕ ಹೆಚ್ಚಳ, ನೌಕರರು- ಅಧಿಕಾರಿಗಳಿಗೆ ಬಡ್ತಿ ನೀಡಿರುವುದರಿಂದ ಉಳಿದ 40 ಪೈಸೆಯನ್ನು ಆಡಳಿತ ವೆಚ್ಚಗಳಿಗೆ ಬಳಸಲಾಗುವುದು~ ಎಂದರು.<br /> <br /> `ಬೆಂಗಳೂರು ಡೇರಿ ವತಿಯಿಂದ ಈವರೆಗೆ ರೈತರಿಗೆ ಪ್ರತಿ ಲೀಟರ್ ಹಾಲಿಗೆ 18 ರೂಪಾಯಿ ನೀಡಲಾಗುತ್ತಿತ್ತು. ಇದೇ 16ರ ನಂತರ ಪ್ರತಿ ಲೀಟರ್ಗೆ ರೂ 20.60ನೀಡಲಾಗುವುದು. <br /> ತುಮಕೂರಿನಲ್ಲಿ ರೂ 20, ಕೋಲಾರದಲ್ಲಿ ರೂ 20.40, ಮಂಡ್ಯದಲ್ಲಿ 20.50 ರೂಪಾಯಿ ನೀಡಲಾಗುತ್ತಿದೆ~ ಎಂದು ಹೇಳಿದರು.<br /> <br /> 10.25 ಲಕ್ಷಕ್ಕೆ ಏರಿಕೆಯಾಗುವ ನಿರೀಕ್ಷೆ: ಬೆಂಗಳೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ವಿ. ಲಕ್ಷ್ಮಣರೆಡ್ಡಿ, `ಒಕ್ಕೂಟಕ್ಕೆ ನಿತ್ಯ ಸರಾಸರಿ 9.50 ಲಕ್ಷ ಕೆ.ಜಿ. ಹಾಲು ಪೂರೈಕೆಯಾಗುತ್ತಿದೆ. ಕಳೆದ ಸಾಲಿಗೆ ಹೋಲಿಸಿದರೆ ಸದ್ಯ ಒಂದು ಲಕ್ಷ ಕೆ.ಜಿ.ಗಿಂತಲೂ ಹೆಚ್ಚು ಹಾಲು ಸರಬರಾಜಾಗುತ್ತಿದೆ. ಮುಂದಿನ ಹಣಕಾಸು ವರ್ಷದಲ್ಲಿ 10.25 ಲಕ್ಷ ಕೆ.ಜಿ. ಹಾಲು ಪೂರೈಕೆಯಾಗುವ ನಿರೀಕ್ಷೆ ಇದೆ~ ಎಂದರು.<br /> <br /> `ಹಾಲು ಶೇಖರಣಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಹೊಸಕೋಟೆಯಲ್ಲಿ 24 ಕೋಟಿ ರೂಪಾಯಿ ವೆಚ್ಚದಲ್ಲಿ ಶೀತಲ ಕೇಂದ್ರ ನಿರ್ಮಾಣ ಮಾಡಲಾಗುವುದು. ಹಾಗೆಯೇ ಆನೇಕಲ್ನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಹಾಲು ಸಂಸ್ಕರಣೆ ಮತ್ತು ಪ್ಯಾಕಿಂಗ್ ಘಟಕ ನಿರ್ಮಿಸಲಾಗುವುದು~ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ಹಾಗೂ ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ತನ್ನ ವ್ಯಾಪ್ತಿಯಲ್ಲಿನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ 2.60 ರೂಪಾಯಿ ನೀಡುವ ಮೂಲಕ ಸಂಕ್ರಾಂತಿ ಉಡುಗೊರೆ ನೀಡಿದೆ. ಇದು 16ರಿಂದ ಜಾರಿಯಾಗಲಿದೆ.<br /> <br /> ನಗರದ ಡಾ.ಎಂ.ಎಚ್. ಮರಿಗೌಡ ರಸ್ತೆಯಲ್ಲಿರುವ ಒಕ್ಕೂಟದ ಆವರಣದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ದಿಬ್ಬೂರು ಜಯಣ್ಣ, `ಹಾಲು ಉತ್ಪಾದಕರಿಗೆ ಸಂಕ್ರಾಂತಿ ಉಡುಗೊರೆಯಾಗಿ ಪ್ರತಿ ಲೀಟರ್ಗೆ 2.60 ರೂಪಾಯಿ ನೀಡಲು ಆಡಳಿತ ಮಂಡಲಿ ಸಭೆಯಲ್ಲಿ ನಿರ್ಧರಿಸಲಾಗಿದೆ~ ಎಂದರು.