<p>ಹಾಸನ: ‘ಹಾಸನ- ಶ್ರವಣಬೆಳಗೊಳ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ. ಈ ಹಳಿಗಳ ತಪಾಸಣೆ ನಡೆಸಿ ಆರು ತಿಂಗಳಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರ ಪುನಃ ಆರಂಭಿಸಲಾಗುವುದು’ ಎಂದು ನೈರುತ್ಯ ರೈಲ್ವೆ ಮಹಾಪ್ರಬಂಧಕ ಕುಲದೀಪ ಚತುರ್ವೇದಿ ತಿಳಿಸಿದರು.<br /> <br /> ಹಾಸನ ರೈಲ್ವೆ ನಿಲ್ದಾಣದಲ್ಲಿ ನಿರ್ಮಿಸಿರುವ ನೂತನ ರೈಲ್ವೆ ವಿಶ್ರಾಂತಿ ಕೊಠಡಿಯನ್ನು ಮಂಗಳವಾರ ಉದ್ಘಾಟಿಸಿದ ಬಳಿಕ ಪತ್ರಕರ್ತರೊಡನೆ ಮಾತನಾಡಿದ ಅವರು ‘ಆರು ತಿಂಗಳಲ್ಲಿ ಈ ಮಾರ್ಗದಲ್ಲಿ ಪ್ರತಿ ನಿತ್ಯ ರೈಲು ಸಂಚಾರ ಆರಂಭವಾಗಲಿದೆ’ ಎಂದರು.<br /> <br /> ಹಾಸನ- ಶ್ರವಣ ಬೆಳಗೊಳ ಮಧ್ಯೆ ಕಳೆದ ಮಸ್ತಕಾಭಿಷೇಕದ ಸಂದರ್ಭದಲ್ಲಿ ರೈಲು ಸಂಚಾರ ಆರಂಭವಾಗಿತ್ತು. ನಂತರದ ದಿನಗಳಲ್ಲಿ ವಿವಿಧ ಕಾರಣಗಳಿಂದಾಗಿ ಅದು ಸ್ಥಗಿತಗೊಂಡಿತ್ತು. ಹಳಿಗಳು ಈಗಲೂ ಸುಸ್ಥಿತಿಯಲ್ಲಿವೆ ಎಂದು ತಿಳಿಸಿದರು.<br /> <br /> ‘ಮಂಗಳೂರು - ಶ್ರವಣಬೆಳಗೊಳ- ಬೆಂಗಳೂರು ರೈಲು ಮಾರ್ಗದ ಯೋಜನೆಗೆ ಕುಣಿಗಲ್ ಸಮೀಪ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ತೊಂದರೆ ಉಂಟಾಗಿದೆ. ಸರ್ಕಾರ ಭೂಸ್ವಾಧೀನ ಮಾಡಿ ಕೊಟ್ಟ ಬಳಿಕ ರೈಲ್ವೆ ಇಲಾಖೆ ಕಾಮಗಾರಿ ಮುಂದುವರಿಸಲು ಸಾಧ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ‘ಹಾಸನ- ಶ್ರವಣಬೆಳಗೊಳ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ. ಈ ಹಳಿಗಳ ತಪಾಸಣೆ ನಡೆಸಿ ಆರು ತಿಂಗಳಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರ ಪುನಃ ಆರಂಭಿಸಲಾಗುವುದು’ ಎಂದು ನೈರುತ್ಯ ರೈಲ್ವೆ ಮಹಾಪ್ರಬಂಧಕ ಕುಲದೀಪ ಚತುರ್ವೇದಿ ತಿಳಿಸಿದರು.<br /> <br /> ಹಾಸನ ರೈಲ್ವೆ ನಿಲ್ದಾಣದಲ್ಲಿ ನಿರ್ಮಿಸಿರುವ ನೂತನ ರೈಲ್ವೆ ವಿಶ್ರಾಂತಿ ಕೊಠಡಿಯನ್ನು ಮಂಗಳವಾರ ಉದ್ಘಾಟಿಸಿದ ಬಳಿಕ ಪತ್ರಕರ್ತರೊಡನೆ ಮಾತನಾಡಿದ ಅವರು ‘ಆರು ತಿಂಗಳಲ್ಲಿ ಈ ಮಾರ್ಗದಲ್ಲಿ ಪ್ರತಿ ನಿತ್ಯ ರೈಲು ಸಂಚಾರ ಆರಂಭವಾಗಲಿದೆ’ ಎಂದರು.<br /> <br /> ಹಾಸನ- ಶ್ರವಣ ಬೆಳಗೊಳ ಮಧ್ಯೆ ಕಳೆದ ಮಸ್ತಕಾಭಿಷೇಕದ ಸಂದರ್ಭದಲ್ಲಿ ರೈಲು ಸಂಚಾರ ಆರಂಭವಾಗಿತ್ತು. ನಂತರದ ದಿನಗಳಲ್ಲಿ ವಿವಿಧ ಕಾರಣಗಳಿಂದಾಗಿ ಅದು ಸ್ಥಗಿತಗೊಂಡಿತ್ತು. ಹಳಿಗಳು ಈಗಲೂ ಸುಸ್ಥಿತಿಯಲ್ಲಿವೆ ಎಂದು ತಿಳಿಸಿದರು.<br /> <br /> ‘ಮಂಗಳೂರು - ಶ್ರವಣಬೆಳಗೊಳ- ಬೆಂಗಳೂರು ರೈಲು ಮಾರ್ಗದ ಯೋಜನೆಗೆ ಕುಣಿಗಲ್ ಸಮೀಪ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ತೊಂದರೆ ಉಂಟಾಗಿದೆ. ಸರ್ಕಾರ ಭೂಸ್ವಾಧೀನ ಮಾಡಿ ಕೊಟ್ಟ ಬಳಿಕ ರೈಲ್ವೆ ಇಲಾಖೆ ಕಾಮಗಾರಿ ಮುಂದುವರಿಸಲು ಸಾಧ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>