<p><strong>ಮುಳಬಾಗಲು: </strong>ಇಂಧನ ಬೆಲೆ ಏರಿಕೆಯಿಂದ ಹಾಲು ಉತ್ಪಾದನಾ ವೆಚ್ಚ ಹೆಚ್ಚಿದೆ. ಈ ಕಾರಣದಿಂದ ಹಾಲಿನ ದರ ಹೆಚ್ಚಿಸಬೇಕಾದ ಅನಿವಾರ್ಯತೆ ಇದೆ ಎಂದು ಕೋಮುಲ್ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ತಿಳಿಸಿದ್ದಾರೆ.<br /> <br /> ತಾಲ್ಲೂಕಿನ ಬೈರಕೂರು ಗ್ರಾಮದಲ್ಲಿ ಬುಧವಾರ ನಡೆದ ಬೈರಕೂರು ಮತ್ತು ನಂಗಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳ ಸಮಾವೇಶದಲ್ಲಿ ಮಾತನಾಡಿದರು. <br /> <br /> ಕೋಲಾರ ಹಾಲು ಒಕ್ಕೂಟದಲ್ಲಿ ಶೇ.30 ರಷ್ಟು ನಷ್ಟವಾಗುತ್ತಿದೆ. ಗುಣಮಟ್ಟದ ಹಾಲು ಪೂರೈಸದಿದ್ದಲ್ಲಿ ಸಹಕಾರ ಸಂಘ ಮುಚ್ಚಬೇಕಾಗಬಹುದು ಎಂದು ಎಚ್ಚರಿಸಿದರು. <br /> <br /> ಈಚೆಗೆ ನಿಧನರಾದ ಹಾಲು ಉತ್ಪಾದಕರ ಅವಲಂಭಿತರಿಗೆ ತಲಾ ಐದು ಸಾವಿರ ರೂಪಾಯಿ ನೀಡಿದರು.<br /> <br /> ಕೋಮುಲ್ ಉಪ ವ್ಯವಸ್ಥಾಪಕ ಡಾ.ಪುಣ್ಯಕೋಟಿ, ಶ್ರೀರಾಮರೆಡ್ಡಿ, ವಿಸ್ತರಣಾಧಿಕಾರಿಗಳಾದ ಆನಂದ್, ಮುರಳಿನಾಥ್, ನರಸಿಂಹರೆಡ್ಡಿ, ಇಫ್ಕೋ ಕಂಪನಿಯ ಮೋಹನ್, ಶ್ರೀರಾಮ್.ಕೃಷಿ ಅಧಿಕಾರಿ ಜಿತೇಂದ್ರ. ನಾಗರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಲು: </strong>ಇಂಧನ ಬೆಲೆ ಏರಿಕೆಯಿಂದ ಹಾಲು ಉತ್ಪಾದನಾ ವೆಚ್ಚ ಹೆಚ್ಚಿದೆ. ಈ ಕಾರಣದಿಂದ ಹಾಲಿನ ದರ ಹೆಚ್ಚಿಸಬೇಕಾದ ಅನಿವಾರ್ಯತೆ ಇದೆ ಎಂದು ಕೋಮುಲ್ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ತಿಳಿಸಿದ್ದಾರೆ.<br /> <br /> ತಾಲ್ಲೂಕಿನ ಬೈರಕೂರು ಗ್ರಾಮದಲ್ಲಿ ಬುಧವಾರ ನಡೆದ ಬೈರಕೂರು ಮತ್ತು ನಂಗಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳ ಸಮಾವೇಶದಲ್ಲಿ ಮಾತನಾಡಿದರು. <br /> <br /> ಕೋಲಾರ ಹಾಲು ಒಕ್ಕೂಟದಲ್ಲಿ ಶೇ.30 ರಷ್ಟು ನಷ್ಟವಾಗುತ್ತಿದೆ. ಗುಣಮಟ್ಟದ ಹಾಲು ಪೂರೈಸದಿದ್ದಲ್ಲಿ ಸಹಕಾರ ಸಂಘ ಮುಚ್ಚಬೇಕಾಗಬಹುದು ಎಂದು ಎಚ್ಚರಿಸಿದರು. <br /> <br /> ಈಚೆಗೆ ನಿಧನರಾದ ಹಾಲು ಉತ್ಪಾದಕರ ಅವಲಂಭಿತರಿಗೆ ತಲಾ ಐದು ಸಾವಿರ ರೂಪಾಯಿ ನೀಡಿದರು.<br /> <br /> ಕೋಮುಲ್ ಉಪ ವ್ಯವಸ್ಥಾಪಕ ಡಾ.ಪುಣ್ಯಕೋಟಿ, ಶ್ರೀರಾಮರೆಡ್ಡಿ, ವಿಸ್ತರಣಾಧಿಕಾರಿಗಳಾದ ಆನಂದ್, ಮುರಳಿನಾಥ್, ನರಸಿಂಹರೆಡ್ಡಿ, ಇಫ್ಕೋ ಕಂಪನಿಯ ಮೋಹನ್, ಶ್ರೀರಾಮ್.ಕೃಷಿ ಅಧಿಕಾರಿ ಜಿತೇಂದ್ರ. ನಾಗರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>