<br /> <br /> `ಪಶು ಆಹಾರದ ಬೆಲೆ ಏರಿಕೆಯಾಗಿರುವುದರಿಂದ ರೈತರಿಗೆ ತೀವ್ರ ಹೊರೆಯಾಗುತ್ತಿತ್ತು. ಇದೀಗ ಹಾಲಿನ ದರ ಪ್ರತಿ ಲೀಟರ್ಗೆ ಮೂರು ರೂಪಾಯಿ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಅನುಕೂಲವಾಗಲಿದೆ~ ಎಂದರು.<br /> <br /> ಒಕ್ಕೂಟದ ನಿರ್ದೇಶಕ ಮಂಜುನಾಥ್, `ಹಾಲಿನ ದರದಲ್ಲಿ ಏರಿಕೆಯಾಗಿರುವ ಮೂರು ರೂಪಾಯಿಯಲ್ಲಿ 2.60 ರೂಪಾಯಿಯನ್ನು ರೈತರಿಗೆ ನೀಡಲಾಗುವುದು. ಪೆಟ್ರೋಲ್, ಡೀಸೆಲ್ ದರ ಏರಿಕೆ, ಸಂಸ್ಕರಣೆ ಶುಲ್ಕ, ಪ್ಯಾಕಿಂಗ್ ಶುಲ್ಕ ಹೆಚ್ಚಳ, ನೌಕರರು- ಅಧಿಕಾರಿಗಳಿಗೆ ಬಡ್ತಿ ನೀಡಿರುವುದರಿಂದ ಉಳಿದ 40 ಪೈಸೆಯನ್ನು ಆಡಳಿತ ವೆಚ್ಚಗಳಿಗೆ ಬಳಸಲಾಗುವುದು~ ಎಂದರು.<br /> <br /> `ಬೆಂಗಳೂರು ಡೇರಿ ವತಿಯಿಂದ ಈವರೆಗೆ ರೈತರಿಗೆ ಪ್ರತಿ ಲೀಟರ್ ಹಾಲಿಗೆ 18 ರೂಪಾಯಿ ನೀಡಲಾಗುತ್ತಿತ್ತು. ಇದೇ 16ರ ನಂತರ ಪ್ರತಿ ಲೀಟರ್ಗೆ ರೂ 20.60ನೀಡಲಾಗುವುದು. <br /> ತುಮಕೂರಿನಲ್ಲಿ ರೂ 20, ಕೋಲಾರದಲ್ಲಿ ರೂ 20.40, ಮಂಡ್ಯದಲ್ಲಿ 20.50 ರೂಪಾಯಿ ನೀಡಲಾಗುತ್ತಿದೆ~ ಎಂದು ಹೇಳಿದರು.<br /> <br /> 10.25 ಲಕ್ಷಕ್ಕೆ ಏರಿಕೆಯಾಗುವ ನಿರೀಕ್ಷೆ: ಬೆಂಗಳೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ವಿ. ಲಕ್ಷ್ಮಣರೆಡ್ಡಿ, `ಒಕ್ಕೂಟಕ್ಕೆ ನಿತ್ಯ ಸರಾಸರಿ 9.50 ಲಕ್ಷ ಕೆ.ಜಿ. ಹಾಲು ಪೂರೈಕೆಯಾಗುತ್ತಿದೆ. ಕಳೆದ ಸಾಲಿಗೆ ಹೋಲಿಸಿದರೆ ಸದ್ಯ ಒಂದು ಲಕ್ಷ ಕೆ.ಜಿ.ಗಿಂತಲೂ ಹೆಚ್ಚು ಹಾಲು ಸರಬರಾಜಾಗುತ್ತಿದೆ. ಮುಂದಿನ ಹಣಕಾಸು ವರ್ಷದಲ್ಲಿ 10.25 ಲಕ್ಷ ಕೆ.ಜಿ. ಹಾಲು ಪೂರೈಕೆಯಾಗುವ ನಿರೀಕ್ಷೆ ಇದೆ~ ಎಂದರು.<br /> <br /> `ಹಾಲು ಶೇಖರಣಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಹೊಸಕೋಟೆಯಲ್ಲಿ 24 ಕೋಟಿ ರೂಪಾಯಿ ವೆಚ್ಚದಲ್ಲಿ ಶೀತಲ ಕೇಂದ್ರ ನಿರ್ಮಾಣ ಮಾಡಲಾಗುವುದು. ಹಾಗೆಯೇ ಆನೇಕಲ್ನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಹಾಲು ಸಂಸ್ಕರಣೆ ಮತ್ತು ಪ್ಯಾಕಿಂಗ್ ಘಟಕ ನಿರ್ಮಿಸಲಾಗುವುದು~ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>