<p>ಹಾಸನ: ತಾಲ್ಲೂಕಿನ ಎರಡು ಕಡೆ ಭಾನುವಾರ ಅಗ್ನಿ ದುರಂತ ಸಂಭವಿಸಿದೆ. ಒಂದೆಡೆ ಅರಣ್ಯ ಇಲಾಖೆಗೆ ಸೇರಿದ ನೀಲಗಿರಿ ತೋಪಿಗೆ ಬೆಂಕಿ ಬಿದ್ದಿದ್ದರೆ, ಇನ್ನೊಂದೆಡೆ ಖಾಸಗಿ ವ್ಯಕ್ತಿಗೆ ಸೇರಿದ ಕೋಳಿ ಫಾರಂನ ಹಳೆಯ ಕಟ್ಟಡ ಹಾಗೂ ಸುಮಾರು 15 ತೆಂಗಿನ ಮರಗಳು ಹಾನಿಗೊಳಗಾಗಿವೆ.<br /> <br /> ಶಾಂತಿಗ್ರಾಮ ಸಮೀಪದ ಹೊಂಗೆರೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ನೀಲಗಿರಿ ತೋಪಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ತೋಪಿನಲ್ಲಿ ಒಣಗಿದ ನೀಲಗಿರಿ ಎಲೆಗಳು ಇದ್ದ ಕಾರಣ ಬೆಂಕಿ ವೇಗವಾಗಿ ಪಸರಿಸಿದೆ. ಸ್ಥಳದಲ್ಲಿದ್ದ ಅರಣ್ಯ ಇಲಾಖೆಯ ವಾಚರ್ ಬೆಂಕಿ ಆರಿಸುವ ಯತ್ನ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. <br /> <br /> `ಹೊಂಗೆರೆಯಲ್ಲಿ ಅರಣ್ಯಕ್ಕೆ ಬೆಂಕಿ ಬಿದ್ದಿಲ್ಲ, ಅರಣ್ಯದ ಅಂಚಿನಲ್ಲಿ ಇರುವ ಗಿಡಗಂಟಿಗಳಿಗೆ ಹಚ್ಚಿದ ಬೆಂಕಿ ಹಬ್ಬಿ ಒಣಗಿದ ಎಲೆಗಳು ಸುಟ್ಟಿವೆ. ದೊಡ್ಡ ಹಾನಿಯೇನೂ ಸಂಭವಿಸಿಲ್ಲ~ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಇತ್ತ ಗಾಡೇನಹಳ್ಳಿಯಲ್ಲೂ ಬೆಂಕಿ ಆಕಸ್ಮಿಕ ಸಂಭವಿಸಿ ಗಾಡ್ವಿನ್ ಕಿರಣ್ ಅವರಿಗೆ ಸೇರಿದ ಸೊತ್ತು ನಾಶವಾಗಿ ಸಾಕಷ್ಟು ಹಾನಿ ಉಂಟಾಗಿದೆ. ಎರಡೂ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ತಾಲ್ಲೂಕಿನ ಎರಡು ಕಡೆ ಭಾನುವಾರ ಅಗ್ನಿ ದುರಂತ ಸಂಭವಿಸಿದೆ. ಒಂದೆಡೆ ಅರಣ್ಯ ಇಲಾಖೆಗೆ ಸೇರಿದ ನೀಲಗಿರಿ ತೋಪಿಗೆ ಬೆಂಕಿ ಬಿದ್ದಿದ್ದರೆ, ಇನ್ನೊಂದೆಡೆ ಖಾಸಗಿ ವ್ಯಕ್ತಿಗೆ ಸೇರಿದ ಕೋಳಿ ಫಾರಂನ ಹಳೆಯ ಕಟ್ಟಡ ಹಾಗೂ ಸುಮಾರು 15 ತೆಂಗಿನ ಮರಗಳು ಹಾನಿಗೊಳಗಾಗಿವೆ.<br /> <br /> ಶಾಂತಿಗ್ರಾಮ ಸಮೀಪದ ಹೊಂಗೆರೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ನೀಲಗಿರಿ ತೋಪಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ತೋಪಿನಲ್ಲಿ ಒಣಗಿದ ನೀಲಗಿರಿ ಎಲೆಗಳು ಇದ್ದ ಕಾರಣ ಬೆಂಕಿ ವೇಗವಾಗಿ ಪಸರಿಸಿದೆ. ಸ್ಥಳದಲ್ಲಿದ್ದ ಅರಣ್ಯ ಇಲಾಖೆಯ ವಾಚರ್ ಬೆಂಕಿ ಆರಿಸುವ ಯತ್ನ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. <br /> <br /> `ಹೊಂಗೆರೆಯಲ್ಲಿ ಅರಣ್ಯಕ್ಕೆ ಬೆಂಕಿ ಬಿದ್ದಿಲ್ಲ, ಅರಣ್ಯದ ಅಂಚಿನಲ್ಲಿ ಇರುವ ಗಿಡಗಂಟಿಗಳಿಗೆ ಹಚ್ಚಿದ ಬೆಂಕಿ ಹಬ್ಬಿ ಒಣಗಿದ ಎಲೆಗಳು ಸುಟ್ಟಿವೆ. ದೊಡ್ಡ ಹಾನಿಯೇನೂ ಸಂಭವಿಸಿಲ್ಲ~ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಇತ್ತ ಗಾಡೇನಹಳ್ಳಿಯಲ್ಲೂ ಬೆಂಕಿ ಆಕಸ್ಮಿಕ ಸಂಭವಿಸಿ ಗಾಡ್ವಿನ್ ಕಿರಣ್ ಅವರಿಗೆ ಸೇರಿದ ಸೊತ್ತು ನಾಶವಾಗಿ ಸಾಕಷ್ಟು ಹಾನಿ ಉಂಟಾಗಿದೆ. ಎರಡೂ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>