<p><strong>ಹಾವೇರಿ:</strong> ಹಿರಿಯ ಬಂಡಾಯ ಸಾಹಿತಿ ಚಂದ್ರಶೇಖರ ಪಾಟೀಲ ಅವರು ಕನ್ನಡ ಪಕ್ಷದಿಂದ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.<br /> <br /> ‘ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಹತ್ತಿಮತ್ತೂರು ಗ್ರಾಮದವನಾದ ನಾನು, ವಿದ್ಯಾಭ್ಯಾಸ, ಸಾಹಿತ್ಯ ಕೃಷಿ ಆರಂಭಿಸಿದ್ದು ತವರು ಜಿಲ್ಲೆಯಿಂದ. ಅದೇ ಕಾರಣಕ್ಕಾಗಿ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ’ ಎಂದು ಚಂದ್ರಶೇಖರ ಪಾಟೀಲ ಅವರು ತಿಳಿಸಿದ್ದಾರೆ.<br /> <br /> ಬೆಂಗಳೂರು ವರದಿ: ‘ರಾಜ್ಯದ ಜನರಿಗೆ ಪ್ರಬಲ ಪ್ರಾದೇಶಿಕ ಪಕ್ಷದ ಅಗತ್ಯವಿದೆ. ಲೋಕಸಭೆಯಲ್ಲಿ ಕನ್ನಡದ ಕುರಿತು ಮಾತನಾಡಲು ಒಂದು ಪ್ರಬಲವಾದ ಧ್ವನಿಯು ಬೇಕಾಗಿದೆ’ ಎಂದು ‘ಕನ್ನಡ ಪಕ್ಷ– ಕರ್ನಾಟಕ’ದ ಅಧ್ಯಕ್ಷ ಪಿ.ಪುರುಷೋತ್ತಮ್ ಹೇಳಿದರು.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕನ್ನಡಕ್ಕೆ ರಾಜಕೀಯ ಶಕ್ತಿಯಿಲ್ಲದಿರುವುದರಿಂದ ರಾಜ್ಯಕ್ಕೆ ಎಲ್ಲ ನೆಲೆಗಳಲ್ಲಿ ನಿರಂತರ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಪಕ್ಷವು ಲೋಕಸಭಾ ಚುನಾವಣೆಯ ಕಣಕ್ಕಿಳಿಯಲು ನಿರ್ಧರಿಸಿದೆ’ ಎಂದರು.<br /> <br /> ‘ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಇಂದು ಅನಿವಾರ್ಯವಾಗಿವೆ. ಬಲಿಷ್ಠ ಕೇಂದ್ರ ಸರ್ಕಾರ ಮತ್ತು ದುರ್ಬಲ ರಾಜ್ಯ ಸರ್ಕಾರದಿಂದ ಪ್ರಾದೇಶಿಕ ಸಮಸ್ಯೆಗಳಿಗೆ ಪರಿಹಾರವಿಲ್ಲ. ಇದರಿಂದ ರಾಜ್ಯದ ಜನರಿಗೆ ಪ್ರಬಲವಾದ ರಾಜಕೀಯ ಪಕ್ಷದ ಅಗತ್ಯವಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಹಿರಿಯ ಬಂಡಾಯ ಸಾಹಿತಿ ಚಂದ್ರಶೇಖರ ಪಾಟೀಲ ಅವರು ಕನ್ನಡ ಪಕ್ಷದಿಂದ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.<br /> <br /> ‘ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಹತ್ತಿಮತ್ತೂರು ಗ್ರಾಮದವನಾದ ನಾನು, ವಿದ್ಯಾಭ್ಯಾಸ, ಸಾಹಿತ್ಯ ಕೃಷಿ ಆರಂಭಿಸಿದ್ದು ತವರು ಜಿಲ್ಲೆಯಿಂದ. ಅದೇ ಕಾರಣಕ್ಕಾಗಿ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ’ ಎಂದು ಚಂದ್ರಶೇಖರ ಪಾಟೀಲ ಅವರು ತಿಳಿಸಿದ್ದಾರೆ.<br /> <br /> ಬೆಂಗಳೂರು ವರದಿ: ‘ರಾಜ್ಯದ ಜನರಿಗೆ ಪ್ರಬಲ ಪ್ರಾದೇಶಿಕ ಪಕ್ಷದ ಅಗತ್ಯವಿದೆ. ಲೋಕಸಭೆಯಲ್ಲಿ ಕನ್ನಡದ ಕುರಿತು ಮಾತನಾಡಲು ಒಂದು ಪ್ರಬಲವಾದ ಧ್ವನಿಯು ಬೇಕಾಗಿದೆ’ ಎಂದು ‘ಕನ್ನಡ ಪಕ್ಷ– ಕರ್ನಾಟಕ’ದ ಅಧ್ಯಕ್ಷ ಪಿ.ಪುರುಷೋತ್ತಮ್ ಹೇಳಿದರು.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕನ್ನಡಕ್ಕೆ ರಾಜಕೀಯ ಶಕ್ತಿಯಿಲ್ಲದಿರುವುದರಿಂದ ರಾಜ್ಯಕ್ಕೆ ಎಲ್ಲ ನೆಲೆಗಳಲ್ಲಿ ನಿರಂತರ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ಪಕ್ಷವು ಲೋಕಸಭಾ ಚುನಾವಣೆಯ ಕಣಕ್ಕಿಳಿಯಲು ನಿರ್ಧರಿಸಿದೆ’ ಎಂದರು.<br /> <br /> ‘ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಇಂದು ಅನಿವಾರ್ಯವಾಗಿವೆ. ಬಲಿಷ್ಠ ಕೇಂದ್ರ ಸರ್ಕಾರ ಮತ್ತು ದುರ್ಬಲ ರಾಜ್ಯ ಸರ್ಕಾರದಿಂದ ಪ್ರಾದೇಶಿಕ ಸಮಸ್ಯೆಗಳಿಗೆ ಪರಿಹಾರವಿಲ್ಲ. ಇದರಿಂದ ರಾಜ್ಯದ ಜನರಿಗೆ ಪ್ರಬಲವಾದ ರಾಜಕೀಯ ಪಕ್ಷದ ಅಗತ್ಯವಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>